AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಪೇಟೆ: ಮನೆಗೆ ನುಗ್ಗಿದ ಮಂಗಗಳ ಹಿಂಡು ಒಂಟಿಯಾಗಿದ್ದ ಅನಾರೋಗ್ಯ ವೃದ್ಧೆಯನ್ನು ಕೊಂದುಹಾಕಿತು

Suryapet: ಸೂರ್ಯಪೇಟೆ ಜಿಲ್ಲೆಯಲ್ಲಿ ಅಮಾನುಷ ಕೃತ್ಯವೊಂದು ನಡೆದಿದೆ. ಮಾನವನ ಮೂಲಸ್ವರೂಪದ ಮಂಗಗಳ ಗುಂಪೊಂದು ಏಕಾಂಗಿಯಾಗಿದ್ದ, ಅಸ್ವಸ್ಥ ವಯೋ ವೃದ್ಧೆಯ ಪ್ರಾಣ ತೆಗೆದಿದೆ. ಯಾರೂ ಇಲ್ಲದ ವೇಳೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿ, ಪೈಶಾಚಿಕತೆ ತೋರಿವೆ ಈ ಮಂಗಗಳು.

ಸೂರ್ಯಪೇಟೆ: ಮನೆಗೆ ನುಗ್ಗಿದ ಮಂಗಗಳ ಹಿಂಡು ಒಂಟಿಯಾಗಿದ್ದ ಅನಾರೋಗ್ಯ ವೃದ್ಧೆಯನ್ನು ಕೊಂದುಹಾಕಿತು
ಮನೆಗೆ ನುಗ್ಗಿದ ಮಂಗಗಳ ಹಿಂಡು ಒಂಟಿಯಾಗಿದ್ದ ಅನಾರೋಗ್ಯ ವೃದ್ಧೆಯನ್ನು ಕೊಂದುಹಾಕಿತು
TV9 Web
| Updated By: ಸಾಧು ಶ್ರೀನಾಥ್​|

Updated on: Sep 27, 2022 | 3:05 PM

Share

ಸೂರ್ಯಪೇಟೆ ಜಿಲ್ಲೆಯಲ್ಲಿ ಅಮಾನುಷ ಕೃತ್ಯವೊಂದು ನಡೆದಿದೆ. ಮಾನವನ ಮೂಲಸ್ವರೂಪದ ಮಂಗಗಳ ಗುಂಪೊಂದು ಏಕಾಂಗಿಯಾಗಿದ್ದ, ಅಸ್ವಸ್ಥ ವಯೋ ವೃದ್ಧೆಯ ಪ್ರಾಣ ತೆಗೆದಿದೆ. ಯಾರೂ ಇಲ್ಲದ ವೇಳೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿ, ಪೈಶಾಚಿಕತೆ ತೋರಿವೆ ಈ ಮಂಗಗಳು. ತೀವ್ರ ರಕ್ತಸ್ರಾವದಿಂದ ವೃದ್ಧೆ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಆತ್ಮಕೂರು (ಎಸ್) ಮಂಡಲದ ಹಳೇ ಸೂರ್ಯಪೇಟೆಯಲ್ಲಿ ಈ ಘಟನೆ ನಡೆದಿದೆ.

ಈ ಘಟನೆಯ ವಿವರ ಇಂತಿದೆ. ಹಳೆ ಸೂರ್ಯಪೇಟೆ ಗ್ರಾಮದ ವೃದ್ಧೆಯೊಬ್ಬರು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಯಾರೂ ಇಲ್ಲದ ಕಾರಣ ಮಂಗಗಳು ಆಕೆಯ ಮನೆಗೆ ನುಗ್ಗಿವೆ. ಇದೇ ವೇಳೆ ಮುದುಕಿ ಕಾಣಿಸಿಕೊಂಡಾಗ ಕೋತಿಗಳ ಗುಂಪು ಆಕೆಯ ಮೇಲೆ ದಾಳಿ ನಡೆಸಿವೆ. ಮಂಗಗಳ ಗುಂಪು ದಾಳಿ ಮಾಡಿದ್ದರಿಂದ ವೃದ್ಧೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊನೆಗೆ, ತೀವ್ರತರದ ಗಾಯಗಳಿಗೆ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ.

ಈ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ಕೋತಿಗಳ ಗುಂಪೊಂದು ವೃದ್ಧೆಯೊಬ್ಬರ ಪ್ರಾಣ ತೆಗೆದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ಮಂಗಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಗಳ ಕಾಟದಿಂದ ರಕ್ಷಿಸುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಮೊರೆ ಇಡುತ್ತಿದ್ದಾರೆ.

ಮಂಗಗಳ ಗುಂಪು ಮನೆಗಳಿಗೆ ನುಗ್ಗಿ ವಸ್ತುಗಳನ್ನು ತೆಗೆದುಕೊಂಡು ಹೋಗಿ ಬೆದರಿದವರ ಮೇಲೆ ದಾಳಿ ನಡೆಸುತ್ತಿರುವ ಆತಂಕ ವ್ಯಕ್ತವಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸ್ಪಂದಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಕೋತಿಗಳು ವೃದ್ಧೆಯನ್ನು ಕೊಂದಿರುವ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಮಂಗಗಳನ್ನು ಓಡಿಸಲು ಅವರು ಬೋನಿನೊಂದಿಗೆ ಪ್ರವೇಶಿಸಿದ್ದಾರೆ.

To read more in Telugu click here

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ