AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಜನ್ಮದಿನವನ್ನು ಆಚರಿಸಲು ನದಿ ದಡಕ್ಕೆ ಹೋದ ನಾಲ್ವರು ನೀರಿನಲ್ಲಿ ಮುಳುಗಿ ಸಾವು

ಮುಲುಗು: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ದೀಪಾವಳಿ ದಿನದಂದು ದುರಂತವೊಂದು ಸಂಭವಿಸಿದೆ. ಗೋದಾವರಿ ನದಿಯಲ್ಲಿ ಮುಳುಗಿ ನಾಲ್ಕು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ನೇಹಿತನ ಜನ್ಮದಿನವನ್ನು ಆಚರಿಸಲು ಬಂದಿದ್ದಾಗ ಈ ಘಟನೆ ಸಂಭವಿಸಿದೆ. ಮುಲುಗು ಜಿಲ್ಲೆಯ ವೆಂಕಟಪುರಂ ಗ್ರಾಮದ ರಂಗರಾಜಪುರಂ ಕಾಲೋನಿ ಬಳಿಯ ಗೋದಾವರಿ ನದಿ ತೀರದಲ್ಲಿ ಹುಟ್ಟುಹಬ್ಬ ಆಚರಿಸಲು ಬಂದ ಯುವಕರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೃತ ಯುವಕರನ್ನು ರಾಯವರಪು ಪ್ರಕಾಶ್ (19), ತುಮ್ಮ ಕಾರ್ತಿಕ್ (19), ಕೆ ಅನ್ವೇಶ್ (20) ಮತ್ತು ಎಸ್ ಶ್ರೀಕಾಂತ್ (20) ಎಂದು ಗುರುತಿಸಲಾಗಿದೆ. […]

ಸ್ನೇಹಿತನ ಜನ್ಮದಿನವನ್ನು ಆಚರಿಸಲು ನದಿ ದಡಕ್ಕೆ ಹೋದ ನಾಲ್ವರು ನೀರಿನಲ್ಲಿ ಮುಳುಗಿ ಸಾವು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Nov 16, 2020 | 8:54 AM

Share

ಮುಲುಗು: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ದೀಪಾವಳಿ ದಿನದಂದು ದುರಂತವೊಂದು ಸಂಭವಿಸಿದೆ. ಗೋದಾವರಿ ನದಿಯಲ್ಲಿ ಮುಳುಗಿ ನಾಲ್ಕು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ನೇಹಿತನ ಜನ್ಮದಿನವನ್ನು ಆಚರಿಸಲು ಬಂದಿದ್ದಾಗ ಈ ಘಟನೆ ಸಂಭವಿಸಿದೆ.

ಮುಲುಗು ಜಿಲ್ಲೆಯ ವೆಂಕಟಪುರಂ ಗ್ರಾಮದ ರಂಗರಾಜಪುರಂ ಕಾಲೋನಿ ಬಳಿಯ ಗೋದಾವರಿ ನದಿ ತೀರದಲ್ಲಿ ಹುಟ್ಟುಹಬ್ಬ ಆಚರಿಸಲು ಬಂದ ಯುವಕರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೃತ ಯುವಕರನ್ನು ರಾಯವರಪು ಪ್ರಕಾಶ್ (19), ತುಮ್ಮ ಕಾರ್ತಿಕ್ (19), ಕೆ ಅನ್ವೇಶ್ (20) ಮತ್ತು ಎಸ್ ಶ್ರೀಕಾಂತ್ (20) ಎಂದು ಗುರುತಿಸಲಾಗಿದೆ.

ಶಶಿ ಕುಮಾರ್​ನ ಜನ್ಮದಿನವನ್ನು ಆಚರಿಸಲು 16 ಸ್ನೇಹಿತರ ಗುಂಪು ನದಿಯ ದಡಕ್ಕೆ ಬಂದಿತ್ತು. ಘಟನೆ ಸ್ಥಳವು ವೆಂಕಟಪುರಂನಿಂದ 3 ಕಿ.ಮೀ ದೂರದಲ್ಲಿದೆ. 16 ಜನರಲ್ಲಿ ನಾಲ್ವರು ಗೋದಾವರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ಯುವಕರು ಆಳದ ಅಂದಾಜನ್ನು ಲೆಕ್ಕ ಹಾಕದೆ ಈ ರೀತಿ ಸಾಹಸ ಮಾಡಲು ಹೋಗಿ ಸಾವನ್ನಪ್ಪಿದ್ದಾರೆ. ಉಳಿದ ಯುವಕರು ಪೊಲೀಸರಿಗೆ ಹಾಗೂ ಗ್ರಾಮಸ್ಥರಿಗೆ ಘಟನೆಯ ಬಗ್ಗೆ ವಿವರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಂಕಟಪುರಂ ಇನ್ಸ್‌ಪೆಕ್ಟರ್, ಕೆ.ಶಿವ ಪ್ರಸಾದ್ ಮತ್ತು ಸಬ್ ಇನ್ಸ್‌ಪೆಕ್ಟರ್ ಎಚ್.ತಿರುಪತಿ ಮತ್ತು ಇತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿ ಯುವಕರ ಶವ ಹುಡುಕಲು ಹರ ಸಾಹಸ ಪಟ್ಟಿದ್ದಾರೆ. ಕೊನೆಗೆ ಈಜುಗಾರರು ಮತ್ತು ಮೀನುಗಾರರ ಸಹಾಯದಿಂದ ದೇಹಗಳನ್ನು ಪತ್ತೆ ಮಾಡಿ ಹೊರ ತೆಗೆಯಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್