Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವರ

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಟನ್​ನಲ್ಲಿ ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆ ರದ್ದುಗೊಂಡಿದೆ. ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ, ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವರ
ಮಟನ್
Follow us
ನಯನಾ ರಾಜೀವ್
|

Updated on:Dec 26, 2023 | 9:26 AM

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಟನ್​ನಲ್ಲಿ ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆ ರದ್ದುಗೊಂಡಿದೆ. ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ಘಟನೆ ನಡೆದಿದೆ, ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.

ಆ ಖುಷಿಯಲ್ಲಿ ಮಾಂಸದೂಟವನ್ನು ಏರ್ಪಡಿಸಿದ್ದರು, ಮಧುಮಗನ ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಅತಿಥಿಗಳು ಮಾಂಸಾಹಾರಿ ಖಾದ್ಯ ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಗಲಾಟೆ ಶುರು ಮಾಡಿದ್ದರು. ಇದು ಅಂತಿಮವಾಗಿ ಎರಡೂ ಪಕ್ಷಗಳ ನಡುವೆ ಜಗಳಕ್ಕೆ ಕಾರಣವಾಯಿತು.

ಸಮಸ್ಯೆ ಸ್ಥಳೀಯ ಪೊಲೀಸ್ ಠಾಣೆಗೆ ತಲುಪಿತು, ಮಾಂಸದ ವಿಚಾರಕ್ಕೆ ಸಂಬಂಧಿಸಿದಂತೆ ವರನ ಕಡೆಯವರಿಗೆ ಮನವರಿಕೆ ಮಾಡಲು ಅಧಿಕಾರಿಗಳು ಪ್ರಯತ್ನಿಸಿದರು.

ಆದರೆ, ವಧುವಿನ ಮನೆಯವರು ಮಾಂಸಾಹಾರದಲ್ಲಿ ಮೂಳೆಯನ್ನು ನೀಡದೆ ಅವಮಾನ ಮಾಡಿದ್ದಾರೆ ಎಂದು ವಾದಿಸಿದರು. ವಧುವಿನ ಮನೆಯವರು ಈ ಬಗ್ಗೆ ಮೊದಲೇ ತಿಳಿಸಿರಲಿಲ್ಲ, ಮೂಳೆಯನ್ನು ಊಟದಲ್ಲಿ ಸೇರಿಸಲಿಲ್ಲ ಎಂದು ವಾದಿಸಿದರು.

ಕೊನೆಗೆ ಎರಡೂ ಕಡೆಯವರು ತಮ್ಮ ತಮ್ಮ ಊರುಗಳಿಗೆ ತೆರಳಿ ಮದುವೆ ರದ್ದತಿಗೆ ಕಾರಣವಾದ ವಿಚಾರವನ್ನು ನೋಡಿ ಪೊಲೀಸರು ಹಾಗೂ ಸ್ಥಳೀಯರು ಆಶ್ಚರ್ಯಚಕಿತರಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:26 am, Tue, 26 December 23

‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್