AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ಸುಂಕದ (Goods and Services Tax - GST) ವರಮಾನವು ₹ 1.04 ಲಕ್ಷ ಕೋಟಿ ಮುಟ್ಟಿದೆ. ಹಿಂದಿನ ತಿಂಗಳು, ಅಂದರೆ ಅಕ್ಟೋಬರ್ ತಿಂಗಳಲ್ಲಿ ಜಿಎಸ್​ಟಿ ವರಮಾನವು ₹ 1.05 ಲಕ್ಷ ಕೋಟಿ ಸಂಗ್ರಹವಾಗಿತ್ತು.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 01, 2020 | 4:44 PM

Share

ದೆಹಲಿ: ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ಸುಂಕದ (Goods and Services Tax – GST) ವರಮಾನವು ₹ 1.04 ಲಕ್ಷ ಕೋಟಿ ಮುಟ್ಟಿದೆ. ಹಿಂದಿನ ತಿಂಗಳು, ಅಂದರೆ ಅಕ್ಟೋಬರ್ ತಿಂಗಳಲ್ಲಿ ಜಿಎಸ್​ಟಿ ವರಮಾನವು ₹ 1.05 ಲಕ್ಷ ಕೋಟಿ ಸಂಗ್ರಹವಾಗಿತ್ತು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಳೆದ ಎರಡು ತಿಂಗಳಿನಿಂದ ಜಿಎಸ್​ಟಿ ವರಮಾನ ಸತತವಾಗಿ ₹ 1 ಲಕ್ಷ ಕೋಟಿ ದಾಟುತ್ತಿದೆ. ಕಳೆದ ವರ್ಷದ (2019) ನವೆಂಬರ್ ತಿಂಗಳಲ್ಲಿ ಸಂಗ್ರಹವಾಗಿದ್ದ ವರಮಾನಕ್ಕೆ ಹೋಲಿಸಿದರೆ ಇದು ಶೇ 1.4ರಷ್ಟು ಹೆಚ್ಚು.

ಈ ತಿಂಗಳಲ್ಲಿ ಸರಕುಗಳ ಆಮದಿನಿಂದ ಸಂಗ್ರಹಿಸಲಾದ ಸುಂಕವು ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಶೇ 4.9ರಷ್ಟು ಮತ್ತು ದೇಶೀಯ ವಹಿವಾಟಿನಿಂದ ಸಂಗ್ರಹಿಸಿದ ಸುಂಕವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 0.5ರಷ್ಟು ಜಾಸ್ತಿಯಿದೆ ಎಂದು ಹಣಕಾಸು ಸಚಿವಾಲಯವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಆರ್ಥಿಕ ವರ್ಷದ 12 ತಿಂಗಳಲ್ಲಿ 8 ತಿಂಗಳು ಜಿಎಸ್​ಟಿ ಸಂಗ್ರಹ ₹ 1 ಲಕ್ಷ ಕೋಟಿಗೂ ಹೆಚ್ಚಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಲಾಕ್​ಡೌನ್​ ಮತ್ತು ಆರ್ಥಿಕ ಹಿಂಜರಿತದ ಕಾರಣ ತೆರಿಗೆ ಸಂಗ್ರಹ ಕುಸಿದಿತ್ತು.

ಜಿಎಸ್​ಟಿ ಸಂಗ್ರಹ ವಿವರ: ಏಪ್ರಿಲ್: ₹ 32,172 ಕೋಟಿ, ಮೇ ₹ 62,151 ಕೋಟಿ, ಜೂನ್ ₹ 90,917 ಕೋಟಿ, ಜುಲೈ ₹ 87,422 ಕೋಟಿ, ಆಗಸ್ಟ್ ₹ 86,449 ಕೋಟಿ, ಸೆಪ್ಟೆಂಬರ್ ₹95,480 ಕೋಟಿ, ಅಕ್ಟೋಬರ್ ₹ 1,05,155 ಕೋಟಿ ಮತ್ತು ನವೆಂಬರ್​ ₹1,04,963 ಕೋಟಿ.

Published On - 4:43 pm, Tue, 1 December 20

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ