AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠಾಣ್‌ಕೋಟ್‌ನ ಸೇನಾ ಶಿಬಿರದ ಬಳಿ ಗ್ರೆನೇಡ್ ದಾಳಿ; ಮುಂದುವರಿದ ತನಿಖೆ

ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಸಿಟಿವಿಗಳ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಪಠಾಣ್‌ಕೋಟ್‌ನ ಎಸ್‌ಎಸ್‌ಪಿ ಸುರೇಂದ್ರ ಲಂಬಾ ಹೇಳಿದ್ದಾರೆ.

ಪಠಾಣ್‌ಕೋಟ್‌ನ ಸೇನಾ ಶಿಬಿರದ ಬಳಿ ಗ್ರೆನೇಡ್ ದಾಳಿ; ಮುಂದುವರಿದ ತನಿಖೆ
ಗ್ರೆನೇಡ್ ದಾಳಿ
TV9 Web
| Edited By: |

Updated on: Nov 22, 2021 | 10:19 AM

Share

ದೆಹಲಿ: ಪಠಾಣ್‌ಕೋಟ್‌ನ (Pathankot) ಧೀರಪುಲ್ (Dheerapul ಬಳಿಯ ಭಾರತೀಯ ಸೇನೆಯ (Indian Army) ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದೆ. ಕಂಟೋನ್ಮೆಂಟ್‌ನ ತ್ರಿವೇಣಿ ಗೇಟ್‌ನ (Triveni Gate)ಮುಂದೆ ಕೆಲವು ಅಪರಿಚಿತ ಮೋಟರ್‌ಸೈಕ್ಲಿಸ್ಟ್‌ಗಳು ಗ್ರೆನೇಡ್ ಬಿಸಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಪಡೆದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.  “ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಸಿಟಿವಿಗಳ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುತ್ತಿದೆ” ಎಂದು ಪಠಾಣ್‌ಕೋಟ್‌ನ ಎಸ್‌ಎಸ್‌ಪಿ ಸುರೇಂದ್ರ ಲಂಬಾ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಫೋಟದ ನಂತರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ . ಸ್ಥಳದಿಂದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಗ್ರೆನೇಡ್‌ನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಸ್ಫೋಟದಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.

ಜನವರಿ 2016 ರಲ್ಲಿ, ಭಾರತೀಯ ವಾಯುಪಡೆಯ ಪಠಾಣ್‌ಕೋಟ್ ವಾಯುಪಡೆಯ ನೆಲೆಯ ಮೇಲೆ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ಮಾಡಿದರು, ಇದರಲ್ಲಿ ಭದ್ರತಾ ಪಡೆಗಳ ಮೂವರು ಸಿಬ್ಬಂದಿ ಹುತಾತ್ಮರಾಗಿದ್ದರು.

ಇದನ್ನೂ ಓದಿ: Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ