AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದಿರಿ.. ಎಚ್ಚರ!

ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಪತ್ರವನ್ನು ಪೋಸ್ಟ್​ ಮಾಡುವುದರ ಕುರಿತಂತೆ ಏನು ತೊಂದರೆ ಆಗಬಹುದು ಎಂಬುದರ ಕುರಿತಾಗಿ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಕೊವಿಡ್​ ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದಿರಿ.. ಎಚ್ಚರ!
ಪ್ರಾತಿನಿಧಿಕ ಚಿತ್ರ
shruti hegde
|

Updated on:May 27, 2021 | 1:50 PM

Share

ಕೊವಿಡ್​ ಸೋಂಕನ್ನು ನಿಯಂತ್ರಣಕ್ಕೆ ತರಲು ಎದುರಿರುವ ಒಂದೇ ಒಂದು ಪರಿಹಾರ ಮಾರ್ಗವೆಂದರೆ ಲಸಿಕೆ​(ವ್ಯಾಕ್ಸಿನೇಷನ್). ಕೊರೊನಾ ಸೋಂಕಿನ ಆರ್ಭಟ ತಣಿಸಲು ಸರ್ಕಾರ, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಳ್ಳುತ್ತಿದೆ. ಲಸಿಕೆ ಪಡೆದಿದ್ದೀರಿ ಎಂಬ ಕುರಿತಾಗಿ ಪ್ರಮಾಣಪತ್ರವನ್ನು ನೀಡಲಾಗುತ್ತಿದೆ. ಲಸಿಕೆ ಪಡೆದ ಬಳಿಕ ಇನ್ನಿತರರಿಗೆ ಸ್ಪೂರ್ತಿಯಾಗಲು, ಹೆಚ್ಚಿನ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಪತ್ರವನ್ನು ಪೋಸ್ಟ್​ ಮಾಡಲಾಗುತ್ತಿದೆ. ಆದರೆ ಈ ಕುರಿತಂತೆ ಏನು ತೊಂದರೆ ಆಗಬಹುದು ಎಂಬುದಾಗಿ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಹಿಂದೆ ಕೆಲವು ನಟ-ನಟಿಯರು ವ್ಯಾಕ್ಸಿನೇಷನ್​ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ತೊಡಗಿದ್ದರು. ಬಳಿಕ ಜನಸಾಮಾನ್ಯರೂ ಕೂಡಾ ಲಸಿಕೆ ಪಡೆದ ಪ್ರಮಾಣಪತ್ರವನ್ನು ಪೋಸ್ಟ್​ ಮಾಡಿ ಸಂತಸ ವ್ಯಕ್ತಪಡಿಸುತ್ತಿದ್ದರು. ಪ್ರಮಾಣ ಪತ್ರದಲ್ಲಿ ಕೆಲವು ನಿರ್ಣಾಯಕ ಡೇಟಾಗಳಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದರಿಂದ ಅಪಾಯ ಹೆಚ್ಚು ಎಂದು ಸರ್ಕಾರ ಸೂಚನೆ ನೀಡಿದೆ.

ಲಸಿಕೆ ಪಡೆದವರ ಹೆಸರು ಜತೆಗೆ ಕೆಲ ವಿವರಗಳನ್ನು ಲಸಿಕೆ ಪ್ರಮಾಣಪತ್ರ ಒಳಗೊಂಡಿರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ವಿವರವನ್ನು ಪೋಸ್ಟ್​ ಮಾಡುವುದು ಸುರಕ್ಷತಾ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಗೃಹ ಸಚಿವಾಲಯ ಟ್ವೀಟ್​ ಮೂಲಕ ತಿಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ದುರುಪಯೋಗಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿರುವುದರಿಂದಾಗಿ ಈ ಕುರಿತಾಗಿ ಎಚ್ಚರವಹಿಸಿ ಎಂದು ಸೂಚನೆ ನೀಡಿದೆ.

ಲಸಿಕೆ ಪ್ರಮಾಣಪತ್ರದಲ್ಲಿ ಲಸಿಕೆ ಪಡೆದವರ ಹೆಸರು, ಗುರುತಿನ ಚೀಟಿಯ ಕೊನೆಯ ನಾಲ್ಕು ಸಂಖ್ಯೆ, ಅವರು ಪಡೆದ ಲಸಿಕೆಯ ಹೆಸರು, ಲಸಿಕೆ ಪಡೆದ ಸಮಯ ಮತ್ತು ವ್ಯಾಕ್ಸಿನೇಷನ್​ ಕೇಂದ್ರದ ಕುರಿತಾದ ಮಾಹಿತಿಗಳು ಇರುತ್ತವೆ. ಚೀನಾ, ಜಪಾನ್​ ಮತ್ತು ಯುರೋಪಿಯನ್​ ಯೂನಿಯನ್​ ಸೇರಿದಂತೆ ಹಲವು ದೇಶಗಳು ಈ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಭವಿಷ್ಯದಲ್ಲಿ ಈ ಪ್ರಮಾಣಪತ್ರವು ಸಹಕಾರಿಯಾಗಿದೆ. ಯಾವುದೇ ದೇಶಗಳಿಗೆ ಪ್ರಯಾಣಿಸುವಾಗ ಕೊವಿಡ್​ ಲಸಿಕೆ ಪಡೆದ ಕುರಿತಾಗಿ ಪ್ರಮಾಣಪತ್ರವನ್ನು ತೋರಿಸುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: 

ಹೈಕೋರ್ಟ್ ಸುದ್ದಿ: ಕೊವಿಡ್ ಲಸಿಕೆಗೆ ತಡೆ ನೀಡಲು ಒತ್ತಾಯಿಸಿದ್ದ ಅರ್ಜಿ ವಜಾ

ಕೊರೊನಾ ಲಸಿಕೆ, ಔಷಧಿ ಮೇಲಿನ ಜಿಎಸ್‌ಟಿಗೆ ಬೀಳುತ್ತಾ ಕಡಿವಾಣ; ಮೇ 28ಕ್ಕೆ ಜಿಎಸ್​ಟಿ ಮಂಡಳಿ ಮಹತ್ವದ ಸಭೆ

Published On - 12:26 pm, Thu, 27 May 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?