AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..

Bhagat Singh Koshyari: ನನಗೆ ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ ನಾನಿಂದು ಹಿಂಗೋಲಿಗೆ ಆಗಮಿಸಿ, ಇಲ್ಲಿನ ನೀರಾವರಿ, ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ ಎಂದು ರಾಜ್ಯಪಾಲರು ಹೇಳಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..
ಅಪಘಾತಕ್ಕೀಡಾದ ಮೂರು ವಾಹನಗಳು (ಚಿತ್ರ ಕೃಪೆ-ಟಿವಿ 9 ಮರಾಠಿ)
TV9 Web
| Edited By: |

Updated on:Aug 06, 2021 | 5:29 PM

Share

ಹಿಂಗೋಲಿ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ (Bhagat Singh Koshyari) ಅವರ ಬೆಂಗಾವಲು ವಾಹನಗಳಿಗೆ ಅಪಘಾತ ಆಗಿದೆ. ಭಗತ್​ ಸಿಂಗ್ ಕೋಶ್ಯಾರಿ ಸದ್ಯ ಹಿಂಗೋಲಿ ಪ್ರವಾಸದಲ್ಲಿದ್ದಾರೆ. ಅವರ ರಕ್ಷಣೆಗೆ ಇದ್ದ ಬೆಂಗಾವಲು ವಾಹನಗಳಲ್ಲಿ ಮೂರು ವಾಹನಗಳು ಅಪಘಾತಕ್ಕೀಡಾಗಿವೆ. ನರಸಿ ನಾಮ್​ದೇವ್​ಗೆ ತೆರಳುತ್ತಿದ್ದ ಮಾರ್ಗದಲ್ಲಿ ಈ ಆ್ಯಕ್ಸಿಡೆಂಟ್ (Accident)​ ಆಗಿದ್ದು, ಮೂರು ಕಾರುಗಳಿಗೆ ಸಣ್ಣಪುಟ್ಟ ಹಾನಿಯುಂಟಾಗಿದೆ. ಯಾರಿಗೂ ಗಂಭೀರ ಪ್ರಮಾನದಲ್ಲಿ ಗಾಯ ಆಗಿಲ್ಲ. ಇಂದು ಬೆಳಗ್ಗೆ 10.30ಕ್ಕೆ ಸರಿಯಾಗಿ ಕೋಶ್ಯಾರಿ ಅವರು ಔಂಧ ನಾಗನಾಥ ಮಾರ್ಗವಾಗಿ ಹಿಂಗೋಲಿಯನ್ನು ತಲುಪಿದ್ದಾರೆ.

ನನಗೆ ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ ನಾನಿಂದು ಹಿಂಗೋಲಿಗೆ ಆಗಮಿಸಿ, ಇಲ್ಲಿನ ನೀರಾವರಿ, ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ ಎಂದು ರಾಜ್ಯಪಾಲರು ಹೇಳಿಕೊಂಡಿದ್ದಾರೆ. ಹಾಗೇ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸಿದ್ದಾರೆ. ಈ ಸಭೆಯ ಬಳಿಕ ನರಸಿ ನಾಮ್​ದೇವ್​​ಗೆ ರಾಜ್ಯಪಾಲರು ಹೊರಡಲು ಸಿದ್ಧರಾದರು. ಆಗ ಅಲ್ಲಿಂದ ತಕ್ಷಣವೇ ಅವರ ಬೆಂಗಾವಲು ವಾಹನಗಳೂ ಹೊರಟವು. ನರಸಿ ನಾಮ್​ದೇವ್​​ ತಲುಪುತ್ತಿದ್ದಂತೆ ಮೊದಲು ಅಗ್ನಿಶಾಮಕ ಇಲಾಖೆ ವಾಹನದ ಬ್ರೇಕ್​ ಫೇಲ್​ ಆಯಿತು. ಒಮ್ಮೆಲೇ ನಿಂತ ಈ ವಾಹನಕ್ಕೆ ಉಳಿದೆರಡು ವಾಹನಗಳು ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ದೊಡ್ಡದೇನೂ ಅವಘಡ ಆಗಿಲ್ಲ.

ಇದನ್ನೂ ಓದಿ: Sherlyn Chopra: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಪೊಲೀಸರ ಮುಂದೆ ಹಾಜರಾದ ನಟಿ ಶೆರ್ಲಿನ್ ಚೋಪ್ರಾ

ಮೈಸೂರು: ವರ್ಷದ ಕೊನೆಯ ಆಷಾಡ ಶುಕ್ರವಾರವೂ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

Published On - 5:28 pm, Fri, 6 August 21

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ