AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banjara hills: ಛೇ ಇವನೆಂಥಾ ಮನುಷ್ಯ.. ಮದ್ಯ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊಮ್ಮಗನನ್ನೇ ಮಾರಿಬಿಟ್ಟಿದ್ದಾನೆ!

ಮನೆಯಲ್ಲಿ ಮೊಮ್ಮಗು ಸಂಭ್ರಮ, ಕೆಲಸಗಳು ನಡೆಯುತ್ತಿದ್ದಾಗ ಖಲೀಲ್ ಸದ್ದು ಮಾಡದೆ ಮೊಮ್ಮಗನನ್ನು ಎತ್ತಿಕೊಂಡು ಹೊರಹೋಗಿದ್ದಾನೆ. ಕೊನೆಗೆ ಆ ಮಗುವನ್ನು ದಾರಿಯಲ್ಲಿ ಯಾರಿಗೋ ಮಾರಿ ಬಂದ ಹಣದಲ್ಲಿ ಮದ್ಯ ಸೇವಿಸಿದ್ದಾನೆ.

Banjara hills: ಛೇ ಇವನೆಂಥಾ ಮನುಷ್ಯ.. ಮದ್ಯ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊಮ್ಮಗನನ್ನೇ ಮಾರಿಬಿಟ್ಟಿದ್ದಾನೆ!
ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊಮ್ಮಗನನ್ನೇ ಮಾರಿಬಿಟ್ಟಿದ್ದಾನೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 17, 2023 | 2:37 PM

Share

ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿಯೊಬ್ಬ ತನ್ನ ಮೊಮ್ಮಗನನ್ನೇ ಮದ್ಯಕ್ಕಾಗಿ ಮಾರಾಟ ಮಾಡಿರುವ ಆಘಾತಕಾರಿ ಪ್ರಸಂಗ ನಡೆದಿದೆ. ವಿವರಕ್ಕೆ ಹೋಗುವುದಾದರೆ ಹಕೀಂಪೇಟೆಯಲ್ಲಿ ಖಲೀಲ್ (40) ಎಂಬುವರು ವಾಸವಾಗಿದ್ದಾರೆ. ಕುಡಿತದ ವ್ಯಸನಿಯಾಗಿದ್ದ ಖಲೀಲ್, ಆಗಾಗ ಪತ್ನಿ ಹಾಗೂ ಕುಟುಂಬಸ್ಥರೊಂದಿಗೆ ಜಗಳವಾಡುತ್ತಿದ್ದ. ಸದಾ ಮದ್ಯ ಸೇವಿಸಿ ಸೋಮಾರಿಯಾಗಿ ಓಡಾಡುತ್ತಿದ್ದನಂತೆ. ಕುಟುಂಬ ಸದಸ್ಯರಿಗೆ ಕುಡಿಯಲು ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ. ಹಣ ಕೊಡಲು ಒಪ್ಪದಿದ್ದರೆ ಮನೆಯಲ್ಲಿದ್ದ ಸಾಮಾನುಗಳನ್ನು ಮಾರಿ ಮದ್ಯಪಾನ ಮಾಡುತ್ತಿದ್ದ.

ಇದೇ ಸಮಯದಲ್ಲಿ ಖಲೀಲ್ ಮಗಳು ಹೆರಿಗೆಗೆಂದು ತವರಿಗೆ ಬಂದಿದ್ದಳು. ಇತ್ತೀಚೆಗೆ ಗಂಡು ಮಗು ಜನಿಸಿತ್ತು. ಈ ನಡುವೆ ಎರಡು ದಿನಗಳ ಹಿಂದೆ ಹಣದ ವಿಚಾರವಾಗಿ ಖಲೀಲ್ ಮಗಳು, ಮೊಮ್ಮಗನ ಸಮ್ಮುಖದಲ್ಲಿಯೇ ಮನೆಯಲ್ಲಿ ಜಗಳವಾಡಿಕೊಂಡಿದ್ದ. ಕುಟುಂಬದವರು ತಮ್ಮ ಬಳಿ ಹಣವಿಲ್ಲ ಎಂದು ಹೇಳಿದಾಗ ಖಲೀಲ್ ಕೋಪಗೊಂಡಿದ್ದ.

ಮನೆಯಲ್ಲಿ ಮೊಮ್ಮಗು ಸಂಭ್ರಮ, ಕೆಲಸಗಳು ನಡೆಯುತ್ತಿದ್ದಾಗ ಖಲೀಲ್ ಸದ್ದು ಮಾಡದೆ ಮೊಮ್ಮಗನನ್ನು ಎತ್ತಿಕೊಂಡು ಹೊರಹೋಗಿದ್ದಾನೆ. ಕೊನೆಗೆ ಆ ಮಗುವನ್ನು ದಾರಿಯಲ್ಲಿ ಯಾರಿಗೋ ಮಾರಿ ಬಂದ ಹಣದಲ್ಲಿ ಮದ್ಯ ಸೇವಿಸಿದ್ದಾನೆ. ಅದೇ ವೇಳೆ ಮನೆಯಲ್ಲಿದ್ದ ಮಗು ನಾಪತ್ತೆಯಾದ ಕಾರಣ ಕುಟುಂಬಸ್ಥರು ಸುತ್ತಮುತ್ತ ಹುಡುಕಾಡಿದ್ದಾರೆ.

ಎಲ್ಲೂ ಮಗ ಪತ್ತೆಯಾಗದಿದ್ದಾಗ ಖಲೀಲ್ ಪುತ್ರಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು ಸತ್ಯಾಂಶ ಹೊರಬಿದ್ದಿದೆ. ಖಲೀಲ್ ತನ್ನ ಮೊಮ್ಮಗನನ್ನು ಮಾರಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತ ಹೇಳಿದ ಮೇಲೆ ಪೊಲೀಸರು ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮದ್ಯದ ಹಣಕ್ಕಾಗಿ ತನ್ನ ಮೊಮ್ಮಗನನ್ನೇ ಮಾರಾಟ ಮಾಡಿದ ಖಲೀಲ್ ಮೇಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Wed, 17 May 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ