AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..

Bhagat Singh Koshyari: ನನಗೆ ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ ನಾನಿಂದು ಹಿಂಗೋಲಿಗೆ ಆಗಮಿಸಿ, ಇಲ್ಲಿನ ನೀರಾವರಿ, ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ ಎಂದು ರಾಜ್ಯಪಾಲರು ಹೇಳಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..
ಅಪಘಾತಕ್ಕೀಡಾದ ಮೂರು ವಾಹನಗಳು (ಚಿತ್ರ ಕೃಪೆ-ಟಿವಿ 9 ಮರಾಠಿ)
TV9 Web
| Edited By: |

Updated on:Aug 06, 2021 | 5:29 PM

Share

ಹಿಂಗೋಲಿ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ (Bhagat Singh Koshyari) ಅವರ ಬೆಂಗಾವಲು ವಾಹನಗಳಿಗೆ ಅಪಘಾತ ಆಗಿದೆ. ಭಗತ್​ ಸಿಂಗ್ ಕೋಶ್ಯಾರಿ ಸದ್ಯ ಹಿಂಗೋಲಿ ಪ್ರವಾಸದಲ್ಲಿದ್ದಾರೆ. ಅವರ ರಕ್ಷಣೆಗೆ ಇದ್ದ ಬೆಂಗಾವಲು ವಾಹನಗಳಲ್ಲಿ ಮೂರು ವಾಹನಗಳು ಅಪಘಾತಕ್ಕೀಡಾಗಿವೆ. ನರಸಿ ನಾಮ್​ದೇವ್​ಗೆ ತೆರಳುತ್ತಿದ್ದ ಮಾರ್ಗದಲ್ಲಿ ಈ ಆ್ಯಕ್ಸಿಡೆಂಟ್ (Accident)​ ಆಗಿದ್ದು, ಮೂರು ಕಾರುಗಳಿಗೆ ಸಣ್ಣಪುಟ್ಟ ಹಾನಿಯುಂಟಾಗಿದೆ. ಯಾರಿಗೂ ಗಂಭೀರ ಪ್ರಮಾನದಲ್ಲಿ ಗಾಯ ಆಗಿಲ್ಲ. ಇಂದು ಬೆಳಗ್ಗೆ 10.30ಕ್ಕೆ ಸರಿಯಾಗಿ ಕೋಶ್ಯಾರಿ ಅವರು ಔಂಧ ನಾಗನಾಥ ಮಾರ್ಗವಾಗಿ ಹಿಂಗೋಲಿಯನ್ನು ತಲುಪಿದ್ದಾರೆ.

ನನಗೆ ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ ನಾನಿಂದು ಹಿಂಗೋಲಿಗೆ ಆಗಮಿಸಿ, ಇಲ್ಲಿನ ನೀರಾವರಿ, ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ ಎಂದು ರಾಜ್ಯಪಾಲರು ಹೇಳಿಕೊಂಡಿದ್ದಾರೆ. ಹಾಗೇ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸಿದ್ದಾರೆ. ಈ ಸಭೆಯ ಬಳಿಕ ನರಸಿ ನಾಮ್​ದೇವ್​​ಗೆ ರಾಜ್ಯಪಾಲರು ಹೊರಡಲು ಸಿದ್ಧರಾದರು. ಆಗ ಅಲ್ಲಿಂದ ತಕ್ಷಣವೇ ಅವರ ಬೆಂಗಾವಲು ವಾಹನಗಳೂ ಹೊರಟವು. ನರಸಿ ನಾಮ್​ದೇವ್​​ ತಲುಪುತ್ತಿದ್ದಂತೆ ಮೊದಲು ಅಗ್ನಿಶಾಮಕ ಇಲಾಖೆ ವಾಹನದ ಬ್ರೇಕ್​ ಫೇಲ್​ ಆಯಿತು. ಒಮ್ಮೆಲೇ ನಿಂತ ಈ ವಾಹನಕ್ಕೆ ಉಳಿದೆರಡು ವಾಹನಗಳು ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ದೊಡ್ಡದೇನೂ ಅವಘಡ ಆಗಿಲ್ಲ.

ಇದನ್ನೂ ಓದಿ: Sherlyn Chopra: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಪೊಲೀಸರ ಮುಂದೆ ಹಾಜರಾದ ನಟಿ ಶೆರ್ಲಿನ್ ಚೋಪ್ರಾ

ಮೈಸೂರು: ವರ್ಷದ ಕೊನೆಯ ಆಷಾಡ ಶುಕ್ರವಾರವೂ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

Published On - 5:28 pm, Fri, 6 August 21

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ