AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಪೇಟೆ: ಮನೆಗೆ ನುಗ್ಗಿದ ಮಂಗಗಳ ಹಿಂಡು ಒಂಟಿಯಾಗಿದ್ದ ಅನಾರೋಗ್ಯ ವೃದ್ಧೆಯನ್ನು ಕೊಂದುಹಾಕಿತು

Suryapet: ಸೂರ್ಯಪೇಟೆ ಜಿಲ್ಲೆಯಲ್ಲಿ ಅಮಾನುಷ ಕೃತ್ಯವೊಂದು ನಡೆದಿದೆ. ಮಾನವನ ಮೂಲಸ್ವರೂಪದ ಮಂಗಗಳ ಗುಂಪೊಂದು ಏಕಾಂಗಿಯಾಗಿದ್ದ, ಅಸ್ವಸ್ಥ ವಯೋ ವೃದ್ಧೆಯ ಪ್ರಾಣ ತೆಗೆದಿದೆ. ಯಾರೂ ಇಲ್ಲದ ವೇಳೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿ, ಪೈಶಾಚಿಕತೆ ತೋರಿವೆ ಈ ಮಂಗಗಳು.

ಸೂರ್ಯಪೇಟೆ: ಮನೆಗೆ ನುಗ್ಗಿದ ಮಂಗಗಳ ಹಿಂಡು ಒಂಟಿಯಾಗಿದ್ದ ಅನಾರೋಗ್ಯ ವೃದ್ಧೆಯನ್ನು ಕೊಂದುಹಾಕಿತು
ಮನೆಗೆ ನುಗ್ಗಿದ ಮಂಗಗಳ ಹಿಂಡು ಒಂಟಿಯಾಗಿದ್ದ ಅನಾರೋಗ್ಯ ವೃದ್ಧೆಯನ್ನು ಕೊಂದುಹಾಕಿತು
TV9 Web
| Edited By: |

Updated on: Sep 27, 2022 | 3:05 PM

Share

ಸೂರ್ಯಪೇಟೆ ಜಿಲ್ಲೆಯಲ್ಲಿ ಅಮಾನುಷ ಕೃತ್ಯವೊಂದು ನಡೆದಿದೆ. ಮಾನವನ ಮೂಲಸ್ವರೂಪದ ಮಂಗಗಳ ಗುಂಪೊಂದು ಏಕಾಂಗಿಯಾಗಿದ್ದ, ಅಸ್ವಸ್ಥ ವಯೋ ವೃದ್ಧೆಯ ಪ್ರಾಣ ತೆಗೆದಿದೆ. ಯಾರೂ ಇಲ್ಲದ ವೇಳೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿ, ಪೈಶಾಚಿಕತೆ ತೋರಿವೆ ಈ ಮಂಗಗಳು. ತೀವ್ರ ರಕ್ತಸ್ರಾವದಿಂದ ವೃದ್ಧೆ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಆತ್ಮಕೂರು (ಎಸ್) ಮಂಡಲದ ಹಳೇ ಸೂರ್ಯಪೇಟೆಯಲ್ಲಿ ಈ ಘಟನೆ ನಡೆದಿದೆ.

ಈ ಘಟನೆಯ ವಿವರ ಇಂತಿದೆ. ಹಳೆ ಸೂರ್ಯಪೇಟೆ ಗ್ರಾಮದ ವೃದ್ಧೆಯೊಬ್ಬರು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಯಾರೂ ಇಲ್ಲದ ಕಾರಣ ಮಂಗಗಳು ಆಕೆಯ ಮನೆಗೆ ನುಗ್ಗಿವೆ. ಇದೇ ವೇಳೆ ಮುದುಕಿ ಕಾಣಿಸಿಕೊಂಡಾಗ ಕೋತಿಗಳ ಗುಂಪು ಆಕೆಯ ಮೇಲೆ ದಾಳಿ ನಡೆಸಿವೆ. ಮಂಗಗಳ ಗುಂಪು ದಾಳಿ ಮಾಡಿದ್ದರಿಂದ ವೃದ್ಧೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊನೆಗೆ, ತೀವ್ರತರದ ಗಾಯಗಳಿಗೆ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ.

ಈ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ಕೋತಿಗಳ ಗುಂಪೊಂದು ವೃದ್ಧೆಯೊಬ್ಬರ ಪ್ರಾಣ ತೆಗೆದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ಮಂಗಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಗಳ ಕಾಟದಿಂದ ರಕ್ಷಿಸುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಮೊರೆ ಇಡುತ್ತಿದ್ದಾರೆ.

ಮಂಗಗಳ ಗುಂಪು ಮನೆಗಳಿಗೆ ನುಗ್ಗಿ ವಸ್ತುಗಳನ್ನು ತೆಗೆದುಕೊಂಡು ಹೋಗಿ ಬೆದರಿದವರ ಮೇಲೆ ದಾಳಿ ನಡೆಸುತ್ತಿರುವ ಆತಂಕ ವ್ಯಕ್ತವಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸ್ಪಂದಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಕೋತಿಗಳು ವೃದ್ಧೆಯನ್ನು ಕೊಂದಿರುವ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಮಂಗಗಳನ್ನು ಓಡಿಸಲು ಅವರು ಬೋನಿನೊಂದಿಗೆ ಪ್ರವೇಶಿಸಿದ್ದಾರೆ.

To read more in Telugu click here

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!