AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮ, ಸಾಮಾಜಿಕ ಮಾಧ್ಯಮಗಳಲ್ಲಿ ರಾಮ ಮಂದಿರ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ: ಕೇಂದ್ರ

ಸಮಾರಂಭದ ಮುಂಚೆಯೇ, ವಿಐಪಿ ಟಿಕೆಟ್‌ಗಳು, ರಾಮಮಂದಿರ ಪ್ರಸಾದವನ್ನು ಒದಗಿಸುವುದಾಗಿ ಹೇಳಿಕೊಳ್ಳುವ ಹಲವಾರು ವಂಚನೆಯ ಲಿಂಕ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಹಿನ್ನಲೆಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಸುಳ್ಳು ಸುದ್ದಿ ಹರಡದಂತೆ ಎಚ್ಚರವಹಿಸಲು ಸಲಹೆ ನೀಡಿದೆ.

ಮಾಧ್ಯಮ, ಸಾಮಾಜಿಕ ಮಾಧ್ಯಮಗಳಲ್ಲಿ ರಾಮ ಮಂದಿರ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ: ಕೇಂದ್ರ
ರಾಮಮಂದಿರ
Follow us
ರಶ್ಮಿ ಕಲ್ಲಕಟ್ಟ
|

Updated on: Jan 20, 2024 | 5:16 PM

ದೆಹಲಿ ಜನವರಿ 20: ರಾಮ ಮಂದಿರದ (Ram mandir) ಘಟನೆಗೆ ಸಂಬಂಧಿಸಿದ ಸುಳ್ಳು ಮತ್ತು ತಿರುಚಿದ ವಿಷಯವನ್ನು ಪ್ರಕಟಿಸುವುದನ್ನು ತಡೆಯಲು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸರ್ಕಾರ ಕೇಳಿಕೊಂಡಿದೆ. ಭವ್ಯ ಸಮಾರಂಭದಲ್ಲಿ, ಜನವರಿ 22 ರಂದು ಭಗವಾನ್ ರಾಮ ಲಲ್ಲಾನ (Ram lalla) ಪ್ರಾಣ-ಪ್ರತಿಷ್ಠೆಯೊಂದಿಗೆ ರಾಮ ಮಂದಿರವನ್ನು ಉದ್ಘಾಟಿಸಲಾಗುವುದು. ಈ ಕಾರ್ಯಕ್ರಮಕ್ಕೆ ಒಂದು ವಾರ ಮುಂಚಿತವಾಗಿ, ಜನವರಿ 16 ರಂದು ವಿಧಿವಿಧಾನ ಆಚರಣೆಗಳು ಪ್ರಾರಂಭವಾದವು. ಸಮಾರಂಭದ ಮುಂಚೆಯೇ, ವಿಐಪಿ ಟಿಕೆಟ್‌ಗಳು, ರಾಮಮಂದಿರ ಪ್ರಸಾದವನ್ನು ಒದಗಿಸುವುದಾಗಿ ಹೇಳಿಕೊಳ್ಳುವ ಹಲವಾರು ವಂಚನೆಯ ಲಿಂಕ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ

“ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿದೆ, ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುತ್ತದೆ” ಇದಲ್ಲದೆ, ತಮ್ಮ ಶ್ರದ್ಧೆಯ ಭಾಗವಾಗಿ, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಮೇಲೆ ತಿಳಿಸಲಾದ ಸ್ವಭಾವದ ಮಾಹಿತಿಯನ್ನು ಹೋಸ್ಟ್ ಮಾಡಲು, ಪ್ರದರ್ಶಿಸಲು ಅಥವಾ ಪ್ರಕಟಿಸಲು ಸಮಂಜಸವಾದ ಪ್ರಯತ್ನಗಳನ್ನು ಮಾಡಲು ಸಲಹೆ ನೀಡಲಾಗುತ್ತದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ .

ಇ-ಕಾಮರ್ಸ್ ಸೈಟ್ ಅಮೆಜಾನ್ ನಲ್ಲಿ’ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದ್’ ಎಂದು ಸಿಹಿತಿಂಡಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದಿಂದ ನೋಟಿಸ್ ಅನ್ನು ಸ್ವೀಕರಿಸಿದೆ. ಅಮೆಜಾನ್ ತನ್ನ ನೀತಿಗಳಿಗೆ ಅನುಗುಣವಾಗಿ ಅಂತಹ ಮಾರಾಟ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ:ಅಯೋಧ್ಯೆ ರಾಮ ಮಂದಿರ ಪ್ರಸಾದ; ಎಂದು ಸಿಹಿತಿಂಡಿ ಮಾರಾಟ ಮಾಡಿದ್ದಕ್ಕೆ ಅಮೆಜಾನ್‌ಗೆ ಕೇಂದ್ರ ಸರ್ಕಾರ ನೋಟೀಸ್

ಕೆಲವು ದಿನಗಳ ಹಿಂದೆ, ಪ್ರಾಣ-ಪ್ರತಿಷ್ಠಾ ಕಾರ್ಯಕ್ರಮಕ್ಕಾಗಿ ತ್ವರಿತ ವಿಐಪಿ ಟಿಕೆಟ್‌ಗಳ ಭರವಸೆಯೊಂದಿಗೆ ನಕಲಿ QR ಕೋಡ್‌ನೊಂದಿಗೆ WhatsApp ಸಂದೇಶವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಯಿತು. ಪ್ರಾಣ-ಪ್ರತಿಷ್ಠಾ ಕಾರ್ಯಕ್ರಮಕ್ಕಿರುವ ಆಹ್ವಾನವನ್ನು ಆಯ್ದ ಅತಿಥಿಗಳಿಗೆ ದೇವಾಲಯದ ಟ್ರಸ್ಟ್ ಮಾತ್ರ ಕಳುಹಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ