AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಹಗಲಿಡೀ ನಾಪತ್ತೆಯಾದ ವರ; ವಧುವಿನ ಕಡೆಯವರು ಪೊಲೀಸ್​ ಠಾಣೆಗೆ ಹೋಗುತ್ತಿದ್ದಂತೆ ಪ್ರತ್ಯಕ್ಷ

ವರನ ಹೆಸರು ರತ್ನೇಶ್​ ಕುಮಾರ್​. ಧನ್​ಬಾದ್​ನ ಭುಲಿ ನಿವಾಸಿ. ಭಾರತೀಯ ರೈಲ್ವೆಯಲ್ಲಿ ಉದ್ಯೋಗಿ. ಹುಡುಗ ವಧುವಿಗೆ ವಂಚನೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಹುಡುಗಿಯ ಸಂಬಂಧಿಕರು ಆರೋಪಿಸಿದ್ದಾರೆ.

ಮದುವೆ ದಿನ ಹಗಲಿಡೀ ನಾಪತ್ತೆಯಾದ ವರ; ವಧುವಿನ ಕಡೆಯವರು ಪೊಲೀಸ್​ ಠಾಣೆಗೆ ಹೋಗುತ್ತಿದ್ದಂತೆ ಪ್ರತ್ಯಕ್ಷ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Mar 27, 2022 | 7:16 PM

Share

ಮದುವೆಯ ದಿನ ಹಗಲಿಡೀ ವರ ಕಾಣೆಯಾಗಿ, ಸಂಜೆ ಹೊತ್ತಿಗೆ ಕಾಣಿಸಿಕೊಂಡ ವಿಚಿತ್ರ ಪ್ರಹಸನ ಬಿಹಾರದ (Bihar) ಧನಬಾದ್​ ಎಂಬಲ್ಲಿ ನಡೆದಿದೆ. ಬೆಳಗ್ಗೆ ಮದುವೆ ನಡೆಯಬೇಕಿದ್ದ ಸ್ಥಳಕ್ಕೆ ವಧುವಿನ ಕಡೆಯವರು ಬಂದರು. ವಧುವಂತೂ ಪೂರ್ತಿ ಸಿದ್ಧಳಾಗಿ ನಿಂತಿದ್ದಳು. ಆದರೆ ಎಷ್ಟು ಹೊತ್ತಾದರೂ ವರ ಮಾತ್ರ ಕಾಣಲಿಲ್ಲ. ಹುಡುಕಿದ್ದಾಯ್ತು, ಹುಡುಕಿಸಿದ್ದಾಯ್ತು ಸಂಜೆ ಆಗುತ್ತ ಬಂದರೂ ವರ ಬರಲಿಲ್ಲ. ಕೊನೆಗೆ ಬೇಸತ್ತ ವಧುವಿನ ಕುಟುಂಬದವರು ಪೊಲೀಸ್​ ಠಾಣೆ ಮೆಟ್ಟಿಲೇರಿ, ಇನ್ನೇನು ಎಫ್​ಐಆರ್​ ದಾಖಲು ಮಾಡಬೇಕು ಅನ್ನುವಷ್ಟರಲ್ಲಿ ಇತ್ತ ವರ ಪ್ರತ್ಯಕ್ಷನಾಗಿದ್ದಾನೆ.

ಈ ವರನ ಹೆಸರು ರತ್ನೇಶ್​ ಕುಮಾರ್​. ಧನ್​ಬಾದ್​ನ ಭುಲಿ ನಿವಾಸಿ. ಭಾರತೀಯ ರೈಲ್ವೆಯಲ್ಲಿ ಉದ್ಯೋಗಿ. ಹುಡುಗ ವಧುವಿಗೆ ವಂಚನೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಹುಡುಗಿಯ ಸಂಬಂಧಿಕರು ಆರೋಪಿಸಿದ್ದಾರೆ. ವರ ಕಾಣಿಸುತ್ತಿಲ್ಲವೆಂದು ಮಹಿಳಾ ಪೊಲೀಸ್​ ಠಾಣೆಗೆ ದೂರು ಕೊಡಲು ಹೋದ ವೇಳೆ ವಧು ಕೆಲವು ಮಹತ್ವದ ಸಂಗತಿಗಳನ್ನು ತಿಳಿಸಿದ್ದಾಳೆ. ಮದುವೆ ಕಳೆದ ವರ್ಷವೇ ನಿಗದಿಯಾಗಿತ್ತು. ಆದರೆ ಆಗಲೂ ಕೊನೇ ಕ್ಷಣದಲ್ಲಿ ವರ ತಿರಸ್ಕರಿಸಿದ್ದ. ನಂತರ ರಾಜಿ ಪಂಚಾಯಿತಿ ಮಾಡಿ ಎರಡೂ ಕಡೆಯವರ ಮಧ್ಯೆ ಒಪ್ಪಂದವಾಗಿತ್ತು ಎಂದು ಹೇಳಿದ್ದಾರೆ.

ಬಳಿಕ ಮತ್ತೆ ನಮ್ಮ ಎರಡೂ ಕುಟುಂಬದವರು ಸೇರಿ ಚರ್ಚಿಸಿ, ಮಾರ್ಚ್​ 25ರಂದು ಮದುವೆ ನಿಗದಿ ಪಡಿಸಿದರು. ಅದರಂತೆ ನಾವು ಎಲ್ಲ ಸಿದ್ಧತೆಗಳೊಂದಿಗೆ ಧನ್​ಬಾದ್​ಗೆ ಬಂದೆವು. ಆದರೆ ಹುಡುಗ ನಾಪತ್ತೆಯಾದ ಎಂದು ಯುವತಿ ಹೇಳಿದ್ದಾಳೆ.  ಸಂಜೆ ಹೊತ್ತಿಗೆ ಯುವಕ ಮತ್ತೆ ಕಾಣಿಸಿಕೊಂಡ ಬಳಿಕ ಇವರಿಬ್ಬರಿಗೂ ರಾತ್ರಿ ಮದುವೆ ಮಾಡಿದ್ದಾಗಿ ವರದಿಯಾಗಿದೆ.

ಇದನ್ನೂ ಓದಿ: Shri Lanka: 54 ವರ್ಷಗಳ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮರು ಉದ್ಘಾಟನೆ; ಮಾಲ್ಡೀವ್ಸ್​​​ನಿಂದ ಬಂತೊಂದು ಫ್ಲೈಟ್​

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?