AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ್​ ಸಿಂಗ್​ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದನ್ನು ಖಚಿತ ಪಡಿಸಿದ ತಂದೆ ಕೆ.ಪಿ.ಸಿಂಗ್​; ಮಗನ ಪರಿಸ್ಥಿತಿ ಬಗ್ಗೆ ಮೌನ

ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ಅವರು ವೆಲ್ಲಿಂಗ್ಟನ್​ ಮಿಲಿಟರಿ ಆಸ್ಪತ್ರೆಯಲ್ಲಿ ಲೈಫ್​ ಸಪೋರ್ಟ್​ ವ್ಯವಸ್ಥೆಯಲ್ಲಿ ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವರುಣ್​ ಸಿಂಗ್​ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದನ್ನು ಖಚಿತ ಪಡಿಸಿದ ತಂದೆ ಕೆ.ಪಿ.ಸಿಂಗ್​; ಮಗನ ಪರಿಸ್ಥಿತಿ ಬಗ್ಗೆ ಮೌನ
ವರುಣ್​ ಸಿಂಗ್​
TV9 Web
| Edited By: |

Updated on:Dec 09, 2021 | 1:49 PM

Share

ತಮಿಳುನಾಡಿನ ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದ ಏಕೈಕ ಯೋಧ, ಐಎಎಫ್​ ಗ್ರೂಪ್​​ ಕ್ಯಾಪ್ಟನ್​ ವರುಣ್​ ಸಿಂಗ್(Group Captain Varun Singh)​ರನ್ನು ತಮಿಳುನಾಡಿನ ವೆಲ್ಲಿಂಗ್ಟನ್​ ಮಿಲಿಟರಿ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಅವರ  ತಂದೆ ಹೇಳಿದ್ದಾರೆ. ಇಂದು ಪಿಟಿಐ ಜತೆ ಫೋನ್​ನಲ್ಲಿ ಮಾತನಾಡಿದ ವರುಣ್​ ಸಿಂಗ್​ ತಂದೆ, ನಿವೃತ್ತ ಕರ್ನಲ್​ ಕೆ.ಪಿ.ಸಿಂಗ್​, ನಾನೀಗ ವೆಲ್ಲಿಂಗ್ಟನ್​ಗೆ ತಲುಪಿದ್ದೇನೆ. ವರುಣ್​ ಸಿಂಗ್​​ರನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ. ಹೇಗಿದ್ದಾರೆ ನಿಮ್ಮ ಮಗ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗಲೇ ಏನೂ ಹೇಳಲಾರೆ. ಯಾವುದೂ ಖಚಿತವಿಲ್ಲ ಎನ್ನುತ್ತ ಮೌನವಾಗಿದ್ದಾರೆ.

ಇನ್ನು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕೆ.ಪಿ.ಸಿಂಗ್​ ಅವರ ಪಕ್ಕದ ಮನೆಯಲ್ಲೇ ವಾಸವಾಗಿರುವ ನಿವೃತ್ತ ಲೆಫ್ಟಿನೆಂಟ್ ಕರ್ನಲ್​ ಇಶಾನ್​,  ಘಟನೆ ನಡೆದಾಗ ವರುಣ್​ ಸಿಂಗ್​ ತಂದೆ ಕೆ.ಪಿ.ಸಿಂಗ್​ ಮತ್ತು ಅವರ ಪತ್ನಿ ಇಬ್ಬರೂ ಮುಂಬೈನಲ್ಲಿ, ತಮ್ಮ ಕಿರಿಯ ಮಗ ತನುಜ್​ ಮನೆಯಲ್ಲಿ ಇದ್ದರು. ತನುಜ್​ ಕೂಡ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್​ ಕಮಾಂಡರ್​ ಆಗಿದ್ದಾರೆ. ನಾನು ಫೋನ್​ ಮಾಡಿ ಕೆ.ಪಿ.ಸಿಂಗ್​ ಬಳಿ ಮಾತನಾಡಿದ್ದೇನೆ ಎಂದಿದ್ದಾರೆ. ಹಾಗೇ, ಕೆ.ಪಿ.ಸಿಂಗ್ ಅವರಿಗೆ ತಮ್ಮ ಪುತ್ರ ವರುಣ್ ಸಿಂಗ್​ ಬಗ್ಗೆ ಹೆಮ್ಮೆಯಿದೆ. ಆತ ಫೈಟರ್​ ಮತ್ತು ಈ ಜೀವನ್ಮರಣದ ಹೋರಾಟದಲ್ಲೂ ಗೆದ್ದು ಬರುತ್ತಾನೆ ಎಂಬ ನಂಬಿಕೆಯಿದೆ ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ತೇಜಸ್​ ಏರ್​ಕ್ರಾಫ್ಟ್​ ಟೆಸ್ಟ್​ ಹಾರಾಟ ನಡೆಸುತ್ತಿದ್ದ ವೇಳೆ ಕೂಡ ವರುಣ್​ ಸಿಂಗ್​ ಜೀವಕ್ಕೆ ಅಪಾಯ ಎದುರಾಗಿತ್ತು. ಅಂದು ಬದುಕಿ ಬಂದಿದ್ದ ಅವರ ಶೌರ್ಯಕ್ಕೆ ತಕ್ಕನಾಗಿ ಶೌರ್ಯಚಕ್ರ ಪ್ರಶಸ್ತಿ ಕೊಟ್ಟು ಪುರಸ್ಕರಿಸಲಾಗಿದೆ.

ಶೇ.45ರಷ್ಟು ಸುಟ್ಟಗಾಯ ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ಅವರು ವೆಲ್ಲಿಂಗ್ಟನ್​ ಮಿಲಿಟರಿ ಆಸ್ಪತ್ರೆಯಲ್ಲಿ ಲೈಫ್​ ಸಪೋರ್ಟ್​ ವ್ಯವಸ್ಥೆಯಲ್ಲಿ ಇದ್ದಾರೆ. ಅವರ ಜೀವ ಕಾಪಾಡಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  Army Chopper Crash: ದುರಂತ ಸ್ಥಳದಲ್ಲಿ ಕಾಪ್ಟರ್​​ನ ಬ್ಲ್ಯಾಕ್​ ಬಾಕ್ಸ್ ಪತ್ತೆ, ಪತನದ ರಹಸ್ಯ ಶೀಘ್ರದಲ್ಲೇ ಬಯಲು; ಅಷ್ಟಕ್ಕೂ ಏನಿದು ಬ್ಲ್ಯಾಕ್​ ಬಾಕ್ಸ್?

Published On - 1:36 pm, Thu, 9 December 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ