Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ಸುಂಕದ (Goods and Services Tax - GST) ವರಮಾನವು ₹ 1.04 ಲಕ್ಷ ಕೋಟಿ ಮುಟ್ಟಿದೆ. ಹಿಂದಿನ ತಿಂಗಳು, ಅಂದರೆ ಅಕ್ಟೋಬರ್ ತಿಂಗಳಲ್ಲಿ ಜಿಎಸ್​ಟಿ ವರಮಾನವು ₹ 1.05 ಲಕ್ಷ ಕೋಟಿ ಸಂಗ್ರಹವಾಗಿತ್ತು.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 01, 2020 | 4:44 PM

ದೆಹಲಿ: ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ಸುಂಕದ (Goods and Services Tax – GST) ವರಮಾನವು ₹ 1.04 ಲಕ್ಷ ಕೋಟಿ ಮುಟ್ಟಿದೆ. ಹಿಂದಿನ ತಿಂಗಳು, ಅಂದರೆ ಅಕ್ಟೋಬರ್ ತಿಂಗಳಲ್ಲಿ ಜಿಎಸ್​ಟಿ ವರಮಾನವು ₹ 1.05 ಲಕ್ಷ ಕೋಟಿ ಸಂಗ್ರಹವಾಗಿತ್ತು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಳೆದ ಎರಡು ತಿಂಗಳಿನಿಂದ ಜಿಎಸ್​ಟಿ ವರಮಾನ ಸತತವಾಗಿ ₹ 1 ಲಕ್ಷ ಕೋಟಿ ದಾಟುತ್ತಿದೆ. ಕಳೆದ ವರ್ಷದ (2019) ನವೆಂಬರ್ ತಿಂಗಳಲ್ಲಿ ಸಂಗ್ರಹವಾಗಿದ್ದ ವರಮಾನಕ್ಕೆ ಹೋಲಿಸಿದರೆ ಇದು ಶೇ 1.4ರಷ್ಟು ಹೆಚ್ಚು.

ಈ ತಿಂಗಳಲ್ಲಿ ಸರಕುಗಳ ಆಮದಿನಿಂದ ಸಂಗ್ರಹಿಸಲಾದ ಸುಂಕವು ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಶೇ 4.9ರಷ್ಟು ಮತ್ತು ದೇಶೀಯ ವಹಿವಾಟಿನಿಂದ ಸಂಗ್ರಹಿಸಿದ ಸುಂಕವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 0.5ರಷ್ಟು ಜಾಸ್ತಿಯಿದೆ ಎಂದು ಹಣಕಾಸು ಸಚಿವಾಲಯವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಆರ್ಥಿಕ ವರ್ಷದ 12 ತಿಂಗಳಲ್ಲಿ 8 ತಿಂಗಳು ಜಿಎಸ್​ಟಿ ಸಂಗ್ರಹ ₹ 1 ಲಕ್ಷ ಕೋಟಿಗೂ ಹೆಚ್ಚಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಲಾಕ್​ಡೌನ್​ ಮತ್ತು ಆರ್ಥಿಕ ಹಿಂಜರಿತದ ಕಾರಣ ತೆರಿಗೆ ಸಂಗ್ರಹ ಕುಸಿದಿತ್ತು.

ಜಿಎಸ್​ಟಿ ಸಂಗ್ರಹ ವಿವರ: ಏಪ್ರಿಲ್: ₹ 32,172 ಕೋಟಿ, ಮೇ ₹ 62,151 ಕೋಟಿ, ಜೂನ್ ₹ 90,917 ಕೋಟಿ, ಜುಲೈ ₹ 87,422 ಕೋಟಿ, ಆಗಸ್ಟ್ ₹ 86,449 ಕೋಟಿ, ಸೆಪ್ಟೆಂಬರ್ ₹95,480 ಕೋಟಿ, ಅಕ್ಟೋಬರ್ ₹ 1,05,155 ಕೋಟಿ ಮತ್ತು ನವೆಂಬರ್​ ₹1,04,963 ಕೋಟಿ.

Published On - 4:43 pm, Tue, 1 December 20

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್