AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢ: ಗ್ರೆನೇಡ್ ದಾಳಿ ನಡೆಸಲು ಆಟೋದಲ್ಲಿ ಬಂದಿದ್ದ ಶಂಕಿತರು

ದುಷ್ಕರ್ಮಿಗಳು ಚಂಡೀಗಢದ ಮನೆಯೊಂದರ ಮೇಲೆ ಗ್ರೆನೇಡ್​ ದಾಳಿ ನಡೆಸಿದ್ದಾರೆ. ಇದೀಗ ಚಂಡೀಗಢ ಪೊಲೀಸ್, ಎನ್ಐಎ ಮತ್ತು ಪಂಜಾಬ್ ಪೊಲೀಸರ ತಂಡಗಳು ಈ ಬಗ್ಗೆ ತನಿಖೆ ನಡೆಸುತ್ತಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಮನೆಯ ಕಿಟಕಿಗಳು ಹಾಗೂ ಸ್ಥಳದಲ್ಲಿ ಇಟ್ಟಿದ್ದ ಕೆಲವು ವಸ್ತುಗಳಿಗೆ ಮಾತ್ರ ಹಾನಿಯಾಗಿದೆ.

ಚಂಡೀಗಢ: ಗ್ರೆನೇಡ್ ದಾಳಿ ನಡೆಸಲು ಆಟೋದಲ್ಲಿ ಬಂದಿದ್ದ ಶಂಕಿತರು
ಆಟೋ
ನಯನಾ ರಾಜೀವ್
|

Updated on: Sep 12, 2024 | 2:09 PM

Share

ಚಂಡೀಗಢದ ಮನೆಯೊಂದರ ಮೇಲೆ ಗ್ರೆನೇಡ್​ ದಾಳಿ ನಡೆಸಿ ಶಂಕಿತ ಆರೋಪಿಗಳು ಆಟೋದಲ್ಲಿ ಪರಾರಿಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಚಂಡೀಗಢದಲ್ಲಿ ದುಷ್ಕರ್ಮಿಗಳು ಆಟೋದಲ್ಲಿ ಬಂದು ಗ್ರೆನೇಡ್ ದಾಳಿ ನಡೆಸಿದ್ದ ಮನೆ ನಿವೃತ್ತ ಪ್ರಾಂಶುಪಾಲರಿಗೆ ಸೇರಿದ್ದಾಗಿದೆ. ಇದೀಗ ಚಂಡೀಗಢ ಪೊಲೀಸ್, ಎನ್ಐಎ ಮತ್ತು ಪಂಜಾಬ್ ಪೊಲೀಸರ ತಂಡಗಳು ಈ ಬಗ್ಗೆ ತನಿಖೆ ನಡೆಸುತ್ತಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಮನೆಯ ಕಿಟಕಿಗಳು ಹಾಗೂ ಸ್ಥಳದಲ್ಲಿ ಇಟ್ಟಿದ್ದ ಕೆಲವು ವಸ್ತುಗಳಿಗೆ ಮಾತ್ರ ಹಾನಿಯಾಗಿದೆ.

ಸಂಜೆ 6 ಗಂಟೆ ಸುಮಾರಿಗೆ ಆಟೋದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಮನೆ ಮೇಲೆ ಗ್ರೆನೇಡ್ ಎಸೆದಿದ್ದರು. ಈ ಹಿಂದೆ ಪಂಜಾಬ್ ಪೊಲೀಸ್ ಎಸ್ಪಿಯೊಬ್ಬರು ಈ ಮನೆಯಲ್ಲಿ ವಾಸವಿದ್ದರು, ಅವರು ಈಗ ನಿವೃತ್ತರಾಗಿದ್ದಾರೆ ಎಂದು ಹೇಳಲಾಗುತ್ತಿದೆ ಅವರನ್ನೇ ಗುರಿಯಾಗಿಸಿ ದಾಳಿ ನಡೆದಿದೆಯೇ ಎಂಬುದರ ಕುರಿತು ಪ್ರಶ್ನೆ ಏಳುತ್ತಿದೆ.

ಆರೋಪಿಗಳನ್ನು ಆಟೋದಲ್ಲಿ ಕರೆತಂದ ಚಾಲಕನನ್ನೂ ಪೊಲೀಸರು ಬಂಧಿಸಿದ್ದಾರೆ. ಖಲಿಸ್ತಾನಿಗಳ ಕೈವಾಡವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಚಂಡೀಗಢ ಪೊಲೀಸರು ಯಾರಿಗಾದರೂ ಆರೋಪಿಯ ಬಗ್ಗೆ ತಿಳಿದುಬಂದಲ್ಲಿ 112ಕ್ಕೆ ಕರೆ ಮಾಡಿ ಎಂದು ಕೇಳಿದ್ದಾರೆ. ಇದಲ್ಲದೇ 9465121000 ವಾಟ್ಸಾಪ್ ಸಂಖ್ಯೆಗೂ ಮಾಹಿತಿ ನೀಡಬಹುದು.

ಮತ್ತಷ್ಟು ಓದಿ: Manipur Violence: ರಾಕೆಟ್ ದಾಳಿಯ ನಂತರ ಮಣಿಪುರದ ಜಿರಿಬಾಮ್​​ನಲ್ಲಿ ಹಿಂಸಾಚಾರ, 4 ಸಾವು

ಪಂಜಾಬ್ ಪೊಲೀಸ್‌ನ ನಿವೃತ್ತ ಅಧಿಕಾರಿಯೊಬ್ಬರು ಈ ಮನೆಯಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕೆಲವರು ಆ ಅಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಆ ಪ್ರಕರಣದಲ್ಲಿ 2023 ರಲ್ಲಿ ವಿಶೇಷ ಸೆಲ್‌ನಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು.

ಇಂದು ಈ ಕೃತ್ಯ ಎಸಗಿದ ವ್ಯಕ್ತಿಗಳು ಈ ಮನೆ ಇದೇ ಅಧಿಕಾರಿಗೆ ಸೇರಿದ್ದು ಎಂದು ಭಾವಿಸಿದ್ದು, ಬಹುಶಃ ಆರೋಪಿಗಳು ಇದೇ ಅಧಿಕಾರಿಯನ್ನೇ ಗುರಿಯಾಗಿಸಿಕೊಂಡು ಬಂದಿರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ.

ಹಿಮಾಚಲ ಪ್ರದೇಶದ ಶಿಮ್ಲಾದ ಸಂಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿ ಭೂಪೇಶ್ ಮಲ್ಹೋತ್ರಾ ಮನೆಯ ಮಾಲೀಕರು.

ಮನೆಯ ಮಾಲೀಕರಿಗೆ 100 ವರ್ಷ ವಯಸ್ಸಾಗಿದ್ದು, ವಿದೇಶದಲ್ಲಿ ಇಬ್ಬರು ಗಂಡು ಮಕ್ಕಳು ನೆಲೆಸಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಗಂಡುಮಕ್ಕಳೂ ಒಬ್ಬೊಬ್ಬರಾಗಿ ಇಲ್ಲಿಗೆ ಬಂದು ತಂದೆ ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್