AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದಲೇ ಸೋನಿಯಾ-ರಾಹುಲ್ SPG ತೆಗೆದುಹಾಕಿದ ಕೇಂದ್ರ

ದೆಹಲಿ: ಇಂದಿನಿಂದಲೇ ಸೋನಿಯಾ ಗಾಂಧಿ ಮತ್ತು ಅವರ ಇಬ್ಬರು ಮಕ್ಕಳಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ರಕ್ಷಣೆಯನ್ನು ಹಿಂಪಡೆಯಲಾಗಿದೆ. ಎಐಸಿಸಿ ಹಂಗಾಮಿ ಅಧ್ಯಕ್ಷೆಯಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು ನೆಲೆಸಿರುವ 10 ಜನಪತ್ ನಿವಾಸದ ಬಳಿ ಈಗಾಗಲೇ ಸಿಆರ್​ಪಿಎಫ್​ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಗಾಂಧಿ ಪರಿವಾರಕ್ಕೆ ಸಿಆರ್​ಪಿಎಫ್​ನ Z+ ಸೆಕ್ಯೂರಿಟಿಯನ್ನು ನೀಡಲಾಗಿದೆ. ಪ್ರಧಾನಿ ಮೋದಿಗೆ ಮಾತ್ರ SPG ಸೆಕ್ಯೂರಿಟಿ: 28 ವರ್ಷಗಳಿಂದ ಗಾಂಧಿ ಪರಿವಾರಕ್ಕೆ ಎಸ್​ಪಿಜಿ ಭದ್ರತೆಯನ್ನು ನೀಡಲಾಗುತ್ತಿತ್ತು. ಈಗ […]

ಇಂದಿನಿಂದಲೇ ಸೋನಿಯಾ-ರಾಹುಲ್ SPG ತೆಗೆದುಹಾಕಿದ ಕೇಂದ್ರ
ಸಾಧು ಶ್ರೀನಾಥ್​
|

Updated on:Nov 08, 2019 | 10:46 PM

Share

ದೆಹಲಿ: ಇಂದಿನಿಂದಲೇ ಸೋನಿಯಾ ಗಾಂಧಿ ಮತ್ತು ಅವರ ಇಬ್ಬರು ಮಕ್ಕಳಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ರಕ್ಷಣೆಯನ್ನು ಹಿಂಪಡೆಯಲಾಗಿದೆ. ಎಐಸಿಸಿ ಹಂಗಾಮಿ ಅಧ್ಯಕ್ಷೆಯಾದ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು ನೆಲೆಸಿರುವ 10 ಜನಪತ್ ನಿವಾಸದ ಬಳಿ ಈಗಾಗಲೇ ಸಿಆರ್​ಪಿಎಫ್​ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಗಾಂಧಿ ಪರಿವಾರಕ್ಕೆ ಸಿಆರ್​ಪಿಎಫ್​ನ Z+ ಸೆಕ್ಯೂರಿಟಿಯನ್ನು ನೀಡಲಾಗಿದೆ.

ಪ್ರಧಾನಿ ಮೋದಿಗೆ ಮಾತ್ರ SPG ಸೆಕ್ಯೂರಿಟಿ: 28 ವರ್ಷಗಳಿಂದ ಗಾಂಧಿ ಪರಿವಾರಕ್ಕೆ ಎಸ್​ಪಿಜಿ ಭದ್ರತೆಯನ್ನು ನೀಡಲಾಗುತ್ತಿತ್ತು. ಈಗ ಅವರಿಗೂ ಎಸ್​ಪಿಜಿ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ. ಇದೀಗ ದೇಶದಲ್ಲಿ ಎಸ್​ಪಿಜಿ ರಕ್ಷಣೆಯನ್ನು ಹೊಂದಿರುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದಾರೆ.

ಗಾಂಧಿ ಕುಟುಂಬಕ್ಕೆ ಬೆದರಿಕೆ ಇಲ್ಲ: ಗಾಂಧಿ ಪರಿವಾರಕ್ಕೆ ಈಗ ಯಾವುದೇ ಬೆದರಿಕೆ ಇಲ್ಲ. ಇತ್ತೀಚೆಗೆ ಎಲ್ಲಾ ಭದ್ರತಾ ಏಜೆನ್ಸಿಗಳಿಂದ ಅಭಿಪ್ರಾಯವನ್ನು ಪಡೆದ ಬಳಿಕ ಎಸ್​ಪಿಜಿ ರಕ್ಷಣೆಯನ್ನು ವಾಪಸ್ ಪಡೆಯುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ಗಾಂಧಿ ಕುಟುಂಬಕ್ಕೆ ಧಕ್ಕೆಯಾಗಲ್ಲ: ಎಸ್​ಪಿಜಿ (Special Protection Group) ದೇಶದಲ್ಲಿಯೇ ಅತ್ಯುನ್ನತ ಶ್ರೇಣಿಯ ಭದ್ರತೆಯನ್ನು ಹೊದಗಿಸುವ ಸಂಸ್ಥೆಯಾಗಿದೆ. SPG ಭದ್ರತೆಯನ್ನು ಹಿಂಪಡೆಯುವುದರಿಂದ ಯಾವುದೇ ಕಾರಣಕ್ಕೂ ಗಾಂಧಿ ಕುಟುಂಬದ ಭದ್ರತೆಗೆ ಧಕ್ಕೆಯಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ಎಸ್​ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಗಾಂಧಿ ಪರಿವಾರಕ್ಕೆ 28 ವರ್ಷಗಳಿಂದ ಈ ಎಸ್​ಪಿಜಿ ರಕ್ಷಣೆಯನ್ನು ನೀಡಲಾಗುತ್ತಿದೆ. 1988ರ ಎಸ್​ಪಿಜಿ ಕಾಯ್ದೆ ಅಡಿ 1991 ಸೆಪ್ಟೆಂಬರ್​ ತಿಂಗಳಿಂದ ವಿವಿಐಪಿ ಸೆಕ್ಯೂರಿಟಿ ಕೊಡಲಾಗುತ್ತಿತ್ತು.

ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ: ಇಷ್ಟು ದಿನ ಹಗಲಿರುಳು ಶ್ರಮಿಸಿ ರಕ್ಷಿಸಿದ ಎಸ್​ಜಿಪಿ ಸಹೋದರ ಮತ್ತು ಸಹೋದರಿಯರೇ ಧನ್ಯವಾದ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Published On - 5:49 pm, Fri, 8 November 19

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?