AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್ ವ್ಯವಸ್ಥೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಇನ್ನು ಕೆಲವು ಕಡೆಗಳಲ್ಲಂತೂ ಕೊರೊನಾ ರೋಗಿಗಳು ಆಸ್ಪತ್ರೆ ಎದುರಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 08, 2021 | 4:24 PM

Share

ನವದೆಹಲಿ: ನಿರಂತರವಾಗಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ವೈದ್ಯಕೀಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ಹೊತ್ತಲ್ಲಿ ಕೊರೊನಾ ರೋಗಿಗಳು ಕೊವಿಡ್​ ಕೇಂದ್ರಗಳಿಗೆ ದಾಖಲಾಗುವ ಸಂಬಂಧ ಇರುವ ರಾಷ್ಟ್ರೀಯ ನೀತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದೆ. ಈ ಹೊಸ ನೀತಿಯ ಅನ್ವಯ ಕೊವಿಡ್​-19 ಗೆ ಸಂಬಂಧಪಟ್ಟ ಯಾವುದೇ ಆರೋಗ್ಯ ಕೇಂದ್ರಗಳಿಗೆ ಪ್ರವೇಶ ಪಡೆಯಲು ಕೊರೊನಾ ಪಾಸಿಟಿವ್​ ರಿಪೋರ್ಟ್ ಕಡ್ಡಾಯವಲ್ಲ.

ಇಷ್ಟು ದಿನ ಕೊರೊನಾ ಲಕ್ಷಣಗಳು ಕಂಡುಬಂದ ಮೇಲೆ ತಪಾಸಣೆಗೆ ಒಳಗಾಗಿ, ಅದು ಪಾಸಿಟಿವ್​ ಬಂದ ಮೇಲಷ್ಟೇ ಹೋಗಿ ಕೊವಿಡ್​ 19 ಕಾಳಜಿ ಕೇಂದ್ರ (CCC), ನಿಗದಿತ ಕೊವಿಡ್ ಆರೋಗ್ಯ ಕೇಂದ್ರ (DCHC) ಅಥವಾ ನಿಗದಿತ ಕೊವಿಡ್ 19 ಆಸ್ಪತ್ರೆ(DCH)ಗೆ ಅಡ್ಮಿಟ್ ಆಗಬೇಕಿತ್ತು. ಅದೂ ಕೂಡ ಸೋಂಕಿನ ಗಂಭೀರತೆ ಪರಿಗಣಿಸಿ, ನಿಗದಿ ಪಡಿಸಲಾದ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಬೇಕಿತ್ತು. ಆದರೆ ಇದೀಗ ಪರಿಷ್ಕರಣೆಗೊಂಡ ನೀತಿಯ ಅನ್ವಯ, ಈ ಮೂರರಲ್ಲಿ ಯಾವುದೇ ಕೇಂದ್ರಕ್ಕೆ ಅಡ್ಮಿಟ್ ಆಗಲು ಕೊವಿಡ್ 19 ಪಾಸಿಟಿವ್ ರಿಪೋರ್ಟ್ ಬೇಕೆಂದೇನೂ ಇಲ್ಲ. ಶಂಕಿತ ಕೊರೊನಾ ರೋಗಿಗಳೂ ಸಹ ಈ ಮೂರರಲ್ಲಿ ಯಾವುದೇ ಕೇಂದ್ರಗಳಿಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ.

ಹಾಗೇ ಸಿಸಿಸಿ, ಡಿಸಿಎಚ್​ಸಿ, ಡಿಸಿಎಚ್​ ಕೇಂದ್ರಗಳು ಶಂಕಿತ ಕೊರೊನಾ ರೋಗಿಗಳು ಅಥವಾ ಸೌಮ್ಯ ಲಕ್ಷಣಗಳು ಇರವವರ ದಾಖಲಾತಿಗೆ ನಿರಾಕರಣೆ ಮಾಡುವಂತಿಲ್ಲ. ಸ್ಥಳೀಯರಿಗೆ ಮಾತ್ರ ಚಿಕಿತ್ಸೆ ಕೊಡುತ್ತೇವೆ. ಬೇರೆ ನಗರ, ಜಿಲ್ಲೆಗಳವರಿಗೆ ಚಿಕಿತ್ಸೆ ಕೊಡುವುದಿಲ್ಲ ಎಂದು ಹೇಳುವಂತಿಲ್ಲ. ಇಷ್ಟು ದಿನ ಆಯಾ ಕೇಂದ್ರಗಳಿಗೆ ನಿಗದಿ ಮಾಡಿದ್ದ ವ್ಯಾಪ್ತಿ ಇನ್ನು ಮುಂದೆ ಅನ್ವಯ ಆಗುವುದಿಲ್ಲ ಎಂದು ಪರಿಷ್ಕರಣ ರಾಷ್ಟ್ರೀಯ ನೀತಿಯಲ್ಲಿ ಉಲ್ಲೇಖವಾಗಿದೆ. ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್ ವ್ಯವಸ್ಥೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಇನ್ನು ಕೆಲವು ಕಡೆಗಳಲ್ಲಂತೂ ಕೊರೊನಾ ರೋಗಿಗಳು ಆಸ್ಪತ್ರೆ ಎದುರಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದು ನಮ್ಮ ವ್ಯಾಪ್ತಿಗೆ ಬರುತ್ತಿಲ್ಲ.. ಕೊವಿಡ್​ ಪಾಸಿಟಿವ್​ ರಿಪೋರ್ಟ್ ತನ್ನಿ ಎಂದು ಹೇಳಿ ಆಸ್ಪತ್ರೆಗಳು ರೋಗಿಗಳನ್ನು ದಾಖಲು ಮಾಡಿಕೊಳ್ಳದೆ ಕಳಿಸುವ ಘಟನೆಯೂ ಆಗಾಗ ವರದಿಯಾಗುತ್ತಿದೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಷ್ಟ್ರೀಯ ನೀತಿಯನ್ನು ಪರಿಷ್ಕರಿಸಿದೆ.

ಇದನ್ನೂ ಓದಿ: ಉಚಿತವಾಗಿ 22 ಸಾವಿರ ಊಟ ಹಂಚಿದ ತಾಯಿ-ಮಗನ ಹಿಂದಿದೆ ಕಷ್ಟದ ಕಥೆ

ಲಾಕ್​ಡೌನ್ ಯಶಸ್ವಿಗೊಳಿಸಲು, ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ನಾವು ಸಿದ್ಧ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿಕೆ

Government revises National policy for admission of covid patients in Hospital

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?