AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹೆಚ್ಚುತ್ತಿರುವ ಪ್ರಾಬಲ್ಯದಿಂದಲೇ ಉಕ್ರೇನ್​​ನಿಂದ ಭಾರತೀಯರನ್ನು ಸ್ಥಳಾಂತರಿಸಲು ಸಾಧ್ಯವಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಣೆ ಮಾಡಲು ನಾವು ಆಪರೇಶನ್​ ಗಂಗಾ ಹಮ್ಮಿಕೊಂಡಿದ್ದೇವೆ. ಈ ಮೂಲಕ ಈಗಾಗಲೇ ಸಾವಿರಾರು ಭಾರತೀಯರನ್ನು ವಾಪಸ್​ ಕರೆತರಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಭಾರತದ ಹೆಚ್ಚುತ್ತಿರುವ ಪ್ರಾಬಲ್ಯದಿಂದಲೇ  ಉಕ್ರೇನ್​​ನಿಂದ ಭಾರತೀಯರನ್ನು ಸ್ಥಳಾಂತರಿಸಲು ಸಾಧ್ಯವಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Mar 02, 2022 | 4:16 PM

Share

ಇನ್ನೂ ಎರಡು ಹಂತದ ಮತದಾನ ಬಾಕಿ ಇರುವ ಉತ್ತರ ಪ್ರದೇಶದಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ (Uttar Pradesh Assembly Election) ನಡೆಸಿದರು. ಈ ವೇಳೆ ಉಕ್ರೇನ್​ ವಿಚಾರ ಪ್ರಸ್ತಾಪಿಸಿದ ಅವರು, ಇಂದು ಜಾಗತಿಕವಾಗಿ ಭಾರತ ಹೆಚ್ಚಿಸಿಕೊಂಡಿರುವ ಪ್ರಾಬಲ್ಯದಿಂದಲೇ, ರಷ್ಯಾ ಆಕ್ರಮಣ ನಡೆಸುತ್ತಿರುವ ಉಕ್ರೇನ್​​ನಿಂದ ಭಾರತೀಯರನ್ನು ರಕ್ಷಿಸಲು ಸಾಧ್ಯವಾಗುತ್ತಿದೆ. ಅಲ್ಲಿರುವ ಭಾರತೀಯ ನಾಗರಿಕರನ್ನು ಕರೆತರಲು ಏನೆಲ್ಲ ಪ್ರಯತ್ನ ಮಾಡಬಹುದೋ, ಅಷ್ಟನ್ನೂ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇಂದು ಉತ್ತರ ಪ್ರದೇಶದ ಸೋನ್​ಭದ್ರಾದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿದ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಮತ್ತು ಮೇಕ್​ ಇನ್​ ಇಂಡಿಯಾ ಪರಿಕಲ್ಪನೆಯನ್ನು ಪ್ರಶ್ನೆ ಮಾಡುತ್ತಿರುವವರು ಎಂದಿಗೂ ನಮ್ಮ ದೇಶವನ್ನು ಬಲಿಷ್ಠಗೊಳಿಸಲಾರರು ಎಂದು ಹೇಳಿದರು.

ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಣೆ ಮಾಡಲು ನಾವು ಆಪರೇಶನ್​ ಗಂಗಾ ಹಮ್ಮಿಕೊಂಡಿದ್ದೇವೆ. ಈ ಮೂಲಕ ಈಗಾಗಲೇ ಸಾವಿರಾರು ಭಾರತೀಯರನ್ನು ವಾಪಸ್​ ಕರೆತರಲಾಗಿದೆ. ಅಷ್ಟೆ ಅಲ್ಲ, ಈ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸಲು ಕೇಂದ್ರದ ನಾಲ್ವರು ಸಚಿವರನ್ನು ಉಕ್ರೇನ್​​ನ ನಾಲ್ಕು ನೆರೆ ರಾಷ್ಟ್ರಗಳಿಗೆ ಕಳಿಸಲಾಗಿದೆ. ನಮ್ಮವರ ಸುರಕ್ಷತೆಯೇ ಆದ್ಯತೆ. ಅವರನ್ನೆಲ್ಲ ರಕ್ಷಣೆ ಮಾಡಿದ ವಿನಃ ನಾವು ವಿಶ್ರಮಿಸುವುದಿಲ್ಲ ಎಂದು ಪ್ರಧಾನಿಯವರು ಇಂದು ಹೇಳಿದ್ದಾರೆ.

ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ಭಾರತ ತುಂಬ ಸೂಕ್ಷ್ಮವಾಗಿ ವರ್ತಿಸುತ್ತಿದೆ. ಒಂದೆಡೆ ಉಕ್ರೇನ್​ಗೆ ಅಗತ್ಯ ವಸ್ತುಗಳ ಪೂರೈಕೆ ಮಾಡುತ್ತಿದೆ. ಇನ್ನೊಂದೆಡೆ ವಿಶ್ವಸಂಸ್ಥೆಯಲ್ಲಿ ರಷ್ಯಾ ವಿರುದ್ಧ ಕೈಗೊಳ್ಳುವ ಯಾವುದೇ ನಿರ್ಣಯಗಳಿಗೂ ಮತದಾನ ಮಾಡುತ್ತಿಲ್ಲ. ಶಾಂತಿಯಿಂದ ಪರಿಹರಿಸಿಕೊಳ್ಳಿ ಎಂಬ ಹೇಳಿಕೆಗೆ ಬದ್ಧವಾಗಿ ನಡೆದುಕೊಳ್ಳುತ್ತಿದೆ. ಭಾರತದ ನಾಗರಿಕರ ರಕ್ಷಣೆಗೆ ಉಕ್ರೇನ್​ ಆಗಲಿ, ರಷ್ಯಾ ಆಗಲಿ ಮತ್ತು ಉಕ್ರೇನ್​ ಗಡಿಯಲ್ಲಿರುವ ಪೋಲ್ಯಾಂಡ್​, ರೊಮೇನಿಯಾ, ಹಂಗೇರಿ ಸೇರಿ ಇನ್ಯಾವುದೇ ರಾಷ್ಟ್ರಗಳಾಗಲಿ ಅಡ್ಡಿಪಡಿಸುತ್ತಿಲ್ಲ. ಭಾರತದ ಧ್ವಜ ಹಿಡಿದವರನ್ನು ಕಂಡರೆ ಗಡಿಯಲ್ಲಿ ಸುಮ್ಮನೆ ಬಿಡುತ್ತಿದ್ದಾರೆ. ಇಷ್ಟು ದಿನ ಉಕ್ರೇನ್​ ಪಶ್ಚಿಮ ಗಡಿಯಿಂದ ಮಾತ್ರ ಭಾರತೀಯರನ್ನು ಸ್ಥಳಾಂತರ ಮಾಡುತ್ತಿದ್ದ ಭಾರತಕ್ಕೆ ಇನ್ನು ಮುಂದೆ ರಷ್ಯಾ ಮಾರ್ಗವೂ ತೆರೆದುಕೊಂಡಿದೆ. ಭಾರತೀಯರನ್ನು ಸ್ಥಳಾಂತರಿಸಲು ನಮ್ಮ ಒಪ್ಪಿಗೆ ಇದೆ ಎಂದು ರಷ್ಯಾ ರಾಯಭಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Russia- Ukraine War: ಉಕ್ರೇನ್ ಜೊತೆ ಮತ್ತೆ ಮಾತುಕತೆಗೆ ಸಿದ್ಧ ಎಂದ ರಷ್ಯಾ; 6 ಹೊಸ ಬೆಳವಣಿಗೆಗಳು ಹೀಗಿವೆ

Published On - 4:15 pm, Wed, 2 March 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ