AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠ ಮೀಸಲಾತಿಗೆ ಒಪ್ಪಿಗೆ ನೀಡಿದ ಸರ್ಕಾರ: 14 ವರ್ಷಗಳ ಹೋರಾಟ ಅಂತ್ಯ, ಮನೋಜ್ ಜಾರಂಗೆ ಯಾರು? ಹೋರಾಟ ಹೇಗಿತ್ತು?

ಮರಾಠ ಕೋಟಾಕ್ಕಾಗಿ ನಿರಂತರವಾಗಿ ಪ್ರತಿಭಟನೆ ಮಾಡಿದ ಮನೋಜ್ ಜಾರಂಗೆ ಪಾಟೀಲ್ ಅವರಿಗೆ ಕೊನೆಗೂ ಜಯ ಸಿಕ್ಕಿದೆ. ಮನೋಜ್ ಅವರು ಎತ್ತಿದ್ದ ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿ, ಸುಗ್ರೀವಾಜ್ಞೆ ಹೊರಡಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಇವರ ನಿರಂತರ ಹೋರಾಟದ ಫಲವಾಗಿ ಅವರು ಎತ್ತಿರುವ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಹೇಳಿದೆ.

ಮರಾಠ ಮೀಸಲಾತಿಗೆ ಒಪ್ಪಿಗೆ ನೀಡಿದ ಸರ್ಕಾರ: 14 ವರ್ಷಗಳ ಹೋರಾಟ ಅಂತ್ಯ, ಮನೋಜ್ ಜಾರಂಗೆ ಯಾರು? ಹೋರಾಟ ಹೇಗಿತ್ತು?
ಅಕ್ಷಯ್​ ಪಲ್ಲಮಜಲು​​
|

Updated on: Jan 27, 2024 | 10:39 AM

Share

ಮುಂಬೈ, ಜ.27: ಮರಾಠ ಕೋಟಾಕ್ಕಾಗಿ ನಿರಂತರವಾಗಿ ಪ್ರತಿಭಟನೆ ಮಾಡಿದ ಮನೋಜ್ ಜಾರಂಗೆ ಪಾಟೀಲ್ ಅವರಿಗೆ ಕೊನೆಗೂ ಜಯ ಸಿಕ್ಕಿದೆ. ಮನೋಜ್ ಅವರು ಎತ್ತಿದ್ದ ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿ, ಸುಗ್ರೀವಾಜ್ಞೆ ಹೊರಡಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಇವರ ನಿರಂತರ ಹೋರಾಟದ ಫಲವಾಗಿ ಅವರು ಎತ್ತಿರುವ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಹೇಳಿದೆ. ಇದೀಗ ಮನೋಜ್ ತಮ್ಮ ಉಪವಾಸ ಮತ್ತು ಆಂದೋಲನವನ್ನು ಹಿಂಪಡೆಯಲು ಮುಂದಾಗಿದ್ದಾರೆ.

ಮನೋಜ್ ಜಾರಂಗೆ ಪಾಟೀಲ್ ಅವರು ಇತರ ಹಿಂದುಳಿದ ವರ್ಗಗಳ (OBC) ಅಡಿಯಲ್ಲಿ ತನ್ನ (ಮರಾಠ ಕೋಟಾ) ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡಬೇಕು ಎಂಬ ಒತ್ತಾಯವನ್ನು ಮಾಡಿ ನೆನ್ನೆ(ಜ.26) ಮುಂಬೈನಲ್ಲಿ ಪ್ರತಿಭಟನೆ ಮಾಡುವ ಪ್ಲಾನ್​​​​ ಹಾಕಿಕೊಂಡಿದ್ದರು. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ಜನರನ್ನು ಸೇರಿಸುವ ಕಾರ್ಯ ನಡೆದಿತ್ತು. ಆದರೆ ಪ್ರತಿಭಟನೆ ಮುಂಬೈ ಒಳಗೆ ಬರುವ ಮುನ್ನವೇ ಸರ್ಕಾರ ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂಬ ಭರವಸೆಯನ್ನು ನೀಡಿದೆ. ಸುಗ್ರೀವಾಜ್ಞೆ ಹೊರಡಿಸಿದೆ.

ಮನೋಜ್ ಜಾರಂಗೆ ಪಾಟೀಲ್ ಅವರು ಮರಾಠ ಸಮುದಾಯಕ್ಕೆ ಒಬಿಸಿ ಅಡಿಯಲ್ಲಿ ಮೀಸಲಾತಿ ಬೇಕು ಎಂಬುದು ಅವರ ಪ್ರಮುಖ ಹೋರಾಟವಾಗಿತ್ತು. ಆದರೆ ಈ ಬೇಡಿಕೆಯನ್ನು ಸರ್ಕಾರ ಈಡೇರಿಸಬಾರದು ಎಂಬುದು ಕಾನೂನು ತಜ್ಞರು, ಖ್ಯಾತ ನ್ಯಾಯಶಾಸ್ತ್ರಜ್ಞರು, ಸಮಾಜದ ದೊಡ್ಡ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಒತ್ತಡವನ್ನು ಹಾಕಿದ್ದರು. ಇದರ ಜತೆಗೆ ಒಬಿಸಿ ಸಮುದಾಯದ ಮುಖಂಡರು ಕೂಡ ಇದಕ್ಕೆ ಒತ್ತಡವನ್ನು ಹಾಕಿದರು.

ಉಚಿತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿ ಸಿಗಬೇಕು

ನಾವು ಈ ಪ್ರತಿಭಟನೆಯಿಂದ ತುಂಬಾ ನೋವು ತಿಂದಿದ್ದೇವೆ. ನಮಗೂ ಒಬಿಸಿ ಅಡಿಯಲ್ಲಿ ಮೀಸಲಾತಿಬೇಕು, ನಮ್ಮ ಮಕ್ಕಳಿಗೂ ಒಳ್ಳೆಯ ಶಿಕ್ಷಣ ಸಿಗಬೇಕು. ಉಚಿತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿ ಸಿಗಬೇಕು ಅದಕ್ಕಾಗಿ ನಮಗೂ ಒಬಿಸಿ ಅಡಿಯಲ್ಲಿ ಮೀಸಲಾತಿ ನೀಡಿ ಎಂದು ಪ್ರತಿಭಟನೆಯನ್ನು ಮಾಡಲಾಗಿತ್ತು.

ಎಲ್ಲವನ್ನು ತಾಳ್ಮೆಯಿಂದ ಸಹಿಸಿಕೊಂಡಿದ್ದೇವೆ:

ನಮ್ಮ ಸಮುದಾಯ ಮೇಲೆ ಹಲವು ದಾಳಿಗಳು ನಡೆದಿದೆ. ಇಂದಿಗೂ ನಡೆಯುತ್ತಿದೆ. ಪ್ರತಿಭಟನೆ ಹಂತದಲ್ಲೂ ನಮ್ಮನ್ನು ಅವಮಾನಿಸಲಾಗಿತ್ತು. ನಮ್ಮ ಮೇಲೆ ಅನೇಕ ಕೇಸ್​​ಗಳನ್ನು ಹಾಕಿದ್ರು, ರಾಜಕೀಯವಾಗಿ ಒತ್ತಡಗಳು ಬಂದಿತ್ತು. ಆದರೆ ನಾವು ಯಾವುದಕ್ಕೂ ಕೋಪದಿಂದ ಉತ್ತರಿಸಿಲ್ಲ. ಎಲ್ಲವನ್ನು ತಾಳ್ಮೆಯಿಂದ ಸಹಿಸಿಕೊಂಡಿದ್ದೇವೆ.

ಇದನ್ನೂ ಓದಿ: ಮರಾಠಾ ಮೀಸಲಾತಿ: ಮುಂಬೈ ಕಡೆಗೆ ಮೆರವಣಿಗೆ ಹೊರಡುತ್ತಿದ್ದಂತೆ ಮನೋಜ್ ಜಾರಂಗೆ ಬೇಡಿಕೆಗಳಿಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ

ನಮ್ಮ ಚಳವಳಿ ಮುಗಿದಿಲ್ಲ

ನಮ್ಮ ಚಳವಳಿ ಮುಗಿದಿಲ್ಲ, ಸರ್ಕಾರ ಭರವಸೆ ನೀಡಿದೆ ಅಷ್ಟೇ. ಈ ಬಗ್ಗೆ ಈಗಾಗಲೇ ಸರ್ಕಾರ ನಮ್ಮ ಜತೆಗೆ ಮಾತನಾಡಿದೆ. ಆದರೆ ಆ ಭರವಸೆ ಕಾನೂನು ರೂಪಕ್ಕೆ ಬರುವವರೆಗೆ ಸಮಾಧಾನವಿಲ್ಲ. ಒಂದು ವೇಳೆ ಸರ್ಕಾರ ಉಲ್ಟಾ ಹೊಡೆದರೆ ಮತ್ತೆ ಈ ಚಳವಳಿ ಮುಂದುವರಿಯುವುದು ಎಂದು ಹೇಳಿದ್ದಾರೆ.

ಚಳುವಳಿ ಯಾವಾಗ ಪ್ರಾರಂಭವಾಯಿತು?

ಮನೋಜ್ ಜಾರಂಗೆ ಪಾಟೀಲ್ ಅವರು 2011 ರಿಂದ ಮರಾಠ ಸಮುದಾಯಕ್ಕೆ ಒಬಿಸಿ ಅಡಿಯಲ್ಲಿ ಮೀಸಲಾತಿ ನೀಡಬೇಕು ಎಂಬ ಒತ್ತಾಯವನ್ನು ಮಾಡಿದರು. ಅಲ್ಲಿಂದ ಮೀಸಲಾತಿ ಚಳವಳಿಯಲ್ಲಿ ಸಕ್ರಿಯರಾದರು. ಈ ವಿಚಾರವಾಗಿ 2014ರಲ್ಲಿ ಛತ್ರಪತಿ ಸಂಭಾಜಿನಗರದಲ್ಲಿ ವಿಭಾಗೀಯ ಕಮಿಷನರೇಟ್ ಎದುರು ಧರಣಿ ನಡೆಸಿದ್ದರು. ನಂತರ, 2015ರಿಂದ 2023ವರೆಗೆ ನಡುವೆ 30 ಕ್ಕೂ ಹೆಚ್ಚು ಆಂದೋಲನಗಳನ್ನು ಮಾಡಿದ್ದಾರೆ.

ಸಮುದಾಯ ಮೀಸಲಾತಿಗಾಗಿ ಭೂಮಿ ಮಾರಾಟ

ಮನೋಜ್ ಜಾರಂಗೆ ಪಾಟೀಲ್ ಬೀಡ್ ಜಿಲ್ಲೆಯ ಮೋಟೋರಿ ಗ್ರಾಮದ ನಿವಾಸಿ. ಅವರು ತಮ್ಮ ಸಮುದಾಯ ಮೀಸಲಾತಿಗಾಗಿ ತಮ್ಮ ಮನೆಯನ್ನು ಮಾರಾಟ ಮಾಡಿದ್ದಾರೆ. ಜೀವನ ನಡೆಸಲು ಹೋಟೆಲ್ ಒಂದರಲ್ಲಿ ಕೆಲಸ ಮಾಡಲು ಆರಂಭಿಸಿದರು. ತಮ್ಮ ಚಳುವಳಿಯನ್ನು ಮಾಡಲು ಒಂದು ಸಂಘಟನೆ ಬೇಕು ಎಂದು ಮರಾಠಾ ಚಳವಳಿಯನ್ನು ಸ್ಥಾಪಿಸಿದರು. ಇದಕ್ಕಾಗಿ ತಮ್ಮ ಭೂಮಿಯನ್ನು ಮಾರಾಟ ಮಾಡಿದರು. ಮರಾಠ ಸಮುದಾಯದ ಮೀಸಲಾತಿಗಾಗಿ ಹಲವು ಪಾದಯಾತ್ರೆಗಳು ನಡೆದಿವೆ. ನಿರಂತರ ಉಪವಾಸ ಮಾಡಿದರು. ರಸ್ತೆ ಪ್ರತಿಭಟನೆ, ಹೀಗೆ ಅನೇಕ ಆಂದೋಲವನ್ನು ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ