AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದಿರಿ.. ಎಚ್ಚರ!

ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಪತ್ರವನ್ನು ಪೋಸ್ಟ್​ ಮಾಡುವುದರ ಕುರಿತಂತೆ ಏನು ತೊಂದರೆ ಆಗಬಹುದು ಎಂಬುದರ ಕುರಿತಾಗಿ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಕೊವಿಡ್​ ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದಿರಿ.. ಎಚ್ಚರ!
ಪ್ರಾತಿನಿಧಿಕ ಚಿತ್ರ
shruti hegde
|

Updated on:May 27, 2021 | 1:50 PM

Share

ಕೊವಿಡ್​ ಸೋಂಕನ್ನು ನಿಯಂತ್ರಣಕ್ಕೆ ತರಲು ಎದುರಿರುವ ಒಂದೇ ಒಂದು ಪರಿಹಾರ ಮಾರ್ಗವೆಂದರೆ ಲಸಿಕೆ​(ವ್ಯಾಕ್ಸಿನೇಷನ್). ಕೊರೊನಾ ಸೋಂಕಿನ ಆರ್ಭಟ ತಣಿಸಲು ಸರ್ಕಾರ, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಳ್ಳುತ್ತಿದೆ. ಲಸಿಕೆ ಪಡೆದಿದ್ದೀರಿ ಎಂಬ ಕುರಿತಾಗಿ ಪ್ರಮಾಣಪತ್ರವನ್ನು ನೀಡಲಾಗುತ್ತಿದೆ. ಲಸಿಕೆ ಪಡೆದ ಬಳಿಕ ಇನ್ನಿತರರಿಗೆ ಸ್ಪೂರ್ತಿಯಾಗಲು, ಹೆಚ್ಚಿನ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಪತ್ರವನ್ನು ಪೋಸ್ಟ್​ ಮಾಡಲಾಗುತ್ತಿದೆ. ಆದರೆ ಈ ಕುರಿತಂತೆ ಏನು ತೊಂದರೆ ಆಗಬಹುದು ಎಂಬುದಾಗಿ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಹಿಂದೆ ಕೆಲವು ನಟ-ನಟಿಯರು ವ್ಯಾಕ್ಸಿನೇಷನ್​ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ತೊಡಗಿದ್ದರು. ಬಳಿಕ ಜನಸಾಮಾನ್ಯರೂ ಕೂಡಾ ಲಸಿಕೆ ಪಡೆದ ಪ್ರಮಾಣಪತ್ರವನ್ನು ಪೋಸ್ಟ್​ ಮಾಡಿ ಸಂತಸ ವ್ಯಕ್ತಪಡಿಸುತ್ತಿದ್ದರು. ಪ್ರಮಾಣ ಪತ್ರದಲ್ಲಿ ಕೆಲವು ನಿರ್ಣಾಯಕ ಡೇಟಾಗಳಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದರಿಂದ ಅಪಾಯ ಹೆಚ್ಚು ಎಂದು ಸರ್ಕಾರ ಸೂಚನೆ ನೀಡಿದೆ.

ಲಸಿಕೆ ಪಡೆದವರ ಹೆಸರು ಜತೆಗೆ ಕೆಲ ವಿವರಗಳನ್ನು ಲಸಿಕೆ ಪ್ರಮಾಣಪತ್ರ ಒಳಗೊಂಡಿರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ವಿವರವನ್ನು ಪೋಸ್ಟ್​ ಮಾಡುವುದು ಸುರಕ್ಷತಾ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಗೃಹ ಸಚಿವಾಲಯ ಟ್ವೀಟ್​ ಮೂಲಕ ತಿಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ದುರುಪಯೋಗಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿರುವುದರಿಂದಾಗಿ ಈ ಕುರಿತಾಗಿ ಎಚ್ಚರವಹಿಸಿ ಎಂದು ಸೂಚನೆ ನೀಡಿದೆ.

ಲಸಿಕೆ ಪ್ರಮಾಣಪತ್ರದಲ್ಲಿ ಲಸಿಕೆ ಪಡೆದವರ ಹೆಸರು, ಗುರುತಿನ ಚೀಟಿಯ ಕೊನೆಯ ನಾಲ್ಕು ಸಂಖ್ಯೆ, ಅವರು ಪಡೆದ ಲಸಿಕೆಯ ಹೆಸರು, ಲಸಿಕೆ ಪಡೆದ ಸಮಯ ಮತ್ತು ವ್ಯಾಕ್ಸಿನೇಷನ್​ ಕೇಂದ್ರದ ಕುರಿತಾದ ಮಾಹಿತಿಗಳು ಇರುತ್ತವೆ. ಚೀನಾ, ಜಪಾನ್​ ಮತ್ತು ಯುರೋಪಿಯನ್​ ಯೂನಿಯನ್​ ಸೇರಿದಂತೆ ಹಲವು ದೇಶಗಳು ಈ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಭವಿಷ್ಯದಲ್ಲಿ ಈ ಪ್ರಮಾಣಪತ್ರವು ಸಹಕಾರಿಯಾಗಿದೆ. ಯಾವುದೇ ದೇಶಗಳಿಗೆ ಪ್ರಯಾಣಿಸುವಾಗ ಕೊವಿಡ್​ ಲಸಿಕೆ ಪಡೆದ ಕುರಿತಾಗಿ ಪ್ರಮಾಣಪತ್ರವನ್ನು ತೋರಿಸುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: 

ಹೈಕೋರ್ಟ್ ಸುದ್ದಿ: ಕೊವಿಡ್ ಲಸಿಕೆಗೆ ತಡೆ ನೀಡಲು ಒತ್ತಾಯಿಸಿದ್ದ ಅರ್ಜಿ ವಜಾ

ಕೊರೊನಾ ಲಸಿಕೆ, ಔಷಧಿ ಮೇಲಿನ ಜಿಎಸ್‌ಟಿಗೆ ಬೀಳುತ್ತಾ ಕಡಿವಾಣ; ಮೇ 28ಕ್ಕೆ ಜಿಎಸ್​ಟಿ ಮಂಡಳಿ ಮಹತ್ವದ ಸಭೆ

Published On - 12:26 pm, Thu, 27 May 21

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!