AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರ ಅಂಗಡಿಗಳನ್ನು ‘ಜನ್ ಪೋಷಣ್ ಕೇಂದ್ರಗಳಾಗಿ’ ಪರಿವರ್ತಿಸುವ ಪ್ರಾಯೋಗಿಕ ಯೋಜನೆಗೆ ಪ್ರಲ್ಹಾದ್ ಜೋಶಿ ಚಾಲನೆ

ಸರಿಸುಮಾರು 5.38 ಲಕ್ಷ ಎಫ್‌ಪಿಎಸ್‌ಗಳು ಭಾರತದಾದ್ಯಂತ ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆಯ ಯಶಸ್ವಿ ಅನುಷ್ಠಾನವು ಪಡಿತರ ಅಂಗಡಿ ಜಾಲದ ರಾಷ್ಟ್ರವ್ಯಾಪಿ ಪರಿವರ್ತನೆಗೆ ದಾರಿ ಮಾಡಿಕೊಡಬಹುದು. ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಶನ್ ಈ ಉಪಕ್ರಮವನ್ನು ಸ್ವಾಗತಿಸಿದ್ದು, ಇದು ಕಾರ್ಯಸಾಧ್ಯತೆಯ ಸಮಸ್ಯೆಗಳೊಂದಿಗೆ ಹೋರಾಡುತ್ತಿರುವ ಅಂಗಡಿ ಮಾಲೀಕರಿಗೆ "ದೊಡ್ಡ ಪರಿಹಾರ" ಎಂದು ಹೇಳಿದೆ.

ಪಡಿತರ ಅಂಗಡಿಗಳನ್ನು 'ಜನ್ ಪೋಷಣ್ ಕೇಂದ್ರಗಳಾಗಿ' ಪರಿವರ್ತಿಸುವ ಪ್ರಾಯೋಗಿಕ ಯೋಜನೆಗೆ ಪ್ರಲ್ಹಾದ್ ಜೋಶಿ ಚಾಲನೆ
ಜನ್ ಪೋಷಣ್ ಕೇಂದ್ರ ಪ್ರಾಯೋಗಿಕ ಯೋಜನೆಗೆ ಚಾಲನೆ
ರಶ್ಮಿ ಕಲ್ಲಕಟ್ಟ
|

Updated on: Aug 20, 2024 | 5:26 PM

Share

ದೆಹಲಿ ಆಗಸ್ಟ್ 20: ಆಹಾರ ಸಚಿವ ಪ್ರಲ್ಹಾದ್ ಜೋಶಿ (Pralhad Joshi)ಅವರು ಮಂಗಳವಾರ ಯುಪಿ, ಗುಜರಾತ್, ರಾಜಸ್ಥಾನ ಮತ್ತು ತೆಲಂಗಾಣದಾದ್ಯಂತ 60 ನ್ಯಾಯಬೆಲೆ ಅಂಗಡಿಗಳನ್ನು (FPS) ‘ಜನ್ ಪೋಷಣ್ ಕೇಂದ್ರ’ಗಳಾಗಿ (Jan Poshan Kendras) ಪರಿವರ್ತಿಸುವ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಯೋಜನೆಯು ಪಡಿತರ ಅಂಗಡಿಗಳ ಕಾರ್ಯಸಾಧ್ಯತೆ ಮತ್ತು ಪೌಷ್ಟಿಕಾಂಶದ ಪ್ರವೇಶವನ್ನು ಸುಧಾರಿಸುತ್ತದೆ. ಈ ಯೋಜನೆಗಳು FPS ವಿತರಕರು ಸಬ್ಸಿಡಿ ಧಾನ್ಯಗಳನ್ನು ಮೀರಿ ತಮ್ಮ ದಾಸ್ತಾನುಗಳನ್ನು ವೈವಿಧ್ಯಗೊಳಿಸಲು ಅನುಮತಿಸುತ್ತದೆ. ಪರಿಷ್ಕರಿಸಿದ ಅಂಗಡಿಗಳು ಈಗ ರಾಗಿ, ಬೇಳೆಕಾಳುಗಳು, ಡೈರಿ ಉತ್ಪನ್ನಗಳು ಮತ್ತು ದೈನಂದಿನ ಅಗತ್ಯ ವಸ್ತುಗಳನ್ನು ಸಂಗ್ರಹಿಸಬಹುದು, ಇದು ವಿತರಕರಿಗೆ ಹೊಸ ಆದಾಯದ ಮಾರ್ಗಗಳನ್ನು ಕಲ್ಪಿಸುತ್ತದೆ.

“ಈ ಬದಲಾವಣೆಯು ವಿನ್-ವಿನ್ ಆಗಿರುತ್ತದೆ ಎಂದು ಸಮಾರಂಭದಲ್ಲಿ ಮಾತನಾಡಿದ ಜೋಶಿ ಹೇಳಿದ್ದಾರೆ. ಪ್ರಸ್ತುತ ಪಡಿತರ ಅಂಗಡಿಗಳ ಅಸಮರ್ಥತೆಯನ್ನು ಎತ್ತಿ ತೋರಿಸಿದ ಜೋಶಿ “ಕೆಲವು ಪ್ರದೇಶಗಳಲ್ಲಿ, FPS ಕೇವಲ 8-9 ದಿನಗಳವರೆಗೆ ತೆರೆದಿರುತ್ತದೆ, ಆದರೆ ಇತರರು ಪ್ರತಿ ಮೂರು ತಿಂಗಳಿಗೊಮ್ಮೆ ಮಾತ್ರ ಕಾರ್ಯನಿರ್ವಹಿಸುತ್ತಾರೆ. ಉಳಿದ ಸಮಯದಲ್ಲಿ, ಈ ಅಂಗಡಿಗಳು ಮುಚ್ಚಲ್ಪಡುತ್ತವೆ ಎಂದಿದ್ದಾರೆ.

ಎಫ್‌ಪಿಎಸ್ ಡೀಲರ್‌ಗಳಿಗೆ ಅಸ್ತಿತ್ವದಲ್ಲಿರುವ ಕಮಿಷನ್ ರಚನೆಯು ಅಸಮರ್ಪಕವಾಗಿದೆ ಎಂದು ಒತ್ತಿ ಹೇಳಿದ ಸಟಿವರು, ಅಂಗಡಿ ಸ್ಥಳ ಮತ್ತು ಸಿಬ್ಬಂದಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪರ್ಯಾಯ ವಿಧಾನಗಳ ಅಗತ್ಯವಿದೆ ಎಂದಿದ್ದಾರೆ.

ಇದರ ಜತೆಗೆ ‘ಮೇರಾ ರೇಷನ್’ ಅಪ್ಲಿಕೇಶನ್‌ನ ನವೀಕರಿಸಿದ ಆವೃತ್ತಿಯನ್ನು ಜೋಶಿ ಪರಿಚಯಿಸಿದರು. ಗುಣಮಟ್ಟದ ಕೈಪಿಡಿ, ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಒಪ್ಪಂದದ ಕೈಪಿಡಿ, ಡಿಜಿಟಲ್ ಗುಣಮಟ್ಟ ನಿರ್ವಹಣಾ ವ್ಯವಸ್ಥೆ ಮತ್ತು ಲ್ಯಾಬ್‌ಗಳ NABL ಮಾನ್ಯತೆಯನ್ನು ಅವರು ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ ಎಫ್‌ಪಿಎಸ್ ಡೀಲರ್‌ಗಳಿಗೆ ಸಾಲವನ್ನು ಸುಲಭಗೊಳಿಸಲು ಮತ್ತು ಉದ್ಯಮಶೀಲತಾ ತರಬೇತಿಯನ್ನು ನೀಡಲು ಕೌಶಲ್ಯ ಅಭಿವೃದ್ಧಿ ಸಚಿವಾಲಯದೊಂದಿಗೆ ಪಾಲುದಾರಿಕೆಯನ್ನು ಒದಗಿಸಲು SIDBI ಯೊಂದಿಗೆ ಸಹಯೋಗದ ಪ್ರಯತ್ನಗಳನ್ನು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಎತ್ತಿ ತೋರಿಸಿದರು.

ಸರಿಸುಮಾರು 5.38 ಲಕ್ಷ ಎಫ್‌ಪಿಎಸ್‌ಗಳು ಭಾರತದಾದ್ಯಂತ ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆಯ ಯಶಸ್ವಿ ಅನುಷ್ಠಾನವು ಪಡಿತರ ಅಂಗಡಿ ಜಾಲದ ರಾಷ್ಟ್ರವ್ಯಾಪಿ ಪರಿವರ್ತನೆಗೆ ದಾರಿ ಮಾಡಿಕೊಡಬಹುದು. ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಶನ್ ಈ ಉಪಕ್ರಮವನ್ನು ಸ್ವಾಗತಿಸಿದ್ದು, ಇದು ಕಾರ್ಯಸಾಧ್ಯತೆಯ ಸಮಸ್ಯೆಗಳೊಂದಿಗೆ ಹೋರಾಡುತ್ತಿರುವ ಅಂಗಡಿ ಮಾಲೀಕರಿಗೆ “ದೊಡ್ಡ ಪರಿಹಾರ” ಎಂದು ಹೇಳಿದೆ.

ಯೋಜನೆಗೆ ಚಾಲನೆ ನೀಡುವ ಸಮಾರಂಭದಲ್ಲಿ ಹಿರಿಯ ಎಫ್‌ಸಿಐ ಅಧಿಕಾರಿಗಳು, ರಾಜ್ಯ ಆಹಾರ ಕಾರ್ಯದರ್ಶಿಗಳು ಮತ್ತು ವಿಶ್ವ ಆಹಾರ ಕಾರ್ಯಕ್ರಮದ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಾಯೋಗಿಕ ಯೋಜನೆ ಆರಂಭವಾಗುತ್ತಿದ್ದಂತೆ ಪಡಿತರ ಅಂಗಡಿಗಳನ್ನು ಪೌಷ್ಠಿಕಾಂಶದ ಕೇಂದ್ರಗಳಾಗಿ ಮರು-ಕಲ್ಪನೆ ಮಾಡುವುದು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಕರು ಮತ್ತು ಫಲಾನುಭವಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಬೇಕಾಗಿದೆ.

ಇದನ್ನೂ ಓದಿ: Hema Committee Report: ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ; ಹೇಮಾ ಸಮಿತಿ ವರದಿಯಲ್ಲೇನಿದೆ?

ಏತನ್ಮಧ್ಯೆ, ಪ್ರತ್ಯೇಕ ಹೇಳಿಕೆಯಲ್ಲಿ eB2B ಪ್ಲಾಟ್‌ಫಾರ್ಮ್ ಉಡಾನ್ ಎಫ್‌ಪಿಎಸ್ ಡೀಲರ್‌ಗಳ ಆದಾಯವನ್ನು ಹೆಚ್ಚಿಸಲು ಮತ್ತು ಫಲಾನುಭವಿಗಳಿಗೆ ಪೌಷ್ಟಿಕಾಂಶದ ಫಲಿತಾಂಶಗಳನ್ನು ಸುಧಾರಿಸಲು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಮತ್ತು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ (SIDBI) ನೊಂದಿಗೆ ಪಾಲುದಾರಿಕೆ ಹೊಂದಿದೆ ಎಂದು ಹೇಳಿದೆ. “ಜನ್ ಪೋಷಣ್ ಕೇಂದ್ರವನ್ನು ಆಧುನೀಕರಿಸುವ ಮೂಲಕ ಮತ್ತು ವೈವಿಧ್ಯಮಯ ಉತ್ಪನ್ನಗಳಿಗೆ ತಮ್ಮ ಪ್ರವೇಶವನ್ನು ವಿಸ್ತರಿಸುವ ಮೂಲಕ, ಈ ಉಪಕ್ರಮವು ಈ ಅಗತ್ಯ ಸಮುದಾಯದ ವ್ಯವಹಾರಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಪ್ರತಿಯೊಬ್ಬ ಭಾರತೀಯರು ಗುಣಮಟ್ಟದ ಮತ್ತು ಕೈಗೆಟುಕುವ ಪೌಷ್ಟಿಕಾಂಶದ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ವಿಶಾಲ ಗುರಿಗೆ ಕೊಡುಗೆ ನೀಡುತ್ತದೆ” ಎಂದು ಉಡಾನ್ ಸಹ ಸಂಸ್ಥಾಪಕ ಮತ್ತು ಸಿಇಒ ವೈಭವ್ ಗುಪ್ತಾ ಹೇಳಿದ್ದಾರೆ.

ಈ ಉಪಕ್ರಮದ ಭಾಗವಾಗಿ, ರಾಜಸ್ಥಾನ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಗುಜರಾತ್‌ನಾದ್ಯಂತ ಸುಮಾರು 60 FPS ಗುರುತಿಸಲಾಗಿದೆ, ಇದು SIDBI ನಿಂದ ಕ್ರೆಡಿಟ್ ಸೌಲಭ್ಯಗಳನ್ನು ಪಡೆಯುತ್ತದೆ. ಅದೇ ವೇಳೆ udaan ನಿಂದ ವಿವಿಧ ಖಾದ್ಯ ಮತ್ತು FMCG ವಿಭಾಗಗಳಲ್ಲಿ 3,500 ಕ್ಕೂ ಹೆಚ್ಚು ಉತ್ಪನ್ನಗಳನ್ನು ಪಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?