AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

Tamil Nadu Chopper Crash: ಡಿ.8ರಂದು ತಮಿಳುನಾಡಿನ ಕೂನೂರು ಬಳಿಯ ಕಟ್ಟೇರಿ ಎಂಬ ಗುಡ್ಡಗಾಡು ಗ್ರಾಮದ ಬಳಿ ಸೇನಾ ವಿಐಪಿ ಹೆಲಿಕಾಪ್ಟರ್​ ಪತನಗೊಂಡಿತ್ತು. ಅವರು ಸೂಲೂರಿಂದ ವೆಲ್ಲಿಂಗ್ಟನ್​ಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಅವಘಡ ಆಗಿತ್ತು.

Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ
Varun Singh
TV9 Web
| Edited By: |

Updated on:Dec 15, 2021 | 1:29 PM

Share

Varun Singh Passes Away: ತಮಿಳು ನಾಡಿನ (Tamil Nadu Chopper Crash) ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನ (IAF Chopper Crash) ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್ (Group Captain Varun Singh) ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್ (Bipin Rawat), ಅವರ ಪತ್ನಿ ಮಧುಲಿಕಾ ರಾವತ್ (Madhulika Rawat) ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್​ ಸಿಂಗ್ (Varun Singh) ಮಾತ್ರ ಬದುಕುಳಿದಿದ್ದರು. ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ (Commando Hospital) ಅಂದಿನಿಂದಲೂ ಚಿಕಿತ್ಸೆ ನೀಡಲಾಗುತ್ತಿತ್ತು. ಮೊದಲು ವೆಲ್ಲಿಂಗ್ಟನ್​ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು.

ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ನಿಧನದ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿ, ಸಂತಾಪ ಸೂಚಿಸಿದೆ. ವೀರಯೋಧ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ನಿಧನ ತುಂಬ ನೋವು ತಂದಿದೆ. ಡಿ.8ರ ಅವಘಡದಲ್ಲಿ ಅವರು ಗಾಯಗೊಂಡಿದ್ದರು. ವರುಣ್​ ಸಿಂಗ್ ಕುಟುಂಬದೊಂದಿಗೆ ನಾವು ಇದ್ದೇವೆ ಎಂದು ಹೇಳಿದೆ.

ಡಿ.8ರಂದು ತಮಿಳುನಾಡಿನ ಕೂನೂರು ಬಳಿಯ ಕಟ್ಟೇರಿ ಎಂಬ ಗುಡ್ಡಗಾಡು ಗ್ರಾಮದ ಬಳಿ ಸೇನಾ ವಿಐಪಿ ಹೆಲಿಕಾಪ್ಟರ್​ ಪತನಗೊಂಡಿತ್ತು. ಅವರು ಸೂಲೂರಿಂದ ವೆಲ್ಲಿಂಗ್ಟನ್​ಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಅವಘಡ ಆಗಿತ್ತು. ಅದರಲ್ಲಿ ಭಾರತದ ಮೊದಲ ಸಿಡಿಎಸ್​ ಬಿಪಿನ್​ ರಾವತ್​ ಸೇರಿ 11 ಮಂದಿ ಸೇನಾಧಿಕಾರಿಗಳು ಇದ್ದರು. ದುರಂತದಲ್ಲಿ ಅಂದು ಮೃತಪಟ್ಟವರ ಮೃತದೇಹ ಗುರುತು ಪತ್ತೆ, ಅಂತ್ಯಸಂಸ್ಕಾರ ನಡೆದಿದೆ. ಆದರೆ ವರುಣ್​ ಸಿಂಗ್​ ಒಬ್ಬರು ಬದುಕುಳಿದಿದ್ದರು. ವರುಣ್​ ಸಿಂಗ್​ ಆರೋಗ್ಯ ಸ್ಥಿತಿ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಅವರ ಕುಟುಂಬಸ್ಥರೇ ಹೇಳಿದ್ದರು. ಆದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ಭಾರತೀಯ ವಾಯುಸೇನೆ, ವರುಣ್​ ಸಿಂಗ್ ಗಂಭೀರ ಸ್ಥಿತಿಯಲ್ಲಿಯೇ ಇದ್ದಾರೆ. ಆದರೆ ಅವರು ಗುಣಮುಖರಾಗುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿತ್ತು.

ಕಳೆದ ಆಗಸ್ಟ್ 15ರಂದು ವಿಂಗ್ ಕಮಾಂಡರ್​ ವರುಣ್ ಸಿಂಗ್ ಅವರು ಹಗುರ ಯುದ್ಧ ವಿಮಾನ (Light Combat Aircraft – LCA) ಸ್ಕ್ವಾರ್ಡನ್​ನಲ್ಲಿ ಪೈಲಟ್ ಆಗಿದ್ದರು. ಅವರಿಗೆ ಭಾರತದ ಸಶಸ್ತ್ರಪಡೆಗಳಿಗೆ ಶಾಂತಿಕಾಲದಲ್ಲಿ ನೀಡುವ ಮೂರನೇ ಅತ್ಯುನ್ನತ ಗೌರವವಾದ ಶೌರ್ಯಚಕ್ರ ನೀಡಿ ಪುರಸ್ಕರಿಸಲಾಗಿತ್ತು

ಇದನ್ನೂ ಓದಿ: ಮಗಳ ಕ್ಷೇಮಕ್ಕಾಗಿ ಪಾಲಕರು ನೀಡುವ ಉಡುಗೊರೆ ವರದಕ್ಷಿಣೆ ಅಲ್ಲ: ಕೇರಳ ಹೈಕೋರ್ಟ್

Published On - 12:52 pm, Wed, 15 December 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್