AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವರ

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಟನ್​ನಲ್ಲಿ ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆ ರದ್ದುಗೊಂಡಿದೆ. ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ, ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವರ
ಮಟನ್
ನಯನಾ ರಾಜೀವ್
|

Updated on:Dec 26, 2023 | 9:26 AM

Share

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಟನ್​ನಲ್ಲಿ ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆ ರದ್ದುಗೊಂಡಿದೆ. ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ, ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.

ಆ ಖುಷಿಯಲ್ಲಿ ಮಾಂಸದೂಟವನ್ನು ಏರ್ಪಡಿಸಿದ್ದರು, ಮಧುಮಗನ ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಅತಿಥಿಗಳು ಮಾಂಸಾಹಾರಿ ಖಾದ್ಯ ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಗಲಾಟೆ ಶುರು ಮಾಡಿದ್ದರು. ಇದು ಅಂತಿಮವಾಗಿ ಎರಡೂ ಪಕ್ಷಗಳ ನಡುವೆ ಜಗಳಕ್ಕೆ ಕಾರಣವಾಯಿತು.

ಸಮಸ್ಯೆ ಸ್ಥಳೀಯ ಪೊಲೀಸ್ ಠಾಣೆಗೆ ತಲುಪಿತು, ಮಾಂಸದ ವಿಚಾರಕ್ಕೆ ಸಂಬಂಧಿಸಿದಂತೆ ವರನ ಕಡೆಯವರಿಗೆ ಮನವರಿಕೆ ಮಾಡಲು ಅಧಿಕಾರಿಗಳು ಪ್ರಯತ್ನಿಸಿದರು.

ಆದರೆ, ವಧುವಿನ ಮನೆಯವರು ಮಾಂಸಾಹಾರದಲ್ಲಿ ಮೂಳೆಯನ್ನು ನೀಡದೆ ಅವಮಾನ ಮಾಡಿದ್ದಾರೆ ಎಂದು ವಾದಿಸಿದರು. ವಧುವಿನ ಮನೆಯವರು ಈ ಬಗ್ಗೆ ಮೊದಲೇ ತಿಳಿಸಿರಲಿಲ್ಲ, ಮೂಳೆಯನ್ನು ಊಟದಲ್ಲಿ ಸೇರಿಸಲಿಲ್ಲ ಎಂದು ವಾದಿಸಿದರು.

ಕೊನೆಗೆ ಎರಡೂ ಕಡೆಯವರು ತಮ್ಮ ತಮ್ಮ ಊರುಗಳಿಗೆ ತೆರಳಿ ಮದುವೆ ರದ್ದತಿಗೆ ಕಾರಣವಾದ ವಿಚಾರವನ್ನು ನೋಡಿ ಪೊಲೀಸರು ಹಾಗೂ ಸ್ಥಳೀಯರು ಆಶ್ಚರ್ಯಚಕಿತರಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:26 am, Tue, 26 December 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ