ಸರ್ಕಾರಿ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿ ತಲುಪಬೇಕು, ಇಲ್ಲವೇ ಅರ್ಧ ದಿನದ ರಜೆ ಕಡಿತ: ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದೆ. ಇನ್ನು ಮುಂದೆ ಬೆಳಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶವನ್ನು ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಹೇಳಿದೆ.

ಸರ್ಕಾರಿ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿ ತಲುಪಬೇಕು, ಇಲ್ಲವೇ ಅರ್ಧ ದಿನದ ರಜೆ ಕಡಿತ: ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ಅಧಿಕಾರಿಗಳು ಹಾಗೂ ಮೋದಿ

Updated on: Jun 24, 2024 | 9:46 AM

ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್​​​ ಆದೇಶವೊಂದನ್ನು ನೀಡಿದೆ. ಕಛೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್ ಅವಧಿಯೂ ಸೇರಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಸುತ್ತೋಲೆ ಹೊರಡಿಸಿದೆ. ನೌಕರರು ತಮ್ಮ ಕಚೇರಿಗಳಿಗೆ ಬೆಳಗ್ಗೆ 9:15 ಕ್ಕೆ ತಲುಪಬೇಕು ಹಾಗೂ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಳಸಿಕೊಂಡು ತಮ್ಮ ಹಾಜರಾತಿಯನ್ನು ಹಾಕಬೇಕು ಎಂದು ಸೂಚಿಸಿದೆ.

ಸಿಬ್ಬಂದಿಗಳು ಒಂದು ವೇಳೆ ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ರವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳು ಕಚೇರಿಗೆ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವವರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇದನ್ನು ತಡೆಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೋವಿಡ್-19ನಿಂದ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಬಳಕೆಯನ್ನು ಅಮಾನತುಗೊಳಿಸಲಾಗಿತ್ತು. ಆದರೆ ಇದೀಗ ಆ ವ್ಯವಸ್ಥೆಯನ್ನು ಮತ್ತೆ ಜಾರಿ ಮಾಡಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಹಾಕಲೇಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ: ಉನ್ನತ ಮಟ್ಟದ ಸಮಿತಿ ರಚನೆ, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಬದ್ಧತೆ: ಧರ್ಮೇಂದ್ರ ಪ್ರಧಾನ್

ಸಿಬ್ಬಂದಿ ರಜೆ ಬಗ್ಗೆ ಮುಂಚಿತವಾಗಿ ತಿಳಿಸಬೇಕು

ವರದಿಯ ಪ್ರಕಾರ, ಸಿಬ್ಬಂದಿಗಳಿಗೆ ಒಂದು ದಿನ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಮುಂಚಿತವಾಗಿ ತಿಳಿಸಲು ನೌಕರರಿಗೆ ಸುತ್ತೋಲೆ ಹೇಳಲಾಗಿದೆ. ಇದಕ್ಕಾಗಿ ಕ್ಯಾಶುಯಲ್ ರಜೆಯನ್ನು ಬಳಸಿಕೊಳ್ಳಬೇಕು ಎಂದು ಹೇಳಿದೆ. ಇನ್ನು ಈ ಬಗ್ಗೆ ಹಿರಿಯ ಅಧಿಕಾರಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಿಬ್ಬಂದಿಗಳು ಸಂಜೆ 7 ರ ನಂತರ ಹೊರಡುವುದರಿಂದ ಅವರಿಗೆ ನಿಗದಿತ ಕೆಲಸದ ಸಮಯವಿಲ್ಲ. ಹೆಚ್ಚಿದ ಡಿಜಿಟಲೀಕರಣವು ಅನೇಕ ಫೈಲ್‌ಗಳನ್ನು ವಿದ್ಯುನ್ಮಾನವಾಗಿ ಅವರಿಗೆ ಲಭ್ಯವಾಗುವಂತೆ ಮಾಡಿದೆ. ಇದು ಮನೆಯಿಂದಲೂ ಕೆಲಸ ಮಾಡುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಕೋವಿಡ್ -19 ಲಸದ ಸಂಸ್ಕೃತಿಯಲ್ಲಿ ತುಂಬಾ ಬದಲಾವಣೆಯನ್ನು ತಂದಿದೆ. ಲಾಕ್‌ಡೌನ್‌ ಸಮಯದಲ್ಲಿ ಮಾಡಿದ ವರ್ಕ್​​​​ ಫ್ರಮ್ ಹೋಮ್ ವ್ಯವಸ್ಥೆ, ಈಗಲೂ ರೂಢಿಯಲ್ಲಿದೆ. ಇದು ವಾಸ್ತವವಾಗಿ ತಮ್ಮ ಉತ್ಪಾದಕತೆಯ ಮಟ್ಟವನ್ನು ಹೆಚ್ಚಿಸಿದೆ ಎಂದು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಉದ್ಯೋಗಿಗಳು ವಾದಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us