AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ವಿರುದ್ಧ ಎಲ್ಲ ಪ್ರಕರಣ ಹಿಂಪಡೆಯುವ ಭರವಸೆ: ಧರಣಿ ವಾಪಸ್ ಕುರಿತು ರೈತ ಸಂಘಟನೆಗಳ ಚರ್ಚೆ

ಕೃಷಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಹುತಾತ್ಮರಾದ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.

ರೈತರ ವಿರುದ್ಧ ಎಲ್ಲ ಪ್ರಕರಣ ಹಿಂಪಡೆಯುವ ಭರವಸೆ: ಧರಣಿ ವಾಪಸ್ ಕುರಿತು ರೈತ ಸಂಘಟನೆಗಳ ಚರ್ಚೆ
ರೈತರ ಪ್ರತಿಭಟನೆ
TV9 Web
| Edited By: |

Updated on: Dec 07, 2021 | 6:35 PM

Share

ದೆಹಲಿ: ಕೃಷಿ ಕಾಯ್ದೆ (Farm Laws) ವಿರೋಧಿಸಿ ಚಳವಳಿ ನಡೆಸುತ್ತಿದ್ದ ರೈತರ ವಿರುದ್ಧ ದಾಖಲಿಸಲಾಗಿದ್ದ ಎಲ್ಲ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರವು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಧರಣಿ ಸ್ಥಗಿತಗೊಳಿಸಲು ನಿರ್ಧರಿಸಿವೆ. ದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘಟನೆಗಳ ನಾಯಕರು ಕೇಂದ್ರ ಸರ್ಕಾರದ ಪ್ರಸ್ತಾವದ ಬಗ್ಗೆ ನಾಳೆ (ಡಿ.13) ಸಭೆ ಸೇರಿ ಚರ್ಚೆ ನಡೆಸಲಾಗುವುದು. ಧರಣಿ ಹಿಂಪಡೆಯುವ ಬಗ್ಗೆ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಉಳಿದ ಬೇಡಿಕೆಗಳ ಈಡೇರಿಕೆ ಬಗ್ಗೆ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಬೇಕು. ಹುತಾತ್ಮ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಸಮಿತಿಯಲ್ಲಿ ರೈತ ಸಂಘಟನೆಗಳ ನಾಯಕರೂ ಇರಬೇಕು. ವಿದ್ಯುತ್ ತಿದ್ದುಪಡಿ ಮಸೂದೆಯ ಕರಡು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಧರಣಿಯನ್ನು ಸಂಪೂರ್ಣ ಹಿಂಪಡೆಯಲು ರೈತ ಸಂಘಟನೆಗಳು ಸಮ್ಮತಿಸಿದ್ದು, ಅಧಿಕೃತ ಘೋಷಣೆ ಮಾಡುವುದಷ್ಟೇ ಬಾಕಿಯಿದೆ ಎಂಬ ಮಾತುಗಳು ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲವಾಗಿ ಕೇಳಿಬರುತ್ತಿವೆ. ಕಳೆದ ಒಂದೂವರೆ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ಕೇಂದ್ರ ಸರ್ಕಾರದ ಭರವಸೆಯನ್ನು ಒಪ್ಪಿಕೊಂಡಿದ್ದಾರೆ. ಈ ಕುರಿತು ಚರ್ಚಿಸಲು ನಾಳೆ (ಡಿ.13) ಮಧ್ಯಾಹ್ನ 2 ಗಂಟೆಗೆ ಸಿಂಘು ಗಡಿಯಲ್ಲಿ ಸಭೆ ನಡೆಸಲಾಗುವುದು. ಸಭೆಯಲ್ಲಿ ಪ್ರತಿಭಟನೆ ವಾಪಸ್ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿಭಟನೆ ವೇಳೆ ಮೃತಪಟ್ಟ 700 ರೈತರಿಗೆ ಸಿಂಘು ಬಳಿ ಹುತಾತ್ಮರ ಸ್ಮಾರಕ ನಿರ್ಮಿಸಲು ಭೂಮಿ ಕೊಡಬೇಕು. ಲಖೀಂಪುರ್ ಖೇರಿಯಲ್ಲಿ ಕಾರು ಹರಿಸಿ ರೈತರ ಸಾವಿಗೆ ಕಾರಣರಾದ ಸಚಿವ ಅಜಯ್ ಮಿಶ್ರಾ ವಜಾ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದರು.

ರೈತ ಸಂಘಗಳಿಗೆ ಬರೆದ ಪತ್ರದಲ್ಲಿ ಸರ್ಕಾರವು ಎಂಎಸ್‌ಪಿ ಕುರಿತು ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಕೈಬಿಡಲಾಗುವುದು ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ರೈತರು ಚರ್ಚೆ ನಡೆಸುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಿದೆ. ಅವರು ಈ ಪ್ರಸ್ತಾಪವನ್ನು ಒಪ್ಪಿಕೊಂಡರೆ, ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶದಾದ್ಯಂತ (ಮತ್ತು ಪ್ರಪಂಚದಾದ್ಯಂತ) ನಡೆಸುತ್ತಿದ್ದ ಪ್ರತಿಭಟನೆಯನ್ನು(Farmers Protest) ಹಿಂತೆಗೆದುಕೊಳ್ಳುತ್ತಾರೆ. ಕೃಷಿ ಕಾನೂನು ವಾಪಸ್ (farm laws repeal) ತೆಗೆದುಕೊಳ್ಳಲು ನಡೆಸಿದ ಹೋರಾಟದಲ್ಲಿ ಭದ್ರತಾ ಪಡೆಗಳೊಂದಿಗೆ ಹಿಂಸಾತ್ಮಕ ಘರ್ಷಣೆಗಳು, ಬಿರುಸಿನ ಚರ್ಚೆಗಳು ಮತ್ತು ಸಂಸತ್ತಿನಲ್ಲಿ ಗದ್ದಲಗಳು ಒಂದೆಡೆಯಾದರೆ ರೈತರ ಆಂದೋಲನದಲ್ಲಿ 700 ರೈತರು ಸಾವಿಗೀಡಾಗಿದ್ದಾರೆ. ರೈತರು ಸರ್ಕಾರದ ಪ್ರಸ್ತಾಪಕ್ಕೆ ಹೆಚ್ಚಾಗಿ ಒಲವು ತೋರುತ್ತಿರುವಾಗ ರೈತರಲ್ಲಿ ಕೆಲವರ ಮೇಲಿನ ಪೊಲೀಸ್ ಪ್ರಕರಣಗಳನ್ನು ಕೈಬಿಡುವ ನಿರ್ಧಾರ ಬೇಡಿಕೆಯನ್ನು ಬಿಡಬೇಕೆಂದು ಸರ್ಕಾರ ಬಯಸಿದೆ. ಅಂದಹಾಗೆ ಈ ಬಗ್ಗೆ ಎರಡನೇ ಸುತ್ತಿನ ಮಾತುಕತೆ ಸಾಧ್ಯತೆ ಇದೆ ಅಂತಿವೆ ಮೂಲಗಳು.

ಇದನ್ನೂ ಓದಿ: ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಟೀಕಿಸುತ್ತಿದ್ದ ಶಿರೋಮಣಿ ಅಕಾಲಿ ದಳದ ನಾಯಕ ಮಂಜಿಂದರ್​ ಸಿಂಗ್​ ಸಿರ್ಸಾ ಬಿಜೆಪಿ ಸೇರ್ಪಡೆ ಇದನ್ನೂ ಓದಿ: Farm Laws: 3 ಕೃಷಿ ಕಾಯ್ದೆಗಳ ರದ್ಧತಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ