AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದಿರಿ.. ಎಚ್ಚರ!

ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಪತ್ರವನ್ನು ಪೋಸ್ಟ್​ ಮಾಡುವುದರ ಕುರಿತಂತೆ ಏನು ತೊಂದರೆ ಆಗಬಹುದು ಎಂಬುದರ ಕುರಿತಾಗಿ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಕೊವಿಡ್​ ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದಿರಿ.. ಎಚ್ಚರ!
ಪ್ರಾತಿನಿಧಿಕ ಚಿತ್ರ
shruti hegde
|

Updated on:May 27, 2021 | 1:50 PM

Share

ಕೊವಿಡ್​ ಸೋಂಕನ್ನು ನಿಯಂತ್ರಣಕ್ಕೆ ತರಲು ಎದುರಿರುವ ಒಂದೇ ಒಂದು ಪರಿಹಾರ ಮಾರ್ಗವೆಂದರೆ ಲಸಿಕೆ​(ವ್ಯಾಕ್ಸಿನೇಷನ್). ಕೊರೊನಾ ಸೋಂಕಿನ ಆರ್ಭಟ ತಣಿಸಲು ಸರ್ಕಾರ, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಳ್ಳುತ್ತಿದೆ. ಲಸಿಕೆ ಪಡೆದಿದ್ದೀರಿ ಎಂಬ ಕುರಿತಾಗಿ ಪ್ರಮಾಣಪತ್ರವನ್ನು ನೀಡಲಾಗುತ್ತಿದೆ. ಲಸಿಕೆ ಪಡೆದ ಬಳಿಕ ಇನ್ನಿತರರಿಗೆ ಸ್ಪೂರ್ತಿಯಾಗಲು, ಹೆಚ್ಚಿನ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಪತ್ರವನ್ನು ಪೋಸ್ಟ್​ ಮಾಡಲಾಗುತ್ತಿದೆ. ಆದರೆ ಈ ಕುರಿತಂತೆ ಏನು ತೊಂದರೆ ಆಗಬಹುದು ಎಂಬುದಾಗಿ ಭಾರತ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಹಿಂದೆ ಕೆಲವು ನಟ-ನಟಿಯರು ವ್ಯಾಕ್ಸಿನೇಷನ್​ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ತೊಡಗಿದ್ದರು. ಬಳಿಕ ಜನಸಾಮಾನ್ಯರೂ ಕೂಡಾ ಲಸಿಕೆ ಪಡೆದ ಪ್ರಮಾಣಪತ್ರವನ್ನು ಪೋಸ್ಟ್​ ಮಾಡಿ ಸಂತಸ ವ್ಯಕ್ತಪಡಿಸುತ್ತಿದ್ದರು. ಪ್ರಮಾಣ ಪತ್ರದಲ್ಲಿ ಕೆಲವು ನಿರ್ಣಾಯಕ ಡೇಟಾಗಳಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದರಿಂದ ಅಪಾಯ ಹೆಚ್ಚು ಎಂದು ಸರ್ಕಾರ ಸೂಚನೆ ನೀಡಿದೆ.

ಲಸಿಕೆ ಪಡೆದವರ ಹೆಸರು ಜತೆಗೆ ಕೆಲ ವಿವರಗಳನ್ನು ಲಸಿಕೆ ಪ್ರಮಾಣಪತ್ರ ಒಳಗೊಂಡಿರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ವಿವರವನ್ನು ಪೋಸ್ಟ್​ ಮಾಡುವುದು ಸುರಕ್ಷತಾ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಗೃಹ ಸಚಿವಾಲಯ ಟ್ವೀಟ್​ ಮೂಲಕ ತಿಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ದುರುಪಯೋಗಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿರುವುದರಿಂದಾಗಿ ಈ ಕುರಿತಾಗಿ ಎಚ್ಚರವಹಿಸಿ ಎಂದು ಸೂಚನೆ ನೀಡಿದೆ.

ಲಸಿಕೆ ಪ್ರಮಾಣಪತ್ರದಲ್ಲಿ ಲಸಿಕೆ ಪಡೆದವರ ಹೆಸರು, ಗುರುತಿನ ಚೀಟಿಯ ಕೊನೆಯ ನಾಲ್ಕು ಸಂಖ್ಯೆ, ಅವರು ಪಡೆದ ಲಸಿಕೆಯ ಹೆಸರು, ಲಸಿಕೆ ಪಡೆದ ಸಮಯ ಮತ್ತು ವ್ಯಾಕ್ಸಿನೇಷನ್​ ಕೇಂದ್ರದ ಕುರಿತಾದ ಮಾಹಿತಿಗಳು ಇರುತ್ತವೆ. ಚೀನಾ, ಜಪಾನ್​ ಮತ್ತು ಯುರೋಪಿಯನ್​ ಯೂನಿಯನ್​ ಸೇರಿದಂತೆ ಹಲವು ದೇಶಗಳು ಈ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಭವಿಷ್ಯದಲ್ಲಿ ಈ ಪ್ರಮಾಣಪತ್ರವು ಸಹಕಾರಿಯಾಗಿದೆ. ಯಾವುದೇ ದೇಶಗಳಿಗೆ ಪ್ರಯಾಣಿಸುವಾಗ ಕೊವಿಡ್​ ಲಸಿಕೆ ಪಡೆದ ಕುರಿತಾಗಿ ಪ್ರಮಾಣಪತ್ರವನ್ನು ತೋರಿಸುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: 

ಹೈಕೋರ್ಟ್ ಸುದ್ದಿ: ಕೊವಿಡ್ ಲಸಿಕೆಗೆ ತಡೆ ನೀಡಲು ಒತ್ತಾಯಿಸಿದ್ದ ಅರ್ಜಿ ವಜಾ

ಕೊರೊನಾ ಲಸಿಕೆ, ಔಷಧಿ ಮೇಲಿನ ಜಿಎಸ್‌ಟಿಗೆ ಬೀಳುತ್ತಾ ಕಡಿವಾಣ; ಮೇ 28ಕ್ಕೆ ಜಿಎಸ್​ಟಿ ಮಂಡಳಿ ಮಹತ್ವದ ಸಭೆ

Published On - 12:26 pm, Thu, 27 May 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ