AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ದಾಖಲೆಗಳ ನವೀಕರಣಕ್ಕೆ ಸೆ. 30ರ ತನಕ ಗಡುವು ವಿಸ್ತರಿಸಿದ ಸರ್ಕಾರ

ದೇಶಾದ್ಯಂತ ಕೊವಿಡ್-19 ವ್ಯಾಪಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ. ನಿಯಮ ಜಾರಿಗೊಳಿಸುವ ಎಲ್ಲ ಪ್ರಾಧಿಕಾರಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ವಾಹನ ದಾಖಲೆಗಳ ನವೀಕರಣಕ್ಕೆ ಸೆ. 30ರ ತನಕ ಗಡುವು ವಿಸ್ತರಿಸಿದ ಸರ್ಕಾರ
ಸಂಗ್ರಹ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 17, 2021 | 6:53 PM

Share

ದೆಹಲಿ: ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್), ನೋಂದಣಿ ಪ್ರಮಾಣಪತ್ರ (ರಿಜಿಸ್ಟ್ರೇಷನ್ ಸರ್ಟಿವಿಫಿಕೇಟ್) ಮತ್ತು ರಹದಾರಿ (ಪರ್ಮಿಟ್​) ದಾಖಲೆಗಳ ಗಡುವನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಗುರುವಾರ ಆದೇಶ ಹೊರಡಿಸಿದೆ. ದೇಶಾದ್ಯಂತ ಕೊವಿಡ್-19 ವ್ಯಾಪಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ. ನಿಯಮ ಜಾರಿಗೊಳಿಸುವ ಎಲ್ಲ ಪ್ರಾಧಿಕಾರಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಫಿಟ್​ನೆಸ್​ ಪ್ರಮಾಣಪತ್ರವೂ ಸೇರಿದಂತೆ ವಾಹನಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳ ಮಾನ್ಯತೆ ಸೆಪ್ಟೆಂಬರ್ 30ರವರೆಗೆ ಊರ್ಜಿತದಲ್ಲಿರುತ್ತದೆ ಎಂದು ಕೇಂದ್ರ ಸಾರಿಗೆ ಇಲಾಖೆ ಹೇಳಿದೆ.

ಫೆಬ್ರುವರಿ 1ರಿಂದ ಸೆಪ್ಟೆಂಬರ್ 30ಎ ನಡುವಣ ಅವಧಿಯಲ್ಲಿ ಗಡುವು ಮುಕ್ತಾಯವಾಗಲಿರುವ ಎಲ್ಲ ದಾಖಲೆಗಳಿಗೂ ಇದು ಅನ್ವಯಿಸುತ್ತದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಸಾರಿಗೆ ಸಂಬಂಧಿತ ಸೇವೆಗಳನ್ನು ಪಡೆದುಕೊಳ್ಳಲು ಇದರಿಂದ ಸುಲಭವಾಗಲಿದೆ ಎಂದು ಕೇಂದ್ರ ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಸೂಚನೆಯನ್ನು ಅದರ ನಿಜವಾದ ಆಶಯಗಳಿಗೆ ಅನುಗುಣವಾಗಿ ಪಾಲಿಸಬೇಕು. ಈ ಸಂಕಷ್ಟ ಸಮಯದಲ್ಲಿ ಕೆಲಸ ಮಾಡುತ್ತಿರುವ ಸರಕು ಸಾಗಣೆದಾರರು ಮತ್ತು ಇತರ ಸಂಸ್ಥೆಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಬೇಕು ಎಂದು ಕೇಂದ್ರ ಹೇಳಿದೆ.

ಮೋಟಾರು ವಾಹನಗಳ ಕಾಯ್ದೆ (1988) ಮತ್ತು ಕೇಂದ್ರ ಮೋಟಾರು ವಾಹನಗಳ ನಿಯಮಗಳ (1989) ಅನ್ವಯ ದಾಖಲೆಗಳ ಮಾನ್ಯತೆ ವಿಸ್ತರಣೆಯ ಆದೇಶವನ್ನು 2020ರ ಮಾರ್ಚ್ 30, ಜೂನ್ 9, ಆಗಸ್ಟ್ 24, ಡಿಸೆಂಬರ್ 27 ಮತ್ತು 2021ರ ಮಾರ್ಚ್ 26ರಂದು ಕೇಂದ್ರ ಸರ್ಕಾರವು ಹೊರಡಿಸಿತ್ತು.

(Govt of India extends validity of Most of the motor vehicle documents till Sept 30)

ಇದನ್ನೂ ಓದಿ: ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರದ ಫಾರ್ಮಾಟನ್ನು ಜಾರಿಮಾಡಿರುವ ಹಿನ್ನೆಲೆಯಲ್ಲಿ ವಾಹನಗಳ ಮಾಲೀಕರು ತಿಳಿಯಬೇಕಿರುವ ಅಂಶಗಳು

ಇದನ್ನೂ ಓದಿ: Car number astrology: ವಾಹನ ಖರೀದಿಸಬೇಕು ಅಂತಿದ್ದೀರಾ? ನಿಮ್ಮ ಅದೃಷ್ಟ ಸಂಖ್ಯೆ ಯಾವುದೆಂದು ತಿಳಿದುಕೊಳ್ಳಿ

Published On - 6:48 pm, Thu, 17 June 21

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ