AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಾಕ್ಸಿನ್ ಲಸಿಕೆ ಪಡೆದವರು ಒಮಾನ್​​ಗೆ ಪ್ರಯಾಣಿಸಬಹುದು, ಕ್ವಾರಂಟೈನ್​​ನಲ್ಲಿರುವ ಅಗತ್ಯವಿಲ್ಲ

Covaxin ಭಾರತೀಯ ರಾಯಭಾರ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, "ಅಂದಾಜು ಆಗಮನದ ದಿನಾಂಕಕ್ಕಿಂತ ಕನಿಷ್ಠ 14 ದಿನಗಳ ಮೊದಲು ಎರಡು ಡೋಸ್ ಕೋವಾಕ್ಸಿನ್ ಅನ್ನು ಸ್ವೀಕರಿಸಿದ ಭಾರತದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್ ಅಗತ್ಯವಿಲ್ಲದೇ ಒಮಾನ್‌ಗೆ ಪ್ರಯಾಣಿಸಲು ಸಾಧ್ಯವಾಗುತ್ತದೆ.

ಕೊವಾಕ್ಸಿನ್ ಲಸಿಕೆ ಪಡೆದವರು ಒಮಾನ್​​ಗೆ ಪ್ರಯಾಣಿಸಬಹುದು, ಕ್ವಾರಂಟೈನ್​​ನಲ್ಲಿರುವ ಅಗತ್ಯವಿಲ್ಲ
ಕೋವಾಕ್ಸಿನ್ ಲಸಿಕೆ
TV9 Web
| Edited By: |

Updated on: Oct 29, 2021 | 10:30 AM

Share

ದೆಹಲಿ: ಒಮಾನ್ ಸರ್ಕಾರವು ಬುಧವಾರ ಭಾರತ್ ಬಯೋಟೆಕ್‌ನ ಕೊವಾಕ್ಸಿನ್  ಲಸಿಕೆ ಪಡೆದ ಪ್ರಯಾಣಿಕರು ದೇಶಕ್ಕೆ ಪ್ರಯಾಣಿಸಲು ಅನುಮತಿಸಿದೆ. ಅಂದಾಜು ಆಗಮನದ ದಿನಾಂಕಕ್ಕಿಂತ ಕನಿಷ್ಠ 14 ದಿನಗಳ ಮೊದಲು ಕೊವಾಕ್ಸಿನ್‌ನ ಎರಡು ಡೋಸ್‌ಗಳನ್ನು ಪಡೆದ ಭಾರತದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್‌ನ ಅಗತ್ಯವಿಲ್ಲದೆ ಒಮಾನ್‌ಗೆ ಪ್ರಯಾಣಿಸಬಹುದಾಗಿದೆ. ಆದಾಗ್ಯೂ, ಆಗಮನದ ಮುನ್ನ RT-PCR ಪರೀಕ್ಷೆಯಂತಹ ಎಲ್ಲಾ ಇತರ ಕೊವಿಡ್ ಸಂಬಂಧಿತ ಅವಶ್ಯಕತೆಗಳು/ಷರತ್ತುಗಳು ಅಂತಹ ಪ್ರಯಾಣಿಕರಿಗೆ ಅನ್ವಯಿಸುತ್ತವೆ. ಕೊವಾಕ್ಸಿನ್ ತೆಗೆದುಕೊಂಡ ಭಾರತೀಯರಿಗೆ ಈ ಅನುಮೋದನೆಯು ಒಮಾನ್‌ಗೆ ಪ್ರಯಾಣವನ್ನು ಸರಾಗಗೊಳಿಸುತ್ತದೆ. ಆಸ್ಟ್ರೆಜೆನೆಕಾ /ಕೋವಿಶೀಲ್ಡ್ (AstraZeneca/Covishield) ತೆಗೆದುಕೊಂಡ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲದೆ ಒಮಾನ್‌ಗೆ ಪ್ರಯಾಣಿಸಲು ಈಗಾಗಲೇ ಅನುಮತಿ ನೀಡಲಾಗಿದೆ. ಭಾರತೀಯ ರಾಯಭಾರ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, “ಅಂದಾಜು ಆಗಮನದ ದಿನಾಂಕಕ್ಕಿಂತ ಕನಿಷ್ಠ 14 ದಿನಗಳ ಮೊದಲು ಎರಡು ಡೋಸ್ ಕೋವಾಕ್ಸಿನ್ ಅನ್ನು ಸ್ವೀಕರಿಸಿದ ಭಾರತದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್ ಅಗತ್ಯವಿಲ್ಲದೇ ಒಮಾನ್‌ಗೆ ಪ್ರಯಾಣಿಸಲು ಸಾಧ್ಯವಾಗುತ್ತದೆ. ಆಗಮನಕ್ಕೆ ಮುನ್ನ RT-PCR ಪರೀಕ್ಷೆಯಂತಹ ಅವಶ್ಯಕತೆಗಳು/ಷರತ್ತುಗಳು ಅಂತಹ ಪ್ರಯಾಣಿಕರಿಗೆ ಅನ್ವಯಿಸುತ್ತವೆ.”

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಭಾರತದ ಮೊದಲ ಸ್ಥಳೀಯ ಕೊರೊನಾವೈರಸ್ ಲಸಿಕೆಯಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ (WHO) ಅಧಿಕೃತವಾಗಿ ಅನುಮೋದಿಸಲು ಲಸಿಕೆ ಇನ್ನೂ ಕಾಯುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಅವರು ಕೋವಾಕ್ಸಿನ್‌ಗಾಗಿ ತುರ್ತು ಬಳಕೆಯ ಪಟ್ಟಿಯನ್ನು (EUL) ಪರಿಗಣಿಸಲು ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಗುಂಪು ಅಕ್ಟೋಬರ್ 26 ರಂದು ಸಭೆಯನ್ನು ಆಯೋಜಿಸುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಜಿ20 ಶೃಂಗಸಭೆಗಾಗಿ ರೋಮ್​​ಗೆ ತೆರಳಿದ ನರೇಂದ್ರ ಮೋದಿ; ಪ್ರಧಾನಿಯಾದ ಬಳಿಕ ಇದು ಮೊದಲ ಭೇಟಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು