AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

Tamil Nadu Chopper Crash: ಡಿ.8ರಂದು ತಮಿಳುನಾಡಿನ ಕೂನೂರು ಬಳಿಯ ಕಟ್ಟೇರಿ ಎಂಬ ಗುಡ್ಡಗಾಡು ಗ್ರಾಮದ ಬಳಿ ಸೇನಾ ವಿಐಪಿ ಹೆಲಿಕಾಪ್ಟರ್​ ಪತನಗೊಂಡಿತ್ತು. ಅವರು ಸೂಲೂರಿಂದ ವೆಲ್ಲಿಂಗ್ಟನ್​ಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಅವಘಡ ಆಗಿತ್ತು.

Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ
Varun Singh
Follow us
TV9 Web
| Updated By: Digi Tech Desk

Updated on:Dec 15, 2021 | 1:29 PM

Varun Singh Passes Away: ತಮಿಳು ನಾಡಿನ (Tamil Nadu Chopper Crash) ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನ (IAF Chopper Crash) ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್ (Group Captain Varun Singh) ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್ (Bipin Rawat), ಅವರ ಪತ್ನಿ ಮಧುಲಿಕಾ ರಾವತ್ (Madhulika Rawat) ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್​ ಸಿಂಗ್ (Varun Singh) ಮಾತ್ರ ಬದುಕುಳಿದಿದ್ದರು. ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ (Commando Hospital) ಅಂದಿನಿಂದಲೂ ಚಿಕಿತ್ಸೆ ನೀಡಲಾಗುತ್ತಿತ್ತು. ಮೊದಲು ವೆಲ್ಲಿಂಗ್ಟನ್​ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು.

ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ನಿಧನದ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿ, ಸಂತಾಪ ಸೂಚಿಸಿದೆ. ವೀರಯೋಧ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ನಿಧನ ತುಂಬ ನೋವು ತಂದಿದೆ. ಡಿ.8ರ ಅವಘಡದಲ್ಲಿ ಅವರು ಗಾಯಗೊಂಡಿದ್ದರು. ವರುಣ್​ ಸಿಂಗ್ ಕುಟುಂಬದೊಂದಿಗೆ ನಾವು ಇದ್ದೇವೆ ಎಂದು ಹೇಳಿದೆ.

ಡಿ.8ರಂದು ತಮಿಳುನಾಡಿನ ಕೂನೂರು ಬಳಿಯ ಕಟ್ಟೇರಿ ಎಂಬ ಗುಡ್ಡಗಾಡು ಗ್ರಾಮದ ಬಳಿ ಸೇನಾ ವಿಐಪಿ ಹೆಲಿಕಾಪ್ಟರ್​ ಪತನಗೊಂಡಿತ್ತು. ಅವರು ಸೂಲೂರಿಂದ ವೆಲ್ಲಿಂಗ್ಟನ್​ಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಅವಘಡ ಆಗಿತ್ತು. ಅದರಲ್ಲಿ ಭಾರತದ ಮೊದಲ ಸಿಡಿಎಸ್​ ಬಿಪಿನ್​ ರಾವತ್​ ಸೇರಿ 11 ಮಂದಿ ಸೇನಾಧಿಕಾರಿಗಳು ಇದ್ದರು. ದುರಂತದಲ್ಲಿ ಅಂದು ಮೃತಪಟ್ಟವರ ಮೃತದೇಹ ಗುರುತು ಪತ್ತೆ, ಅಂತ್ಯಸಂಸ್ಕಾರ ನಡೆದಿದೆ. ಆದರೆ ವರುಣ್​ ಸಿಂಗ್​ ಒಬ್ಬರು ಬದುಕುಳಿದಿದ್ದರು. ವರುಣ್​ ಸಿಂಗ್​ ಆರೋಗ್ಯ ಸ್ಥಿತಿ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಅವರ ಕುಟುಂಬಸ್ಥರೇ ಹೇಳಿದ್ದರು. ಆದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ಭಾರತೀಯ ವಾಯುಸೇನೆ, ವರುಣ್​ ಸಿಂಗ್ ಗಂಭೀರ ಸ್ಥಿತಿಯಲ್ಲಿಯೇ ಇದ್ದಾರೆ. ಆದರೆ ಅವರು ಗುಣಮುಖರಾಗುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿತ್ತು.

ಕಳೆದ ಆಗಸ್ಟ್ 15ರಂದು ವಿಂಗ್ ಕಮಾಂಡರ್​ ವರುಣ್ ಸಿಂಗ್ ಅವರು ಹಗುರ ಯುದ್ಧ ವಿಮಾನ (Light Combat Aircraft – LCA) ಸ್ಕ್ವಾರ್ಡನ್​ನಲ್ಲಿ ಪೈಲಟ್ ಆಗಿದ್ದರು. ಅವರಿಗೆ ಭಾರತದ ಸಶಸ್ತ್ರಪಡೆಗಳಿಗೆ ಶಾಂತಿಕಾಲದಲ್ಲಿ ನೀಡುವ ಮೂರನೇ ಅತ್ಯುನ್ನತ ಗೌರವವಾದ ಶೌರ್ಯಚಕ್ರ ನೀಡಿ ಪುರಸ್ಕರಿಸಲಾಗಿತ್ತು

ಇದನ್ನೂ ಓದಿ: ಮಗಳ ಕ್ಷೇಮಕ್ಕಾಗಿ ಪಾಲಕರು ನೀಡುವ ಉಡುಗೊರೆ ವರದಕ್ಷಿಣೆ ಅಲ್ಲ: ಕೇರಳ ಹೈಕೋರ್ಟ್

Published On - 12:52 pm, Wed, 15 December 21

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ