AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹೆಚ್ಚುತ್ತಿರುವ ಪ್ರಾಬಲ್ಯದಿಂದಲೇ ಉಕ್ರೇನ್​​ನಿಂದ ಭಾರತೀಯರನ್ನು ಸ್ಥಳಾಂತರಿಸಲು ಸಾಧ್ಯವಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಣೆ ಮಾಡಲು ನಾವು ಆಪರೇಶನ್​ ಗಂಗಾ ಹಮ್ಮಿಕೊಂಡಿದ್ದೇವೆ. ಈ ಮೂಲಕ ಈಗಾಗಲೇ ಸಾವಿರಾರು ಭಾರತೀಯರನ್ನು ವಾಪಸ್​ ಕರೆತರಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಭಾರತದ ಹೆಚ್ಚುತ್ತಿರುವ ಪ್ರಾಬಲ್ಯದಿಂದಲೇ  ಉಕ್ರೇನ್​​ನಿಂದ ಭಾರತೀಯರನ್ನು ಸ್ಥಳಾಂತರಿಸಲು ಸಾಧ್ಯವಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Mar 02, 2022 | 4:16 PM

Share

ಇನ್ನೂ ಎರಡು ಹಂತದ ಮತದಾನ ಬಾಕಿ ಇರುವ ಉತ್ತರ ಪ್ರದೇಶದಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ (Uttar Pradesh Assembly Election) ನಡೆಸಿದರು. ಈ ವೇಳೆ ಉಕ್ರೇನ್​ ವಿಚಾರ ಪ್ರಸ್ತಾಪಿಸಿದ ಅವರು, ಇಂದು ಜಾಗತಿಕವಾಗಿ ಭಾರತ ಹೆಚ್ಚಿಸಿಕೊಂಡಿರುವ ಪ್ರಾಬಲ್ಯದಿಂದಲೇ, ರಷ್ಯಾ ಆಕ್ರಮಣ ನಡೆಸುತ್ತಿರುವ ಉಕ್ರೇನ್​​ನಿಂದ ಭಾರತೀಯರನ್ನು ರಕ್ಷಿಸಲು ಸಾಧ್ಯವಾಗುತ್ತಿದೆ. ಅಲ್ಲಿರುವ ಭಾರತೀಯ ನಾಗರಿಕರನ್ನು ಕರೆತರಲು ಏನೆಲ್ಲ ಪ್ರಯತ್ನ ಮಾಡಬಹುದೋ, ಅಷ್ಟನ್ನೂ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇಂದು ಉತ್ತರ ಪ್ರದೇಶದ ಸೋನ್​ಭದ್ರಾದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿದ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಮತ್ತು ಮೇಕ್​ ಇನ್​ ಇಂಡಿಯಾ ಪರಿಕಲ್ಪನೆಯನ್ನು ಪ್ರಶ್ನೆ ಮಾಡುತ್ತಿರುವವರು ಎಂದಿಗೂ ನಮ್ಮ ದೇಶವನ್ನು ಬಲಿಷ್ಠಗೊಳಿಸಲಾರರು ಎಂದು ಹೇಳಿದರು.

ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಣೆ ಮಾಡಲು ನಾವು ಆಪರೇಶನ್​ ಗಂಗಾ ಹಮ್ಮಿಕೊಂಡಿದ್ದೇವೆ. ಈ ಮೂಲಕ ಈಗಾಗಲೇ ಸಾವಿರಾರು ಭಾರತೀಯರನ್ನು ವಾಪಸ್​ ಕರೆತರಲಾಗಿದೆ. ಅಷ್ಟೆ ಅಲ್ಲ, ಈ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸಲು ಕೇಂದ್ರದ ನಾಲ್ವರು ಸಚಿವರನ್ನು ಉಕ್ರೇನ್​​ನ ನಾಲ್ಕು ನೆರೆ ರಾಷ್ಟ್ರಗಳಿಗೆ ಕಳಿಸಲಾಗಿದೆ. ನಮ್ಮವರ ಸುರಕ್ಷತೆಯೇ ಆದ್ಯತೆ. ಅವರನ್ನೆಲ್ಲ ರಕ್ಷಣೆ ಮಾಡಿದ ವಿನಃ ನಾವು ವಿಶ್ರಮಿಸುವುದಿಲ್ಲ ಎಂದು ಪ್ರಧಾನಿಯವರು ಇಂದು ಹೇಳಿದ್ದಾರೆ.

ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ಭಾರತ ತುಂಬ ಸೂಕ್ಷ್ಮವಾಗಿ ವರ್ತಿಸುತ್ತಿದೆ. ಒಂದೆಡೆ ಉಕ್ರೇನ್​ಗೆ ಅಗತ್ಯ ವಸ್ತುಗಳ ಪೂರೈಕೆ ಮಾಡುತ್ತಿದೆ. ಇನ್ನೊಂದೆಡೆ ವಿಶ್ವಸಂಸ್ಥೆಯಲ್ಲಿ ರಷ್ಯಾ ವಿರುದ್ಧ ಕೈಗೊಳ್ಳುವ ಯಾವುದೇ ನಿರ್ಣಯಗಳಿಗೂ ಮತದಾನ ಮಾಡುತ್ತಿಲ್ಲ. ಶಾಂತಿಯಿಂದ ಪರಿಹರಿಸಿಕೊಳ್ಳಿ ಎಂಬ ಹೇಳಿಕೆಗೆ ಬದ್ಧವಾಗಿ ನಡೆದುಕೊಳ್ಳುತ್ತಿದೆ. ಭಾರತದ ನಾಗರಿಕರ ರಕ್ಷಣೆಗೆ ಉಕ್ರೇನ್​ ಆಗಲಿ, ರಷ್ಯಾ ಆಗಲಿ ಮತ್ತು ಉಕ್ರೇನ್​ ಗಡಿಯಲ್ಲಿರುವ ಪೋಲ್ಯಾಂಡ್​, ರೊಮೇನಿಯಾ, ಹಂಗೇರಿ ಸೇರಿ ಇನ್ಯಾವುದೇ ರಾಷ್ಟ್ರಗಳಾಗಲಿ ಅಡ್ಡಿಪಡಿಸುತ್ತಿಲ್ಲ. ಭಾರತದ ಧ್ವಜ ಹಿಡಿದವರನ್ನು ಕಂಡರೆ ಗಡಿಯಲ್ಲಿ ಸುಮ್ಮನೆ ಬಿಡುತ್ತಿದ್ದಾರೆ. ಇಷ್ಟು ದಿನ ಉಕ್ರೇನ್​ ಪಶ್ಚಿಮ ಗಡಿಯಿಂದ ಮಾತ್ರ ಭಾರತೀಯರನ್ನು ಸ್ಥಳಾಂತರ ಮಾಡುತ್ತಿದ್ದ ಭಾರತಕ್ಕೆ ಇನ್ನು ಮುಂದೆ ರಷ್ಯಾ ಮಾರ್ಗವೂ ತೆರೆದುಕೊಂಡಿದೆ. ಭಾರತೀಯರನ್ನು ಸ್ಥಳಾಂತರಿಸಲು ನಮ್ಮ ಒಪ್ಪಿಗೆ ಇದೆ ಎಂದು ರಷ್ಯಾ ರಾಯಭಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Russia- Ukraine War: ಉಕ್ರೇನ್ ಜೊತೆ ಮತ್ತೆ ಮಾತುಕತೆಗೆ ಸಿದ್ಧ ಎಂದ ರಷ್ಯಾ; 6 ಹೊಸ ಬೆಳವಣಿಗೆಗಳು ಹೀಗಿವೆ

Published On - 4:15 pm, Wed, 2 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ