AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಆರೋಪ: ಮಹಾತ್ಮ ಗಾಂಧೀಜಿ ಮರಿಮೊಮ್ಮಗಳಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ದಕ್ಷಿಣ ಆಫ್ರಿಕಾ ನ್ಯಾಯಾಲಯ

ಆಶೀಶ್​ ಲತಾ ಅವರ ಕೌಟುಂಬಿಕ ಹಿನ್ನೆಲೆ ಹಾಗೂ ನೆಟ್​ಕೇರ್​ ದಾಖಲೆಗಳನ್ನು ಗಮನಿಸಿದ ಉದ್ಯಮಿ ಎಸ್​ ಆರ್ ಮಹಾರಾಜ್​ ಸಹಾಯಕ್ಕೆ ಒಪ್ಪಿ, ಲಿಖಿತ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿ ಸಾಲ ನೀಡಿದ್ದರು. ಆದರೆ, ನಂತರದಲ್ಲಿ ಆಶೀಶ್​ ಲತಾ ಅವರಿಗೂ ನೆಟ್​ಕೇರ್ ಸಂಸ್ಥೆಗೂ ಯಾವುದೇ ವ್ಯವಹಾರಗಳಿಲ್ಲ. ಅವರು ತೋರಿಸಿದ ದಾಖಲೆಗಳು ನಕಲಿ ಎನ್ನುವ ವಿಚಾರ ಬಹಿರಂಗವಾಗಿತ್ತು.

ವಂಚನೆ ಆರೋಪ: ಮಹಾತ್ಮ ಗಾಂಧೀಜಿ ಮರಿಮೊಮ್ಮಗಳಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ದಕ್ಷಿಣ ಆಫ್ರಿಕಾ ನ್ಯಾಯಾಲಯ
ಮಹಾತ್ಮಾ ಗಾಂಧಿ, ಮರಿಮೊಮ್ಮಗಳು ಆಶೀಶ್​ ಲತಾ
TV9 Web
| Edited By: |

Updated on:Jun 08, 2021 | 8:14 AM

Share

ದಕ್ಷಿಣ ಆಫ್ರಿಕಾ: ವಂಚನೆ ಆರೋಪದ ಸುಳಿಗೆ ಸಿಲುಕಿರುವ ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್​ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಉದ್ಯಮಿಯೊಬ್ಬರಿಗೆ 6.2 ಮಿಲಿಯನ್ ರಾಂಡ್ (ದಕ್ಷಿಣ ಆಫ್ರಿಕಾ ಕರೆನ್ಸಿ; 1 ರಾಂಡ್ = 5.38 ರೂಪಾಯಿ) ವಂಚಿಸಿರುವ ಆರೋಪ ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗಳು ಆಶೀಶ್ ಲತಾ ರಾಮ್​ಗೋಬಿನ್ ಅವರ ಮೇಲಿದ್ದು, ಸೋಮವಾರ ಈ ಬಗ್ಗೆ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಕಾರಾಗೃಹ ಶಿಕ್ಷೆಗೆ ಅವರನ್ನು ಗುರಿಯಾಗಿಸಿದೆ.

ಇಳಾ ಗಾಂಧಿ ಹಾಗೂ ಮೆವಾ ರಾಮ್​ಗೋವಿಂದ್ ಅವರ ಮಗಳಾದ ಆಶೀಶ್ ಲತಾ ವಿರುದ್ಧ ವಂಚನೆ ಪ್ರಕರಣ 2015ರಲ್ಲಿ ದಾಖಲಾಗಿದ್ದು, ಉದ್ಯಮಿ ಎಸ್​ ಆರ್ ಮಹಾರಾಜ್​ ಎನ್ನುವವರಿಂದ 6.2 ಮಿಲಿಯನ್ ರಾಂಡ್ ಪಡೆದಿದ್ದು ನಂತರ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ, ಅವರು ಹಣ ಯಾವ ಕಾರಣಕ್ಕೆ ಅವಶ್ಯಕವಿದೆ ಎಂದು ಹೇಳಿದ್ದರೋ ಅದು ಕೂಡಾ ಸುಳ್ಳು ಎಂದು ಸಾಬೀತಾಗಿದ್ದು ಆಶೀಶ್​ ಲತಾ ತೋರಿಸಿದ್ದ ದಾಖಲೆಗಳೆಲ್ಲವೂ ನಕಲಿ ಎನ್ನುವುದು ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದ ನೆಟ್​ಕೇರ್​ ಎಂಬ ಸಂಸ್ಥೆಯೊಂದಿಗೆ ಕೆಲ ವ್ಯವಹಾರಗಳಿವೆ. ಆ ಸಂಸ್ಥೆಗಾಗಿ 3 ಕಂಟೈನರ್​ ಲೆನಿನ್ ತರಿಸಿದ್ದೇನೆ. ಆದರೆ, ಆರ್ಥಿಕವಾಗಿ ಕೆಲ ಕಷ್ಟಗಳು ಎದುರಾಗಿರುವುದರಿಂದ ವಸ್ತುಗಳನ್ನು ಇಳಿಸಿಕೊಳ್ಳಲು ಹಣದ ಸಹಾಯ ಬೇಕು. ತುರ್ತಾಗಿ 6.2ಮಿಲಿಯನ್​ ರಾಂಡ್ ಬೇಕಿದ್ದು, ನಿಮಗೆ ಸೂಕ್ತ ಮೊತ್ತದೊಂದಿಗೆ ಅದನ್ನು ಹಿಂತಿರುಗಿಸಲಾಗುವುದು ಎಂದು ಉದ್ಯಮಿ ಎಸ್​ ಆರ್ ಮಹಾರಾಜ್​ ಬಳಿ ಭರವಸೆ ವ್ಯಕ್ತಪಡಿಸಿ ನೆಟ್​ಕೇರ್ ಸಂಸ್ಥೆಯ ದಾಖಲೆಗಳನ್ನು ತೋರಿಸಿದ್ದರು.

ಆಶೀಶ್​ ಲತಾ ಅವರ ಕೌಟುಂಬಿಕ ಹಿನ್ನೆಲೆ ಹಾಗೂ ನೆಟ್​ಕೇರ್​ ದಾಖಲೆಗಳನ್ನು ಗಮನಿಸಿದ ಉದ್ಯಮಿ ಎಸ್​ ಆರ್ ಮಹಾರಾಜ್​ ಸಹಾಯಕ್ಕೆ ಒಪ್ಪಿ, ಲಿಖಿತ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿ ಸಾಲ ನೀಡಿದ್ದರು. ಆದರೆ, ನಂತರದಲ್ಲಿ ಆಶೀಶ್​ ಲತಾ ಅವರಿಗೂ ನೆಟ್​ಕೇರ್ ಸಂಸ್ಥೆಗೂ ಯಾವುದೇ ವ್ಯವಹಾರಗಳಿಲ್ಲ. ಅವರು ತೋರಿಸಿದ ದಾಖಲೆಗಳು ನಕಲಿ ಎನ್ನುವ ವಿಚಾರ ಬಹಿರಂಗವಾಗಿತ್ತು. ಅದಾದ ಬೆನ್ನಲ್ಲೇ ಎಸ್​ ಆರ್​ ಮಹಾರಾಜ್​ ಕಾನೂನಿನ ಮೊರೆ ಹೋಗಿ ಆಶೀಶ್ ಲತಾ ವಿರುದ್ಧ ದೂರು ದಾಖಲಿಸಿದ್ದರು.

ವಿಚಾರಣೆ ವೇಳೆ ಮಹಾತ್ಮಾ ಗಾಂಧೀಜಿ ಅವರ ಮರಿಮೊಮ್ಮಗಳು ತಪ್ಪಿತಸ್ಥೆ ಎನ್ನುವುದು ಕಂಡು ಬಂದ ಕಾರಣ ಇದೀಗ ದಕ್ಷಿಣ ಆಫ್ರಿಕಾದ ಡರ್ಬನ್​ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕುಟುಂಬದ ಹಿರಿತನ, ನಂಬಿಕೆಗಳನ್ನೇ ಬಂಡವಾಳವಾಗಿಸಿಕೊಂಡು ಮೋಸವೆಸಗಿದ ಆಶೀಶ್​ ಲತಾ ಅವರು ಕಾನೂನಿನ ಅಡಿಯಲ್ಲಿ ಅಪರಾಧಿ ಎನ್ನುವುದು ಸಾಬೀತಾದಂತಾಗಿದೆ.

ಇದನ್ನೂ ಓದಿ: ಮಹಾತ್ಮಾ ಗಾಂಧೀಜಿ ಮರಿ ಮೊಮ್ಮಗ ಕೊರೊನಾಕ್ಕೆ ಬಲಿ 

Jawaharlal Nehru Death Anniversary 2021: ಜವಾಹರ ಲಾಲ್ ನೆಹರೂ ಕುರಿತಾದ 10 ಆಸಕ್ತಿಕರ ಸಂಗತಿಗಳು

Published On - 8:12 am, Tue, 8 June 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ