AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತೆ ವಿಚಾರದಲ್ಲಿ NCC ಪಾತ್ರ ಹೆಚ್ಚಿಸಲು ಭಾರತ ಸರ್ಕಾರ ಶ್ರಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಸರ್ಕಾರವು ಎನ್​ಸಿಸಿಯ ಪಾತ್ರವನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ. ಗಡಿಭಾಗದ ಹಾಗೂ ದೇಶದ ಕಡಲ ತೀರದ ಭದ್ರತೆಯನ್ನು ಹೆಚ್ಚಿಸುವಲ್ಲಿ ಎನ್​ಸಿಸಿ ಹೆಚ್ಚಿನ ಪಾತ್ರ ವಹಿಸುವಂತೆ ಪ್ರೋತ್ಸಾಹಿಸಲಾಗುವುದು.

ಭದ್ರತೆ ವಿಚಾರದಲ್ಲಿ NCC ಪಾತ್ರ ಹೆಚ್ಚಿಸಲು ಭಾರತ ಸರ್ಕಾರ ಶ್ರಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ
NCC ಪಥಸಂಚಲನ
TV9 Web
| Edited By: |

Updated on:Apr 06, 2022 | 8:36 PM

Share

ದೆಹಲಿ: ಅದು ನೆರೆ ಹಾವಳಿಯ ಪರಿಸ್ಥಿತಿಯಾಗಿರಲಿ ಅಥವಾ ಪ್ರಾಕೃತಿಕ ವಿಕೋಪದ ಸಂದರ್ಭವಾಗಿರಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ಭಾರತೀಯ ಜನತೆಗೆ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಕೊವಿಡ್ ಕಷ್ಟಕಾಲದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್​ ವಿದ್ಯಾರ್ಥಿಗಳು ಸಮಾಜದಲ್ಲಿ ಕೊರೊನಾ ನಿರ್ವಹಣೆಗೆ ಶ್ರಮಿಸಿದ್ದಾರೆ ಎಂದು ಸ್ಮರಿಸಿಕೊಂಡರು. ರಾಷ್ಟ್ರ ರಾಜಧಾನಿಯ ಕಾರ್ಯಪ್ಪ ಮೈದಾನದಲ್ಲಿ ಎನ್​ಸಿಸಿ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸರ್ಕಾರವು ಎನ್​ಸಿಸಿ ಪಾತ್ರವನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ. ಗಡಿ ಭಾಗದ ಹಾಗೂ ದೇಶದ ಕಡಲ ತೀರದ ಭದ್ರತೆಯನ್ನು ಹೆಚ್ಚಿಸುವಲ್ಲಿ ಎನ್​ಸಿಸಿ ಹೆಚ್ಚಿನ ಪಾತ್ರ ವಹಿಸುವಂತೆ ಪ್ರೋತ್ಸಾಹಿಸಲಾಗುವುದು ಎಂದು ಮೋದಿ ತಿಳಿಸಿದರು. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು, 175 ಜಿಲ್ಲೆಗಳ ಎನ್​ಸಿಸಿ ವೇದಿಕೆಗಳಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಇದಕ್ಕಾಗಿ ಸುಮಾರು 1 ಲಕ್ಷದಷ್ಟು ಎನ್​ಸಿಸಿ ಕೆಡೆಟ್​ಗಳಿಗೆ ಭೂಸೇನೆ, ವಾಯುಸೇನೆ, ಜಲಸೇನೆಯಿಂದ ತರಬೇತಿ ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ರೋಮಾಂಚಕಾರಿ ‘ವರ್ಟಿಕಲ್ ಚಾರ್ಲಿ’ ಹಾಗೂ ‘ಏಕಲವ್ಯ’ ಪ್ರದರ್ಶನ ತೋರಿದ ರಫೇಲ್ ಜೆಟ್ ವಿಮಾನ

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್​ಸಿಸಿ) ಕೆಡೆಟ್​ಗಳಿಂದ ಗೌರವ ಸ್ವೀಕರಿಸಿದರು. ಬಳಿಕ, ಹಲವು ಕಲಾವಿದರಿಂದ ಸಾಂಸ್ಕೃತಿಕ ಕಲಾ ಪ್ರದರ್ಶನಗಳು ಜರುಗಿದವು.

ಪ್ರಧಾನಿ ನರೇಂದ್ರ ಮೋದಿ ಗೌರವ ಸ್ವೀಕರಿಸುತ್ತಿರುವುದು.

ಕಲಾ ತಂಡಗಳ ಸಾಂಸ್ಕೃತಿಕ ಪ್ರದರ್ಶನಗಳು ಜನಮನಸೂರೆಗೊಂಡವು.

‘ನಿಮಗೆ ದುರಹಂಕಾರ ಬರಲು ರೈತರೇ ಕಾರಣ; ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ’

ಹೊಸ ಪುಸ್ತಕ Middle Class, Media and Modi | ಮಧ್ಯಮ ವರ್ಗ, ಮಾಧ್ಯಮವನ್ನು ಮೋದಿ ಆವರಿಸಿಕೊಂಡ ಪರಿಯಿದು

Published On - 6:12 pm, Thu, 28 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ