AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದಲೇ ಸೋನಿಯಾ-ರಾಹುಲ್ SPG ತೆಗೆದುಹಾಕಿದ ಕೇಂದ್ರ

ದೆಹಲಿ: ಇಂದಿನಿಂದಲೇ ಸೋನಿಯಾ ಗಾಂಧಿ ಮತ್ತು ಅವರ ಇಬ್ಬರು ಮಕ್ಕಳಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ರಕ್ಷಣೆಯನ್ನು ಹಿಂಪಡೆಯಲಾಗಿದೆ. ಎಐಸಿಸಿ ಹಂಗಾಮಿ ಅಧ್ಯಕ್ಷೆಯಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು ನೆಲೆಸಿರುವ 10 ಜನಪತ್ ನಿವಾಸದ ಬಳಿ ಈಗಾಗಲೇ ಸಿಆರ್​ಪಿಎಫ್​ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಗಾಂಧಿ ಪರಿವಾರಕ್ಕೆ ಸಿಆರ್​ಪಿಎಫ್​ನ Z+ ಸೆಕ್ಯೂರಿಟಿಯನ್ನು ನೀಡಲಾಗಿದೆ. ಪ್ರಧಾನಿ ಮೋದಿಗೆ ಮಾತ್ರ SPG ಸೆಕ್ಯೂರಿಟಿ: 28 ವರ್ಷಗಳಿಂದ ಗಾಂಧಿ ಪರಿವಾರಕ್ಕೆ ಎಸ್​ಪಿಜಿ ಭದ್ರತೆಯನ್ನು ನೀಡಲಾಗುತ್ತಿತ್ತು. ಈಗ […]

ಇಂದಿನಿಂದಲೇ ಸೋನಿಯಾ-ರಾಹುಲ್ SPG ತೆಗೆದುಹಾಕಿದ ಕೇಂದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 08, 2019 | 10:46 PM

Share

ದೆಹಲಿ: ಇಂದಿನಿಂದಲೇ ಸೋನಿಯಾ ಗಾಂಧಿ ಮತ್ತು ಅವರ ಇಬ್ಬರು ಮಕ್ಕಳಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ರಕ್ಷಣೆಯನ್ನು ಹಿಂಪಡೆಯಲಾಗಿದೆ. ಎಐಸಿಸಿ ಹಂಗಾಮಿ ಅಧ್ಯಕ್ಷೆಯಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು ನೆಲೆಸಿರುವ 10 ಜನಪತ್ ನಿವಾಸದ ಬಳಿ ಈಗಾಗಲೇ ಸಿಆರ್​ಪಿಎಫ್​ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಗಾಂಧಿ ಪರಿವಾರಕ್ಕೆ ಸಿಆರ್​ಪಿಎಫ್​ನ Z+ ಸೆಕ್ಯೂರಿಟಿಯನ್ನು ನೀಡಲಾಗಿದೆ.

ಪ್ರಧಾನಿ ಮೋದಿಗೆ ಮಾತ್ರ SPG ಸೆಕ್ಯೂರಿಟಿ: 28 ವರ್ಷಗಳಿಂದ ಗಾಂಧಿ ಪರಿವಾರಕ್ಕೆ ಎಸ್​ಪಿಜಿ ಭದ್ರತೆಯನ್ನು ನೀಡಲಾಗುತ್ತಿತ್ತು. ಈಗ ಅವರಿಗೂ ಎಸ್​ಪಿಜಿ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ಇದೀಗ ದೇಶದಲ್ಲಿ ಎಸ್​ಪಿಜಿ ರಕ್ಷಣೆಯನ್ನು ಹೊಂದಿರುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದಾರೆ.

ಗಾಂಧಿ ಕುಟುಂಬಕ್ಕೆ ಬೆದರಿಕೆ ಇಲ್ಲ: ಗಾಂಧಿ ಪರಿವಾರಕ್ಕೆ ಈಗ ಯಾವುದೇ ಬೆದರಿಕೆ ಇಲ್ಲ. ಇತ್ತೀಚೆಗೆ ಎಲ್ಲಾ ಭದ್ರತಾ ಏಜೆನ್ಸಿಗಳಿಂದ ಅಭಿಪ್ರಾಯವನ್ನು ಪಡೆದ ಬಳಿಕ ಎಸ್​ಪಿಜಿ ರಕ್ಷಣೆಯನ್ನು ವಾಪಸ್ ಪಡೆಯುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ಗಾಂಧಿ ಕುಟುಂಬಕ್ಕೆ ಧಕ್ಕೆಯಾಗಲ್ಲ: ಎಸ್​ಪಿಜಿ (Special Protection Group) ದೇಶದಲ್ಲಿಯೇ ಅತ್ಯುನ್ನತ ಶ್ರೇಣಿಯ ಭದ್ರತೆಯನ್ನು ಹೊದಗಿಸುವ ಸಂಸ್ಥೆಯಾಗಿದೆ. SPG ಭದ್ರತೆಯನ್ನು ಹಿಂಪಡೆಯುವುದರಿಂದ ಯಾವುದೇ ಕಾರಣಕ್ಕೂ ಗಾಂಧಿ ಕುಟುಂಬದ ಭದ್ರತೆಗೆ ಧಕ್ಕೆಯಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ಎಸ್​ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಗಾಂಧಿ ಪರಿವಾರಕ್ಕೆ 28 ವರ್ಷಗಳಿಂದ ಈ ಎಸ್​ಪಿಜಿ ರಕ್ಷಣೆಯನ್ನು ನೀಡಲಾಗುತ್ತಿದೆ. 1988ರ ಎಸ್​ಪಿಜಿ ಕಾಯ್ದೆ ಅಡಿ 1991 ಸೆಪ್ಟೆಂಬರ್​ ತಿಂಗಳಿಂದ ವಿವಿಐಪಿ ಸೆಕ್ಯೂರಿಟಿ ಕೊಡಲಾಗುತ್ತಿತ್ತು.

ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ: ಇಷ್ಟು ದಿನ ಹಗಲಿರುಳು ಶ್ರಮಿಸಿ ರಕ್ಷಿಸಿದ ಎಸ್​ಜಿಪಿ ಸಹೋದರ ಮತ್ತು ಸಹೋದರಿಯರೇ ಧನ್ಯವಾದ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Published On - 5:49 pm, Fri, 8 November 19

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್