AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ವಿರುದ್ಧ ಎಲ್ಲ ಪ್ರಕರಣ ಹಿಂಪಡೆಯುವ ಭರವಸೆ: ಧರಣಿ ವಾಪಸ್ ಕುರಿತು ರೈತ ಸಂಘಟನೆಗಳ ಚರ್ಚೆ

ಕೃಷಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಹುತಾತ್ಮರಾದ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.

ರೈತರ ವಿರುದ್ಧ ಎಲ್ಲ ಪ್ರಕರಣ ಹಿಂಪಡೆಯುವ ಭರವಸೆ: ಧರಣಿ ವಾಪಸ್ ಕುರಿತು ರೈತ ಸಂಘಟನೆಗಳ ಚರ್ಚೆ
ರೈತರ ಪ್ರತಿಭಟನೆ
TV9 Web
| Edited By: |

Updated on: Dec 07, 2021 | 6:35 PM

Share

ದೆಹಲಿ: ಕೃಷಿ ಕಾಯ್ದೆ (Farm Laws) ವಿರೋಧಿಸಿ ಚಳವಳಿ ನಡೆಸುತ್ತಿದ್ದ ರೈತರ ವಿರುದ್ಧ ದಾಖಲಿಸಲಾಗಿದ್ದ ಎಲ್ಲ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರವು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಧರಣಿ ಸ್ಥಗಿತಗೊಳಿಸಲು ನಿರ್ಧರಿಸಿವೆ. ದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘಟನೆಗಳ ನಾಯಕರು ಕೇಂದ್ರ ಸರ್ಕಾರದ ಪ್ರಸ್ತಾವದ ಬಗ್ಗೆ ನಾಳೆ (ಡಿ.13) ಸಭೆ ಸೇರಿ ಚರ್ಚೆ ನಡೆಸಲಾಗುವುದು. ಧರಣಿ ಹಿಂಪಡೆಯುವ ಬಗ್ಗೆ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಉಳಿದ ಬೇಡಿಕೆಗಳ ಈಡೇರಿಕೆ ಬಗ್ಗೆ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಬೇಕು. ಹುತಾತ್ಮ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಸಮಿತಿಯಲ್ಲಿ ರೈತ ಸಂಘಟನೆಗಳ ನಾಯಕರೂ ಇರಬೇಕು. ವಿದ್ಯುತ್ ತಿದ್ದುಪಡಿ ಮಸೂದೆಯ ಕರಡು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಧರಣಿಯನ್ನು ಸಂಪೂರ್ಣ ಹಿಂಪಡೆಯಲು ರೈತ ಸಂಘಟನೆಗಳು ಸಮ್ಮತಿಸಿದ್ದು, ಅಧಿಕೃತ ಘೋಷಣೆ ಮಾಡುವುದಷ್ಟೇ ಬಾಕಿಯಿದೆ ಎಂಬ ಮಾತುಗಳು ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲವಾಗಿ ಕೇಳಿಬರುತ್ತಿವೆ. ಕಳೆದ ಒಂದೂವರೆ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ಕೇಂದ್ರ ಸರ್ಕಾರದ ಭರವಸೆಯನ್ನು ಒಪ್ಪಿಕೊಂಡಿದ್ದಾರೆ. ಈ ಕುರಿತು ಚರ್ಚಿಸಲು ನಾಳೆ (ಡಿ.13) ಮಧ್ಯಾಹ್ನ 2 ಗಂಟೆಗೆ ಸಿಂಘು ಗಡಿಯಲ್ಲಿ ಸಭೆ ನಡೆಸಲಾಗುವುದು. ಸಭೆಯಲ್ಲಿ ಪ್ರತಿಭಟನೆ ವಾಪಸ್ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿಭಟನೆ ವೇಳೆ ಮೃತಪಟ್ಟ 700 ರೈತರಿಗೆ ಸಿಂಘು ಬಳಿ ಹುತಾತ್ಮರ ಸ್ಮಾರಕ ನಿರ್ಮಿಸಲು ಭೂಮಿ ಕೊಡಬೇಕು. ಲಖೀಂಪುರ್ ಖೇರಿಯಲ್ಲಿ ಕಾರು ಹರಿಸಿ ರೈತರ ಸಾವಿಗೆ ಕಾರಣರಾದ ಸಚಿವ ಅಜಯ್ ಮಿಶ್ರಾ ವಜಾ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದರು.

ರೈತ ಸಂಘಗಳಿಗೆ ಬರೆದ ಪತ್ರದಲ್ಲಿ ಸರ್ಕಾರವು ಎಂಎಸ್‌ಪಿ ಕುರಿತು ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಕೈಬಿಡಲಾಗುವುದು ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ರೈತರು ಚರ್ಚೆ ನಡೆಸುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಿದೆ. ಅವರು ಈ ಪ್ರಸ್ತಾಪವನ್ನು ಒಪ್ಪಿಕೊಂಡರೆ, ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶದಾದ್ಯಂತ (ಮತ್ತು ಪ್ರಪಂಚದಾದ್ಯಂತ) ನಡೆಸುತ್ತಿದ್ದ ಪ್ರತಿಭಟನೆಯನ್ನು(Farmers Protest) ಹಿಂತೆಗೆದುಕೊಳ್ಳುತ್ತಾರೆ. ಕೃಷಿ ಕಾನೂನು ವಾಪಸ್ (farm laws repeal) ತೆಗೆದುಕೊಳ್ಳಲು ನಡೆಸಿದ ಹೋರಾಟದಲ್ಲಿ ಭದ್ರತಾ ಪಡೆಗಳೊಂದಿಗೆ ಹಿಂಸಾತ್ಮಕ ಘರ್ಷಣೆಗಳು, ಬಿರುಸಿನ ಚರ್ಚೆಗಳು ಮತ್ತು ಸಂಸತ್ತಿನಲ್ಲಿ ಗದ್ದಲಗಳು ಒಂದೆಡೆಯಾದರೆ ರೈತರ ಆಂದೋಲನದಲ್ಲಿ 700 ರೈತರು ಸಾವಿಗೀಡಾಗಿದ್ದಾರೆ. ರೈತರು ಸರ್ಕಾರದ ಪ್ರಸ್ತಾಪಕ್ಕೆ ಹೆಚ್ಚಾಗಿ ಒಲವು ತೋರುತ್ತಿರುವಾಗ ರೈತರಲ್ಲಿ ಕೆಲವರ ಮೇಲಿನ ಪೊಲೀಸ್ ಪ್ರಕರಣಗಳನ್ನು ಕೈಬಿಡುವ ನಿರ್ಧಾರ ಬೇಡಿಕೆಯನ್ನು ಬಿಡಬೇಕೆಂದು ಸರ್ಕಾರ ಬಯಸಿದೆ. ಅಂದಹಾಗೆ ಈ ಬಗ್ಗೆ ಎರಡನೇ ಸುತ್ತಿನ ಮಾತುಕತೆ ಸಾಧ್ಯತೆ ಇದೆ ಅಂತಿವೆ ಮೂಲಗಳು.

ಇದನ್ನೂ ಓದಿ: ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ ಇದನ್ನೂ ಓದಿ: Farm Laws: 3 ಕೃಷಿ ಕಾಯ್ದೆಗಳ ರದ್ಧತಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ