AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯೋದಯ ರೇಷನ್​​ ಕಾರ್ಡುದಾರರಿಗೆ ಆಯುಷ್ಮಾನ್​​​ ಕಾರ್ಡ್​​​ ನೀಡಲು ಸರ್ಕಾರ ನಿರ್ಧಾರ

ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದ್ದು ಇಲ್ಲಿಯವರೆಗೆ ಆಯುಷ್ಮಾನ್ ಕಾರ್ಡ್ ಇಲ್ಲದೇ ಇದ್ದರೆ ಅಂಥವರು ಜುಲೈ 20ರವರೆಗೆ ಅರ್ಜಿ ಸಲ್ಲಿಸಬಹುದು.

ಅಂತ್ಯೋದಯ ರೇಷನ್​​ ಕಾರ್ಡುದಾರರಿಗೆ ಆಯುಷ್ಮಾನ್​​​ ಕಾರ್ಡ್​​​ ನೀಡಲು ಸರ್ಕಾರ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 12, 2022 | 3:29 PM

Share

ದೆಹಲಿ: ಅಂತ್ಯೋದಯ ರೇಷನ್ ಕಾರ್ಡ್ (Antyodaya ration card) ಹೊಂದಿರುವವರಿಗೆ ಶುಭ ಸುದ್ದಿ. ಅದೇನೆಂದರೆ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಸಹಾಯ ಮಾಡುವ ಆಯುಷ್ಮಾನ್ ಕಾರ್ಡ್ (Ayushman card) ನೀಡಲು ಸರ್ಕಾರ ನಿರ್ಧರಿಸಿದೆ. ಆಯುಷ್ಮಾನ್ ಕಾರ್ಡ್ ಮಾಡಿಸುವುದಕ್ಕಾಗಿ ಸರ್ಕಾರವು ಜಿಲ್ಲೆ ಮತ್ತು ತಹಶಿಲ್​​​ಗಳಲ್ಲಿರುವ ಕಮ್ಯುನಿಟಿ ಹೆಲ್ತ್ ಸೆಂಟರ್​​ಗಳಲ್ಲಿ ಅಭಿಯಾನ ನಡೆಸಲಿದೆ. ಈ ಅಭಿಯಾನ ಮೂಲಕ ಎಲ್ಲ ಅಂತ್ಯೋದಯ ಕಾರ್ಡುದಾರರಿಗೆ ಆಯುಷ್ಮಾನ್ ಕಾರ್ಡ್ ಸಿಗುವಂತೆ ಮಾಡಲಾಗುತ್ತದೆ. ಜುಲೈ 20ರವರೆಗೆ ಈ ಅಭಿಯಾನ ನಡೆಯಲಿದೆ. ಇದರೊಂದಿಗೆ ಈ ಸೌಲಭ್ಯಗಳನ್ನು ಜನ್​​ ಸುವಿಧಾ ಕೇಂದ್ರಗಳಲ್ಲೂ ಆರಂಭಿಸಲು ಸರ್ಕಾರ ಆದೇಶಿಸಿದೆ. ಅಂತ್ಯೋದಯ ರೇಷನ್ ಕಾರ್ಡ್ ತೋರಿಸುವ ಮೂಲಕ ಜನ್ ಸುವಿಧಾ ಕೇಂದ್ರಗಳಲ್ಲಿಯೂ ಆಯುಷ್ಮಾನ್ ಕಾರ್ಡ್​​ಗೆ ಅರ್ಜಿ ಸಲ್ಲಿಸಬಹುದು. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಎಲ್ಲ ಅಂತ್ಯೋದಯ ಕಾರ್ಡುದಾರರಿಗೆ ಆಯುಷ್ಮಾನ್ ಕಾರ್ಡ್ ನೀಡುವಂತೆ ಆದೇಶಿಸಿದೆ. ಈ ಅಭಿಯಾನವು ಜುಲೈ 20ರ ವರೆಗೆ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ.

ಆಯುಷ್ಮಾನ್ ಕಾರ್ಡ್​​ಗೆ ಅರ್ಜಿ ಸಲ್ಲಿಕೆ ಹೇಗೆ?

ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದ್ದು ಇಲ್ಲಿಯವರೆಗೆ ಆಯುಷ್ಮಾನ್ ಕಾರ್ಡ್ ಇಲ್ಲದೇ ಇದ್ದರೆ ಅಂಥವರು ಜುಲೈ 20ರವರೆಗೆ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕ ಸೇವಾ ಕೇಂದ್ರ, ಆಯುಷ್ಮಾನ್ ಪ್ಯಾನೆಲ್ ಅಥವಾ ಜಿಲ್ಲಾಸ್ಪತ್ರೆಯೊಂದಿಗೆ ಇರುವ ಖಾಸಗಿ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹೋಗಿ ಅಲ್ಲಿ ಅಂತ್ಯೋದಯ ರೇಷನ್ ಕಾರ್ಡ್ ತೋರಿಸುವ ಮೂಲಕ ಆಯುಷ್ಮಾನ್ ಕಾರ್ಡ್ ಪಡೆಯಬಹುದು. ಪ್ರಸ್ತುತ ಹೊಸ ಆಯುಷ್ಮಾನ್ ಕಾರ್ಡ್ ಗಳನ್ನು ಸರ್ಕಾರ ಮಾಡುತ್ತಿಲ್ಲ. ಈಗಾಗಲೇ ಈ ಯೋಜನೆಯಲ್ಲಿರುವವರ ಹೆಸರಲ್ಲಿ ಮಾತ್ರ ಈಗ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆರೋಗ್ಯ ಸಮಸ್ಯೆ ಬಂದಾದ ಅಂತ್ಯೋದಯ ಕಾರ್ಡುದಾರರು ಆಸ್ಪತ್ರೆ ಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಜಿಲ್ಲಾ ವಿತರಣಾ ಅಧಿಕಾರಿಗೆ ಸರ್ಕಾರ ನಿರ್ದೇಶನ ನೀಡಿದೆ.

ಅಂತ್ಯೋದಯ ಕಾರ್ಡ್ ಯಾರಿಗೆ ಲಭಿಸುತ್ತದೆ?

ಬಿಪಿಎಲ್ ಅಥವಾ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅಂತ್ಯೋದಯ ರೇಷನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿರುವವರಿಗೆ ಪ್ರತಿ ತಿಂಗಳು ಕಡಿಮೆ ಬೆಲೆಗೆ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ. ಈ ಕಾರ್ಡುದಾರರಿಗೆ 35 ಕೆಜಿ ಗೋಧಿ ಮತ್ತು ಅಕ್ಕಿ ನೀಡಲಾಗುತ್ತದೆ. ಗೋಧಿ ಕೆಜಿಗೆ 2 ರೂ ಮತ್ತು ಅಕ್ಕಿ ಕೆಜಿಗೆ 3ರೂನಂತೆ ನೀಡಲಾಗುತ್ತದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು