AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆ ಮಂಟಪದಿಂದ ಓಡಿಹೋದ ವರ, ವಾಟ್ಸಾಪ್‌ಗೆ ಬಂದ ಆ ಒಂದು ಫೋಟೋ ತಂದ ಭಾರಿ ಫಜೀತಿ

ಹರಿಯಾಣದ ಕೈಥಾಲ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆ ಶಾಸ್ತ್ರದ ವೇಳೆ ವರನ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ವಧುವಿನ ಹಳೆಯ ಫೋಟೋಗಳು ವಾಟ್ಸಾಪ್ ಮೂಲಕ ಬಂದಿವೆ. ಇದರಿಂದ ಆಘಾತಗೊಂಡ ವರ ಮಂಟಪದಿಂದಲೇ ದಿಢೀರ್ ಓಡಿಹೋಗಿದ್ದಾನೆ. ಈ ಹೈಡ್ರಾಮಾದ ವಿಡಿಯೋ ವೈರಲ್ ಆಗಿದ್ದು, ನೆಟಿಜನ್‌ಗಳು ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Video: ಮದುವೆ ಮಂಟಪದಿಂದ ಓಡಿಹೋದ ವರ, ವಾಟ್ಸಾಪ್‌ಗೆ ಬಂದ ಆ ಒಂದು ಫೋಟೋ ತಂದ ಭಾರಿ ಫಜೀತಿ
ಮದುವೆ
ನಯನಾ ರಾಜೀವ್
|

Updated on: Jul 08, 2026 | 9:16 AM

Share

ಕೈಥಾಲ್ ,ಜುಲೈ 08: ಮದುವೆ(Marriage) ಶಾಸ್ತ್ರಗಳು ಮುಗಿದು ಇನ್ನೇನು ಹಾರ ಬದಲಾಯಿಸಬೇಕು ಎನ್ನುವಷ್ಟರಲ್ಲಿ ವರನೊಬ್ಬ ಮಂಟಪದಿಂದಲೇ ದಿಢೀರ್ ಓಡಿಹೋಗಿರುವ ವಿಚಿತ್ರ ಘಟನೆ ಹರಿಯಾಣದ ಕೈಥಾಲ್ ಜಿಲ್ಲೆಯಲ್ಲಿ ನಡೆದಿದೆ. ವರನ ಹಿಂದೆಯೇ ವಧು ಮತ್ತು ಆಕೆಯ ಕುಟುಂಬದವರು ಓಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ನಡೆದಿದ್ದೇನು? ಮದುವೆ ಸಮಾರಂಭ ಅತ್ಯಂತ ಸಂಭ್ರಮದಿಂದ ನಡೆಯುತ್ತಿತ್ತು. ವಧು-ವರರಿಬ್ಬರೂ ಮಂಟಪದಲ್ಲಿದ್ದರು. ಈ ವೇಳೆ ವರನ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ಒಂದು ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ, ನೀನು ಮದುವೆಯಾಗುತ್ತಿರುವ ಹುಡುಗಿ ನನ್ನ ಹಳೆಯ ಗೆಳತಿ ಎಂದು ಹೇಳಿದ್ದಲ್ಲದೆ, ಅದಕ್ಕೆ ಸಾಕ್ಷಿಯಾಗಿ ಕೆಲವು ಫೋಟೋಗಳನ್ನು ವರನ ವಾಟ್ಸಾಪ್‌ಗೆ ಕಳುಹಿಸಿದ್ದಾನೆ.

ಮಂಟಪದಿಂದಲೇ ಕಾಲ್ಕಿತ್ತ ವರ ಮೊಬೈಲ್‌ನಲ್ಲಿ ಆ ಫೋಟೋಗಳನ್ನು ನೋಡುತ್ತಿದ್ದಂತೆ ವರನಿಗೆ ಶಾಕ್ ಆಗಿದೆ. ಆತ ಮರುಕ್ಷಣವೇ ಮದುವೆ ಬೇಡ ಎಂದು ಮಂಟಪದಿಂದ ಹೊರಗೆ ಓಡಲಾರಂಭಿಸಿದ್ದಾನೆ. ಇದನ್ನು ಕಂಡು ಗಾಬರಿಗೊಂಡ ವಧು, ಆಕೆಯ ಪೋಷಕರು ಮತ್ತು ಮದುವೆಗೆ ಬಂದಿದ್ದ ಅತಿಥಿಗಳು ವರನನ್ನು ತಡೆಯಲು ಆತನ ಹಿಂದೆಯೇ ರಸ್ತೆಯಲ್ಲಿ ಓಡಿದ್ದಾರೆ.

ವಿಡಿಯೋ

ಈ ಹೈಡ್ರಾಮಾದ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ನೆಟಿಜನ್‌ಗಳು ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಸದ್ಯ ಈ ಕುರಿತು ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೇಷ ಹಾಗೂ ಮೀನ ರಾಶಿಯವರ ಫಲ ಹೇಗಿದೆ?
ಮೇಷ ಹಾಗೂ ಮೀನ ರಾಶಿಯವರ ಫಲ ಹೇಗಿದೆ?
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ