AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳವಾರ ಬೆಳಗ್ಗೆ ಭಾರತಕ್ಕೆ ತಲುಪಲಿದೆ ಫ್ರಾನ್ಸ್ ವಶದಲ್ಲಿದ್ದ ಭಾರತೀಯ ಪ್ರಯಾಣಿಕರ ವಿಮಾನ

ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ಬಸ್ A340 ನಿಕರಾಗುವಾಗೆ ಹೋಗುತ್ತಿದ್ದಾಗ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಸುದ್ದಿ ಸಂಸ್ಥೆ ಎಎಫ್​​ಬಿ ವರದಿ ಮಾಡಿದೆ. ಮಾನವ ಕಳ್ಳಸಾಗಣೆಯ ಸಂಭಾವ್ಯ ಸಂತ್ರಸ್ತರನ್ನು ಹೊತ್ತೊಯ್ಯುತ್ತಿದೆ ಎಂಬ ಅನಾಮಧೇಯ ಸುಳಿವು ನಂತರ ವಿಮಾನವನ್ನು ಕೆಳಗಿಳಿಸಲಾಗಿತ್ತು

ಮಂಗಳವಾರ ಬೆಳಗ್ಗೆ ಭಾರತಕ್ಕೆ ತಲುಪಲಿದೆ ಫ್ರಾನ್ಸ್ ವಶದಲ್ಲಿದ್ದ ಭಾರತೀಯ ಪ್ರಯಾಣಿಕರ ವಿಮಾನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Dec 25, 2023 | 9:44 PM

Share

ದೆಹಲಿ ಡಿಸೆಂಬರ್ 25: ಮಾನವ ಕಳ್ಳಸಾಗಣೆ (human trafficking) ಆರೋಪದ ಮೇಲೆ ಪ್ಯಾರಿಸ್ (Paris) ವಶದಲ್ಲಿದ್ದ  ಸುಮಾರು 300 ಭಾರತೀಯ ಪ್ರಯಾಣಿಕರೊಂದಿಗೆ ಬಂಧನಕ್ಕೊಳಗಾದ ವಿಮಾನವನ್ನು ಫ್ರೆಂಚ್ ಪೊಲೀಸರು ಹೊರಡಲು ಅನುಮತಿ ನೀಡಿದ್ದಾರೆ. ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದುಬೈನಿಂದ ಹೊರಟ ಏರ್‌ಬಸ್ A340 ನಿಕರಾಗುವಾಗೆ(Nicaragua) ಹೋಗುತ್ತಿದ್ದಾಗ  ಇಂಧನ ತುಂಬಿಸಲು  ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದಾಗ ಬಂಧಿಸಲಾಯಿತು ಎಂದು ಸುದ್ದಿ ಸಂಸ್ಥೆ ಎಎಫ್​​ಬಿ ವರದಿ ಮಾಡಿದೆ. ಮಾನವ ಕಳ್ಳಸಾಗಣೆಯ ಸಂಭಾವ್ಯ ಸಂತ್ರಸ್ತರನ್ನು ಹೊತ್ತೊಯ್ಯುತ್ತಿದೆ ಎಂಬ ಅನಾಮಧೇಯ ಸುಳಿವು ನಂತರ ವಿಮಾನವನ್ನು ಕೆಳಗಿಳಿಸಲಾಗಿತ್ತು. ನಾಳೆ (ಮಂಗಳವಾರ) ಬೆಳಗ್ಗಿನ ಜಾವ ವಿಮಾನ ಮುಂಬೈ ತಲುಪುವ ನಿರೀಕ್ಷೆ ಇದೆ.

ಈ ಬಗ್ಗೆ ಫ್ರಾನ್ಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಟ್ವೀಟ್ ಮಾಡಿದ್ದು “ಭಾರತೀಯ ಪ್ರಯಾಣಿಕರು ಮನೆಗೆ ಮರಳಲು ಮತ್ತು ಆತಿಥ್ಯವನ್ನು ನೀಡಲು ಅನುವು ಮಾಡಿಕೊಡುವ ಪರಿಸ್ಥಿತಿಯನ್ನು ತ್ವರಿತವಾಗಿ ಪರಿಹರಿಸಿದ್ದಕ್ಕಾಗಿ ಫ್ರೆಂಚ್ ಸರ್ಕಾರ ಮತ್ತು ವಾಟ್ರಿ ವಿಮಾನ ನಿಲ್ದಾಣಕ್ಕೆ ಧನ್ಯವಾದಗಳು. ಪ್ರಯಾಣಿಕರ ಯೋಗಕ್ಷೇಮ ಮತ್ತು ಸುಗಮ ಮತ್ತು ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ರಾಯಭಾರ ಕಚೇರಿ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದೆ.

ಇಲ್ಲಿಯವರೆಗೆ ಏನೇನಾಯಿತು?

ಫ್ರೆಂಚ್ ಪ್ರಾಸಿಕ್ಯೂಟರ್‌ಗಳು ಪ್ರಯಾಣಿಕರನ್ನು ಎರಡು ದಿನಗಳ ಕಾಲ ಪ್ರಶ್ನಿಸಿ ವಿಮಾನವನ್ನು ಹೊರಡಲು ಅನುಮತಿ ನೀಡಿದರು. ಎಎಫ್‌ಪಿ ಪ್ರಕಾರ ಪ್ರಯಾಣಿಕರನ್ನು ಭಾರತಕ್ಕೆ ಕಳುಹಿಸಲಾಗುವುದು ಎಂದು ಸ್ಥಳೀಯ ಬಾರ್ ಅಸೋಸಿಯೇಷನ್‌ನ ಮುಖ್ಯಸ್ಥ ಫ್ರಾಂಕೋಯಿಸ್ ಪ್ರೊಕ್ಯೂರ್ ಹೇಳಿದ್ದಾರೆ. ಭಾರತೀಯರು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಕೆಲಸಗಾರರಾಗಿರಬಹುದು, ಅವರು ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಕ್ಕೆ ಹೋಗಲು ನಿಕರಾಗುವಾಕ್ಕೆ ಬಂದರು ಎಂದು ಅವರು ಹೇಳಿದ್ದಾರೆ. ತನಿಖೆಯ ಸಮಯದಲ್ಲಿ ವಿಮಾನದ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ಕೂರಿಸಿದ್ದು, ಅವರಿಗೆ ಹಾಸಿಗೆಗಳು, ಶೌಚಾಲಯ ಸೌಲಭ್ಯ ಒದಗಿಸಲಾಗಿತ್ತು. ಪ್ಯಾರಿಸ್ ಪ್ರಾಸಿಕ್ಯೂಟರ್‌ಗಳ ಪ್ರಕಾರ ಪ್ರಯಾಣಿಕರಲ್ಲಿ 11 ಅಪ್ರಾಪ್ತ ವಯಸ್ಕರು ಸೇರಿದ್ದಾರೆ.

ಇದನ್ನೂ ಓದಿ:ಇಸ್ರೋ ಚಂದ್ರಯಾನ ಮಹಾಕ್ವಿಜ್; 300ಕ್ಕೂ ಹೆಚ್ಚು ಮಂದಿಗೆ ಬಹುಮಾನ; ಮೊದಲು ಬಂದವರಿಗೆ ಲಕ್ಷ ರೂ; ನೀವೂ ಪಾಲ್ಗೊಳ್ಳುವುದು ಹೇಗೆ? ಇಲ್ಲಿದೆ ಡೀಟೇಲ್ಸ್ 

ವಿಮಾನ ಹೊರಡಲು ತಡ ಯಾಕೆ?

ಇನ್ನು ಮೂವರು ಪ್ರಯಾಣಿಕರನ್ನು ಬಂಧಿಸುವುದು ಕಾನೂನುಬಾಹಿರ ಎಂದು ಫ್ರೆಂಚ್ ನ್ಯಾಯಾಲಯ ತೀರ್ಪು ನೀಡಿದ ನಂತರ ವಿಮಾನವನ್ನು ಹೊರಡಲು ಅನುಮತಿ ನೀಡಲಾಗಿದೆ ಎಂದು ಎಎಫ್‌ಪಿ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Mon, 25 December 23

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ