AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಹಗಲಿಡೀ ನಾಪತ್ತೆಯಾದ ವರ; ವಧುವಿನ ಕಡೆಯವರು ಪೊಲೀಸ್​ ಠಾಣೆಗೆ ಹೋಗುತ್ತಿದ್ದಂತೆ ಪ್ರತ್ಯಕ್ಷ

ವರನ ಹೆಸರು ರತ್ನೇಶ್​ ಕುಮಾರ್​. ಧನ್​ಬಾದ್​ನ ಭುಲಿ ನಿವಾಸಿ. ಭಾರತೀಯ ರೈಲ್ವೆಯಲ್ಲಿ ಉದ್ಯೋಗಿ. ಹುಡುಗ ವಧುವಿಗೆ ವಂಚನೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಹುಡುಗಿಯ ಸಂಬಂಧಿಕರು ಆರೋಪಿಸಿದ್ದಾರೆ.

ಮದುವೆ ದಿನ ಹಗಲಿಡೀ ನಾಪತ್ತೆಯಾದ ವರ; ವಧುವಿನ ಕಡೆಯವರು ಪೊಲೀಸ್​ ಠಾಣೆಗೆ ಹೋಗುತ್ತಿದ್ದಂತೆ ಪ್ರತ್ಯಕ್ಷ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 27, 2022 | 7:16 PM

Share

ಮದುವೆಯ ದಿನ ಹಗಲಿಡೀ ವರ ಕಾಣೆಯಾಗಿ, ಸಂಜೆ ಹೊತ್ತಿಗೆ ಕಾಣಿಸಿಕೊಂಡ ವಿಚಿತ್ರ ಪ್ರಹಸನ ಬಿಹಾರದ (Bihar) ಧನಬಾದ್​ ಎಂಬಲ್ಲಿ ನಡೆದಿದೆ. ಬೆಳಗ್ಗೆ ಮದುವೆ ನಡೆಯಬೇಕಿದ್ದ ಸ್ಥಳಕ್ಕೆ ವಧುವಿನ ಕಡೆಯವರು ಬಂದರು. ವಧುವಂತೂ ಪೂರ್ತಿ ಸಿದ್ಧಳಾಗಿ ನಿಂತಿದ್ದಳು. ಆದರೆ ಎಷ್ಟು ಹೊತ್ತಾದರೂ ವರ ಮಾತ್ರ ಕಾಣಲಿಲ್ಲ. ಹುಡುಕಿದ್ದಾಯ್ತು, ಹುಡುಕಿಸಿದ್ದಾಯ್ತು ಸಂಜೆ ಆಗುತ್ತ ಬಂದರೂ ವರ ಬರಲಿಲ್ಲ. ಕೊನೆಗೆ ಬೇಸತ್ತ ವಧುವಿನ ಕುಟುಂಬದವರು ಪೊಲೀಸ್​ ಠಾಣೆ ಮೆಟ್ಟಿಲೇರಿ, ಇನ್ನೇನು ಎಫ್​ಐಆರ್​ ದಾಖಲು ಮಾಡಬೇಕು ಅನ್ನುವಷ್ಟರಲ್ಲಿ ಇತ್ತ ವರ ಪ್ರತ್ಯಕ್ಷನಾಗಿದ್ದಾನೆ.

ಈ ವರನ ಹೆಸರು ರತ್ನೇಶ್​ ಕುಮಾರ್​. ಧನ್​ಬಾದ್​ನ ಭುಲಿ ನಿವಾಸಿ. ಭಾರತೀಯ ರೈಲ್ವೆಯಲ್ಲಿ ಉದ್ಯೋಗಿ. ಹುಡುಗ ವಧುವಿಗೆ ವಂಚನೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಹುಡುಗಿಯ ಸಂಬಂಧಿಕರು ಆರೋಪಿಸಿದ್ದಾರೆ. ವರ ಕಾಣಿಸುತ್ತಿಲ್ಲವೆಂದು ಮಹಿಳಾ ಪೊಲೀಸ್​ ಠಾಣೆಗೆ ದೂರು ಕೊಡಲು ಹೋದ ವೇಳೆ ವಧು ಕೆಲವು ಮಹತ್ವದ ಸಂಗತಿಗಳನ್ನು ತಿಳಿಸಿದ್ದಾಳೆ. ಮದುವೆ ಕಳೆದ ವರ್ಷವೇ ನಿಗದಿಯಾಗಿತ್ತು. ಆದರೆ ಆಗಲೂ ಕೊನೇ ಕ್ಷಣದಲ್ಲಿ ವರ ತಿರಸ್ಕರಿಸಿದ್ದ. ನಂತರ ರಾಜಿ ಪಂಚಾಯಿತಿ ಮಾಡಿ ಎರಡೂ ಕಡೆಯವರ ಮಧ್ಯೆ ಒಪ್ಪಂದವಾಗಿತ್ತು ಎಂದು ಹೇಳಿದ್ದಾರೆ.

ಬಳಿಕ ಮತ್ತೆ ನಮ್ಮ ಎರಡೂ ಕುಟುಂಬದವರು ಸೇರಿ ಚರ್ಚಿಸಿ, ಮಾರ್ಚ್​ 25ರಂದು ಮದುವೆ ನಿಗದಿ ಪಡಿಸಿದರು. ಅದರಂತೆ ನಾವು ಎಲ್ಲ ಸಿದ್ಧತೆಗಳೊಂದಿಗೆ ಧನ್​ಬಾದ್​ಗೆ ಬಂದೆವು. ಆದರೆ ಹುಡುಗ ನಾಪತ್ತೆಯಾದ ಎಂದು ಯುವತಿ ಹೇಳಿದ್ದಾಳೆ.  ಸಂಜೆ ಹೊತ್ತಿಗೆ ಯುವಕ ಮತ್ತೆ ಕಾಣಿಸಿಕೊಂಡ ಬಳಿಕ ಇವರಿಬ್ಬರಿಗೂ ರಾತ್ರಿ ಮದುವೆ ಮಾಡಿದ್ದಾಗಿ ವರದಿಯಾಗಿದೆ.

ಇದನ್ನೂ ಓದಿ: Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ