AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕು: ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಡಿ 1ರಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಪ್ರಯಾಣ ಆರಂಭಿಸುವ ಮುನ್ನ ಏರ್ ಸುವಿಧಾ ಪೋರ್ಟಲ್‌ನಲ್ಲಿ ನೆಗೆಟಿವ್ ರಿಪೋರ್ಟ್‌ ಅಪ್‌ಲೋಡ್ ಮಾಡಬೇಕು ಎಂದು ಭಾರತ ಸರ್ಕಾರ ಸೂಚಿಸಿದೆ.

ಒಮಿಕ್ರಾನ್ ಸೋಂಕು: ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಡಿ 1ರಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 28, 2021 | 11:13 PM

Share

ದೆಹಲಿ: ಕೆಲ ದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೈರಿಸ್ಕ್‌ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಡಿ 1ರಿಂದ ಜಾರಿಗೆ ಬರಲಿವೆ. ವಿದೇಶಗಳಿಂದ ಬರುವ ಪ್ರಯಾಣಿಕರು 14 ದಿನಗಳ ಪ್ರಯಾಣದ ವಿವರ ಕಡ್ಡಾಯವಾಗಿ ಸಲ್ಲಿಸಬೇಕು. ಪ್ರಯಾಣ ಆರಂಭಿಸುವ ಮುನ್ನ ಏರ್ ಸುವಿಧಾ ಪೋರ್ಟಲ್‌ನಲ್ಲಿ ನೆಗೆಟಿವ್ ರಿಪೋರ್ಟ್‌ ಅಪ್‌ಲೋಡ್ ಮಾಡಬೇಕು. ವಿಮಾನ ನಿಲ್ದಾಣಗಳಲ್ಲಿಯೂ ಕೊವಿಡ್ ಟೆಸ್ಟ್‌ ಮಾಡಿಸಬೇಕು. ನೆಗೆಟಿವ್ ರಿಪೋರ್ಟ್​ ಬಂದರೆ 7 ದಿನಗಳ ಕಾಲ ಹೋಂ ಕ್ವಾರಂಟೈನ್‌ ಇರಬೇಕು. 8ನೇ ದಿನದಂದು ಮತ್ತೆ ಕೊವಿಡ್ ಟೆಸ್ಟ್‌ ಮಾಡಿಸಬೇಕು. 2ನೇ ಟೆಸ್ಟ್‌ನಲ್ಲಿ ನೆಗೆಟಿವ್ ಬಂದರೂ 7 ದಿನಗಳವರೆಗೆ ಸ್ವಯಂ ನಿಗಾವಣೆಯಲ್ಲಿರುಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕರ್ನಾಟಕದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹೆಚ್ಚಾಗಿದೆ. ಮೈಸೂರು ಜಿಲ್ಲೆಯ ಗಡಿ ಚೆಕ್​ಪೋಸ್ಟ್​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್​ ಸೂಚನೆ ನೀಡಿದ್ದಾರೆ. ಹೊರ ರಾಜ್ಯಗಳಿಂದ ಬರುವವರಿಗೆ ಚೆಕ್​ಪೋಸ್ಟ್​ಗಳಲ್ಲಿ ತಪಾಸಣೆಗೆ ಒಳಪಡಿಸಬೇಕು. ಅಂಥವರು ಕಡ್ಡಾಯವಾಗಿ ಆರ್​ಟಿಪಿಸಿಆರ್ ನೆಗೆಟಿವ್​ ರಿಪೋರ್ಟ್​ ಹೊಂದಿರಬೇಕು. ಚೆಕ್​ಪೋಸ್ಟ್​ಗಳು ದಿನದ 24 ಗಂಟೆಯೂ ಕೆಲಸ ಮಾಡಬೇಕು. ಚೆಕ್​ಪೋಸ್ಟ್​ಗಳಿಗೆ ಜಿಲ್ಲಾಧಿಕಾರಿ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳದಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಪ್ರವಾಸಿ ಸ್ಥಳಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

15 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್​ಟಿಪಿಸಿಆರ್​ ಟೆಸ್ಟ್ ಮಾಡಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಕೊವಿಡ್ ನೆಗೆಟಿವ್​ ರಿಪೋರ್ಟ್​ ಬಂದ ನಂತರ 7 ದಿನಕ್ಕೊಮ್ಮೆ ಹಾಸ್ಟೆಲ್​ಗಳಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮೈಸೂರು ಜಿಲ್ಲಾಡಳಿತಕ್ಕೆ ಸಚಿವ ಸೋಮಶೇಖರ್​ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್​ನಲ್ಲಿ ಹೈ ಅಲರ್ಟ್ ಇದನ್ನೂ ಓದಿ: ಒಮಿಕ್ರಾನ್ ವೈರಸ್ ಪತ್ತೆ: 3 ದೇಶಗಳಿಂದ ಕರ್ನಾಟಕಕ್ಕೆ ಬರುವವರಿಗೆ RTPCR ಪರೀಕ್ಷೆ ಕಡ್ಡಾಯ; ಟೆಸ್ಟಿಂಗ್ ಹೆಚ್ಚಿಸಲು ಸರ್ಕಾರ ಆದೇಶ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ