ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್ ವ್ಯವಸ್ಥೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಇನ್ನು ಕೆಲವು ಕಡೆಗಳಲ್ಲಂತೂ ಕೊರೊನಾ ರೋಗಿಗಳು ಆಸ್ಪತ್ರೆ ಎದುರಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  
ಪ್ರಾತಿನಿಧಿಕ ಚಿತ್ರ
Follow us
|

Updated on: May 08, 2021 | 4:24 PM

ನವದೆಹಲಿ: ನಿರಂತರವಾಗಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ವೈದ್ಯಕೀಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ಹೊತ್ತಲ್ಲಿ ಕೊರೊನಾ ರೋಗಿಗಳು ಕೊವಿಡ್​ ಕೇಂದ್ರಗಳಿಗೆ ದಾಖಲಾಗುವ ಸಂಬಂಧ ಇರುವ ರಾಷ್ಟ್ರೀಯ ನೀತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದೆ. ಈ ಹೊಸ ನೀತಿಯ ಅನ್ವಯ ಕೊವಿಡ್​-19 ಗೆ ಸಂಬಂಧಪಟ್ಟ ಯಾವುದೇ ಆರೋಗ್ಯ ಕೇಂದ್ರಗಳಿಗೆ ಪ್ರವೇಶ ಪಡೆಯಲು ಕೊರೊನಾ ಪಾಸಿಟಿವ್​ ರಿಪೋರ್ಟ್ ಕಡ್ಡಾಯವಲ್ಲ.

ಇಷ್ಟು ದಿನ ಕೊರೊನಾ ಲಕ್ಷಣಗಳು ಕಂಡುಬಂದ ಮೇಲೆ ತಪಾಸಣೆಗೆ ಒಳಗಾಗಿ, ಅದು ಪಾಸಿಟಿವ್​ ಬಂದ ಮೇಲಷ್ಟೇ ಹೋಗಿ ಕೊವಿಡ್​ 19 ಕಾಳಜಿ ಕೇಂದ್ರ (CCC), ನಿಗದಿತ ಕೊವಿಡ್ ಆರೋಗ್ಯ ಕೇಂದ್ರ (DCHC) ಅಥವಾ ನಿಗದಿತ ಕೊವಿಡ್ 19 ಆಸ್ಪತ್ರೆ(DCH)ಗೆ ಅಡ್ಮಿಟ್ ಆಗಬೇಕಿತ್ತು. ಅದೂ ಕೂಡ ಸೋಂಕಿನ ಗಂಭೀರತೆ ಪರಿಗಣಿಸಿ, ನಿಗದಿ ಪಡಿಸಲಾದ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಬೇಕಿತ್ತು. ಆದರೆ ಇದೀಗ ಪರಿಷ್ಕರಣೆಗೊಂಡ ನೀತಿಯ ಅನ್ವಯ, ಈ ಮೂರರಲ್ಲಿ ಯಾವುದೇ ಕೇಂದ್ರಕ್ಕೆ ಅಡ್ಮಿಟ್ ಆಗಲು ಕೊವಿಡ್ 19 ಪಾಸಿಟಿವ್ ರಿಪೋರ್ಟ್ ಬೇಕೆಂದೇನೂ ಇಲ್ಲ. ಶಂಕಿತ ಕೊರೊನಾ ರೋಗಿಗಳೂ ಸಹ ಈ ಮೂರರಲ್ಲಿ ಯಾವುದೇ ಕೇಂದ್ರಗಳಿಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ.

ಹಾಗೇ ಸಿಸಿಸಿ, ಡಿಸಿಎಚ್​ಸಿ, ಡಿಸಿಎಚ್​ ಕೇಂದ್ರಗಳು ಶಂಕಿತ ಕೊರೊನಾ ರೋಗಿಗಳು ಅಥವಾ ಸೌಮ್ಯ ಲಕ್ಷಣಗಳು ಇರವವರ ದಾಖಲಾತಿಗೆ ನಿರಾಕರಣೆ ಮಾಡುವಂತಿಲ್ಲ. ಸ್ಥಳೀಯರಿಗೆ ಮಾತ್ರ ಚಿಕಿತ್ಸೆ ಕೊಡುತ್ತೇವೆ. ಬೇರೆ ನಗರ, ಜಿಲ್ಲೆಗಳವರಿಗೆ ಚಿಕಿತ್ಸೆ ಕೊಡುವುದಿಲ್ಲ ಎಂದು ಹೇಳುವಂತಿಲ್ಲ. ಇಷ್ಟು ದಿನ ಆಯಾ ಕೇಂದ್ರಗಳಿಗೆ ನಿಗದಿ ಮಾಡಿದ್ದ ವ್ಯಾಪ್ತಿ ಇನ್ನು ಮುಂದೆ ಅನ್ವಯ ಆಗುವುದಿಲ್ಲ ಎಂದು ಪರಿಷ್ಕರಣ ರಾಷ್ಟ್ರೀಯ ನೀತಿಯಲ್ಲಿ ಉಲ್ಲೇಖವಾಗಿದೆ. ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್ ವ್ಯವಸ್ಥೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಇನ್ನು ಕೆಲವು ಕಡೆಗಳಲ್ಲಂತೂ ಕೊರೊನಾ ರೋಗಿಗಳು ಆಸ್ಪತ್ರೆ ಎದುರಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದು ನಮ್ಮ ವ್ಯಾಪ್ತಿಗೆ ಬರುತ್ತಿಲ್ಲ.. ಕೊವಿಡ್​ ಪಾಸಿಟಿವ್​ ರಿಪೋರ್ಟ್ ತನ್ನಿ ಎಂದು ಹೇಳಿ ಆಸ್ಪತ್ರೆಗಳು ರೋಗಿಗಳನ್ನು ದಾಖಲು ಮಾಡಿಕೊಳ್ಳದೆ ಕಳಿಸುವ ಘಟನೆಯೂ ಆಗಾಗ ವರದಿಯಾಗುತ್ತಿದೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಷ್ಟ್ರೀಯ ನೀತಿಯನ್ನು ಪರಿಷ್ಕರಿಸಿದೆ.

ಇದನ್ನೂ ಓದಿ: ಉಚಿತವಾಗಿ 22 ಸಾವಿರ ಊಟ ಹಂಚಿದ ತಾಯಿ-ಮಗನ ಹಿಂದಿದೆ ಕಷ್ಟದ ಕಥೆ

ಲಾಕ್​ಡೌನ್ ಯಶಸ್ವಿಗೊಳಿಸಲು, ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ನಾವು ಸಿದ್ಧ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿಕೆ

Government revises National policy for admission of covid patients in Hospital

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ