AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ‘ಸಾಕ್ಷಿಗಳಿಗೆ ಸರಿಯಾದ ರಕ್ಷಣೆ ಒದಗಿಸಿ, ಇನ್ನೊಂದು ಸ್ಥಿತಿ ವರದಿ ಸಲ್ಲಿಸಿ’-ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಸೂಚನೆ

ಸಾಕ್ಷಿಗಳಿಗೆ ಸೂಕ್ತವಾಗಿ ಭದ್ರತೆ ಒದಗಿಸಲಾಗಿದೆ ಎಂದು ಹರೀಶ್ ಸಾಳ್ವೆ ಕೋರ್ಟ್​ಗೆ ತಿಳಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಎನ್​.ವಿ.ರಮಣ, ಅವರ ರಕ್ಷಣೆಗಾಗಿ ಸಿಸಿಟಿವಿ ಕ್ಯಾಮರಾಗಳನ್ನು ಬಳಸಿಕೊಳ್ಳಬೇಕು. ಹೋಂ ಗಾರ್ಡ್​​ಗಳ ನೇಮಕ ಆಗಬೇಕು ಎಂದೂ ಹೇಳಿದ್ದಾರೆ. 

Lakhimpur Kheri Violence: ‘ಸಾಕ್ಷಿಗಳಿಗೆ ಸರಿಯಾದ ರಕ್ಷಣೆ ಒದಗಿಸಿ, ಇನ್ನೊಂದು ಸ್ಥಿತಿ ವರದಿ ಸಲ್ಲಿಸಿ’-ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಸೂಚನೆ
ಸುಪ್ರೀಂ ಕೋರ್ಟ್
TV9 Web
| Updated By: Lakshmi Hegde|

Updated on:Oct 26, 2021 | 3:40 PM

Share

ಲಖಿಂಪುರ ಖೇರಿ ಹಿಂಸಾಚಾರ (Lakhimpur Kheri Violence)ಪ್ರಕರಣದ ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸುಪ್ರೀಂಕೋರ್ಟ್ (Supreme Court)​​ ಇಂದು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಕ್ಟೋಬರ್​​ ಪ್ರಾರಂಭದಲ್ಲಿ ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದು ಇಬ್ಬರು ಮೃತಪಟ್ಟಿದ್ದರು. ಅದಾದ ಬಳಿಕ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಸೇರಿ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.  

ಲಖಿಂಪುರ ಖೇರಿ ಹಿಂಸಾಚಾರ ಕೇಸ್​ನ್ನು ಸುಮೊಟೊ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​. ವಿ.ರಮಣ ನೇತೃತ್ವದ, ನ್ಯಾ.ಸೂರ್ಯಕಾಂತ್​ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ, ಘಟನೆಯ ಸಾಕ್ಷಿಗಳ ಹೇಳಿಕೆಗಳು ತ್ವರಿತವಾಗಿ ದಾಖಲಾಗುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದೆ. ಘಟನೆ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿರುವ ಸ್ಥಿತಿ ವರದಿ (Status Report)ಯನ್ನು ನ್ಯಾಯಾಲಯ ಸಮಗ್ರವಾಗಿ ಪರಿಶೀಲನೆ ಮಾಡಿದೆ. ಒಬ್ಬ ಆರೋಪಿಯನ್ನು ಹೊರತು ಪಡಿಸಿ ಉಳಿದೆಲ್ಲ ಆರೋಪಿಗಳನ್ನು ಯಾಕಾಗಿ ಪೊಲೀಸ್​ ಕಸ್ಟಡಿಯಲ್ಲೇ ಇಡಲಾಗಿದೆ ಎಂದು ಎನ್​.ವಿ.ರಮಣ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರ ನೀಡಿದ ಯುಪಿ ಸರ್ಕಾರದ ಅಡಿಶನಲ್​ ಅಡ್ವೋಕೇಟ್​ ಜನರಲ್ ಗರಿಮಾ ಪ್ರಶಾದ್​, ಸಾಕ್ಷಿಗಳ ಹೇಳಿಕೆಗಳನ್ನು ಇನ್ನೂ ರೆಕಾರ್ಡ್​ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ. ನಂತರ ಹಿರಿಯ ವಕೀಲ ಹರೀಶ್ ಸಾಳ್ವೆ ಕೋರ್ಟ್​ಗೆ ಮಾಹಿತಿ ನೀಡಿ, ಒಟ್ಟು 68 ಸಾಕ್ಷಿದಾರರಲ್ಲಿ 30 ಮಂದಿಯ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅದರಲ್ಲೂ 23 ಮಂದಿ ಕಣ್ಣಾರೆ ಘಟನೆಯನ್ನು ನೋಡಿದವರಾಗಿದ್ದಾರೆ ಎಂದು ಹೇಳಿದ್ದಾರೆ. ಆದರೆ ಸುಪ್ರೀಂಕೋರ್ಟ್​ ಈ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸಿತು. ಅಷ್ಟು ದೊಡ್ಡ ಮಟ್ಟದ ಪ್ರತಿಭಟನಾ ಮೆರವಣಿಗೆ ನಡೆಯುತ್ತಿತ್ತು..ಅದರಲ್ಲಿ ಕೇವಲ 23 ಮಂದಿ ಮಾತ್ರ ಘಟನೆಯ ಪ್ರತ್ಯಕ್ಷದರ್ಶಿಗಳು ಇದ್ದಾರಾ ಎಂದು ಸಿಜೆಐ ಎನ್​.ವಿ.ರಮಣ ಪ್ರಶ್ನಿಸಿದರು.  ಹಾಗೇ, ಆರೋಪಿಗಳನ್ನು ಸರಿಯಾಗಿ ಗುರುತಿಸಬೇಕಾದ ಅಗತ್ಯವಿದೆ ಎಂಬುದನ್ನೂ ಒತ್ತಿಹೇಳಿದರು.

ಇನ್ನು ಸಾಕ್ಷಿಗಳಿಗೆ ಸೂಕ್ತವಾಗಿ ಭದ್ರತೆ ಒದಗಿಸಲಾಗಿದೆ ಎಂದು ಹರೀಶ್ ಸಾಳ್ವೆ ಕೋರ್ಟ್​ಗೆ ತಿಳಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಎನ್​.ವಿ.ರಮಣ, ಅವರ ರಕ್ಷಣೆಗಾಗಿ ಸಿಸಿಟಿವಿ ಕ್ಯಾಮರಾಗಳನ್ನು ಬಳಸಿಕೊಳ್ಳಬೇಕು. ಹೋಂ ಗಾರ್ಡ್​​ಗಳ ನೇಮಕ ಆಗಬೇಕು ಎಂದೂ ಹೇಳಿದ್ದಾರೆ.  ಇನ್ನು ನಾಲ್ವರು ರೈತರನ್ನು ಹೊರತು ಪಡಿಸಿ, ಒಬ್ಬ ಪತ್ರಕರ್ತ, ಬಿಜೆಪಿ ಕಾರ್ಯಕರ್ತ ಸೇರಿ ಇನ್ನೂ ನಾಲ್ವರು ಮೃತಪಟ್ಟ ಬಗ್ಗೆ ಇನ್ನೊಂದು ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹಾಗೇ, ನವೆಂಬರ್​ 8ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಇದನ್ನೂ ಓದಿ: ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು

Redmi Note 11 Series: ಅಬ್ಬಾ… ಎಂಥಾ ಫೀಚರ್ಸ್: ರೆಡ್ಮಿ ನೋಟ್​ನಲ್ಲಿ 11ನೇ ಸರಣಿಯ ​ಫೋನ್ ಲಾಂಚ್​ಗೆ ಡೇಟ್ ಫಿಕ್ಸ್

Published On - 3:39 pm, Tue, 26 October 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ