AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯೋದಯ ರೇಷನ್​​ ಕಾರ್ಡುದಾರರಿಗೆ ಆಯುಷ್ಮಾನ್​​​ ಕಾರ್ಡ್​​​ ನೀಡಲು ಸರ್ಕಾರ ನಿರ್ಧಾರ

ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದ್ದು ಇಲ್ಲಿಯವರೆಗೆ ಆಯುಷ್ಮಾನ್ ಕಾರ್ಡ್ ಇಲ್ಲದೇ ಇದ್ದರೆ ಅಂಥವರು ಜುಲೈ 20ರವರೆಗೆ ಅರ್ಜಿ ಸಲ್ಲಿಸಬಹುದು.

ಅಂತ್ಯೋದಯ ರೇಷನ್​​ ಕಾರ್ಡುದಾರರಿಗೆ ಆಯುಷ್ಮಾನ್​​​ ಕಾರ್ಡ್​​​ ನೀಡಲು ಸರ್ಕಾರ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 12, 2022 | 3:29 PM

Share

ದೆಹಲಿ: ಅಂತ್ಯೋದಯ ರೇಷನ್ ಕಾರ್ಡ್ (Antyodaya ration card) ಹೊಂದಿರುವವರಿಗೆ ಶುಭ ಸುದ್ದಿ. ಅದೇನೆಂದರೆ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಸಹಾಯ ಮಾಡುವ ಆಯುಷ್ಮಾನ್ ಕಾರ್ಡ್ (Ayushman card) ನೀಡಲು ಸರ್ಕಾರ ನಿರ್ಧರಿಸಿದೆ. ಆಯುಷ್ಮಾನ್ ಕಾರ್ಡ್ ಮಾಡಿಸುವುದಕ್ಕಾಗಿ ಸರ್ಕಾರವು ಜಿಲ್ಲೆ ಮತ್ತು ತಹಶಿಲ್​​​ಗಳಲ್ಲಿರುವ ಕಮ್ಯುನಿಟಿ ಹೆಲ್ತ್ ಸೆಂಟರ್​​ಗಳಲ್ಲಿ ಅಭಿಯಾನ ನಡೆಸಲಿದೆ. ಈ ಅಭಿಯಾನ ಮೂಲಕ ಎಲ್ಲ ಅಂತ್ಯೋದಯ ಕಾರ್ಡುದಾರರಿಗೆ ಆಯುಷ್ಮಾನ್ ಕಾರ್ಡ್ ಸಿಗುವಂತೆ ಮಾಡಲಾಗುತ್ತದೆ. ಜುಲೈ 20ರವರೆಗೆ ಈ ಅಭಿಯಾನ ನಡೆಯಲಿದೆ. ಇದರೊಂದಿಗೆ ಈ ಸೌಲಭ್ಯಗಳನ್ನು ಜನ್​​ ಸುವಿಧಾ ಕೇಂದ್ರಗಳಲ್ಲೂ ಆರಂಭಿಸಲು ಸರ್ಕಾರ ಆದೇಶಿಸಿದೆ. ಅಂತ್ಯೋದಯ ರೇಷನ್ ಕಾರ್ಡ್ ತೋರಿಸುವ ಮೂಲಕ ಜನ್ ಸುವಿಧಾ ಕೇಂದ್ರಗಳಲ್ಲಿಯೂ ಆಯುಷ್ಮಾನ್ ಕಾರ್ಡ್​​ಗೆ ಅರ್ಜಿ ಸಲ್ಲಿಸಬಹುದು. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಎಲ್ಲ ಅಂತ್ಯೋದಯ ಕಾರ್ಡುದಾರರಿಗೆ ಆಯುಷ್ಮಾನ್ ಕಾರ್ಡ್ ನೀಡುವಂತೆ ಆದೇಶಿಸಿದೆ. ಈ ಅಭಿಯಾನವು ಜುಲೈ 20ರ ವರೆಗೆ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ.

ಆಯುಷ್ಮಾನ್ ಕಾರ್ಡ್​​ಗೆ ಅರ್ಜಿ ಸಲ್ಲಿಕೆ ಹೇಗೆ?

ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದ್ದು ಇಲ್ಲಿಯವರೆಗೆ ಆಯುಷ್ಮಾನ್ ಕಾರ್ಡ್ ಇಲ್ಲದೇ ಇದ್ದರೆ ಅಂಥವರು ಜುಲೈ 20ರವರೆಗೆ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕ ಸೇವಾ ಕೇಂದ್ರ, ಆಯುಷ್ಮಾನ್ ಪ್ಯಾನೆಲ್ ಅಥವಾ ಜಿಲ್ಲಾಸ್ಪತ್ರೆಯೊಂದಿಗೆ ಇರುವ ಖಾಸಗಿ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹೋಗಿ ಅಲ್ಲಿ ಅಂತ್ಯೋದಯ ರೇಷನ್ ಕಾರ್ಡ್ ತೋರಿಸುವ ಮೂಲಕ ಆಯುಷ್ಮಾನ್ ಕಾರ್ಡ್ ಪಡೆಯಬಹುದು. ಪ್ರಸ್ತುತ ಹೊಸ ಆಯುಷ್ಮಾನ್ ಕಾರ್ಡ್ ಗಳನ್ನು ಸರ್ಕಾರ ಮಾಡುತ್ತಿಲ್ಲ. ಈಗಾಗಲೇ ಈ ಯೋಜನೆಯಲ್ಲಿರುವವರ ಹೆಸರಲ್ಲಿ ಮಾತ್ರ ಈಗ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆರೋಗ್ಯ ಸಮಸ್ಯೆ ಬಂದಾದ ಅಂತ್ಯೋದಯ ಕಾರ್ಡುದಾರರು ಆಸ್ಪತ್ರೆ ಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಜಿಲ್ಲಾ ವಿತರಣಾ ಅಧಿಕಾರಿಗೆ ಸರ್ಕಾರ ನಿರ್ದೇಶನ ನೀಡಿದೆ.

ಅಂತ್ಯೋದಯ ಕಾರ್ಡ್ ಯಾರಿಗೆ ಲಭಿಸುತ್ತದೆ?

ಬಿಪಿಎಲ್ ಅಥವಾ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅಂತ್ಯೋದಯ ರೇಷನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿರುವವರಿಗೆ ಪ್ರತಿ ತಿಂಗಳು ಕಡಿಮೆ ಬೆಲೆಗೆ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ. ಈ ಕಾರ್ಡುದಾರರಿಗೆ 35 ಕೆಜಿ ಗೋಧಿ ಮತ್ತು ಅಕ್ಕಿ ನೀಡಲಾಗುತ್ತದೆ. ಗೋಧಿ ಕೆಜಿಗೆ 2 ರೂ ಮತ್ತು ಅಕ್ಕಿ ಕೆಜಿಗೆ 3ರೂನಂತೆ ನೀಡಲಾಗುತ್ತದೆ.

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು