AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠಾಣ್‌ಕೋಟ್‌ನ ಸೇನಾ ಶಿಬಿರದ ಬಳಿ ಗ್ರೆನೇಡ್ ದಾಳಿ; ಮುಂದುವರಿದ ತನಿಖೆ

ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಸಿಟಿವಿಗಳ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಪಠಾಣ್‌ಕೋಟ್‌ನ ಎಸ್‌ಎಸ್‌ಪಿ ಸುರೇಂದ್ರ ಲಂಬಾ ಹೇಳಿದ್ದಾರೆ.

ಪಠಾಣ್‌ಕೋಟ್‌ನ ಸೇನಾ ಶಿಬಿರದ ಬಳಿ ಗ್ರೆನೇಡ್ ದಾಳಿ; ಮುಂದುವರಿದ ತನಿಖೆ
ಗ್ರೆನೇಡ್ ದಾಳಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 22, 2021 | 10:19 AM

Share

ದೆಹಲಿ: ಪಠಾಣ್‌ಕೋಟ್‌ನ (Pathankot) ಧೀರಪುಲ್ (Dheerapul ಬಳಿಯ ಭಾರತೀಯ ಸೇನೆಯ (Indian Army) ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದೆ. ಕಂಟೋನ್ಮೆಂಟ್‌ನ ತ್ರಿವೇಣಿ ಗೇಟ್‌ನ (Triveni Gate)ಮುಂದೆ ಕೆಲವು ಅಪರಿಚಿತ ಮೋಟರ್‌ಸೈಕ್ಲಿಸ್ಟ್‌ಗಳು ಗ್ರೆನೇಡ್ ಬಿಸಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಪಡೆದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.  “ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಸಿಟಿವಿಗಳ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುತ್ತಿದೆ” ಎಂದು ಪಠಾಣ್‌ಕೋಟ್‌ನ ಎಸ್‌ಎಸ್‌ಪಿ ಸುರೇಂದ್ರ ಲಂಬಾ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಫೋಟದ ನಂತರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ . ಸ್ಥಳದಿಂದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಗ್ರೆನೇಡ್‌ನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಸ್ಫೋಟದಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.

ಜನವರಿ 2016 ರಲ್ಲಿ, ಭಾರತೀಯ ವಾಯುಪಡೆಯ ಪಠಾಣ್‌ಕೋಟ್ ವಾಯುಪಡೆಯ ನೆಲೆಯ ಮೇಲೆ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ಮಾಡಿದರು, ಇದರಲ್ಲಿ ಭದ್ರತಾ ಪಡೆಗಳ ಮೂವರು ಸಿಬ್ಬಂದಿ ಹುತಾತ್ಮರಾಗಿದ್ದರು.

ಇದನ್ನೂ ಓದಿ: Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು