AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ಜಾರಿ; 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ದರ ಜಾರಿಗೆ ಬರಲಿದೆ. 4ರ ಬದಲು ಶೇ. 5 ಮತ್ತು ಶೇ. 18ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ GST ಮಂಡಳಿ ಅನುಮೋದನೆ ನೀಡಿದೆ. ಇಂದು ನಡೆದ ಜಿಎಸ್​ಟಿ ಮಂಡಳಿಯ ಸಭೆಯಲ್ಲಿ 5% ಮತ್ತು 18%ರ ತೆರಿಗೆ ಸ್ಲ್ಯಾಬ್‌ಗಳನ್ನು ಎರಡಕ್ಕೆ ಕಡಿತಗೊಳಿಸುವುದಾಗಿ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪರಿಷ್ಕೃತ GST ರಚನೆಯು ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿದೆ.

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ಜಾರಿ; 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಕೇಂದ್ರ ಸರ್ಕಾರ ಅನುಮೋದನೆ
Nirmala Sitharaman
ಸುಷ್ಮಾ ಚಕ್ರೆ
|

Updated on:Sep 03, 2025 | 11:04 PM

Share

ನವದೆಹಲಿ, ಸೆಪ್ಟೆಂಬರ್ 3: ಈ ಹಿಂದೆ ಜಾರಿಯಲ್ಲಿದ್ದ 4 ಜಿಎಸ್​ಟಿ ಸ್ಲ್ಯಾಬ್​​ಗಳನ್ನು ಕೇಂದ್ರ ಸರ್ಕಾರ 2 ಸ್ಲ್ಯಾಬ್​ಗಳಿಗೆ ಇಳಿಸಿದೆ. ಈ ಜಿಎಸ್​ಟಿ (GST) ದರಗಳಿಗೆ ಇಂದು ನಡೆದ ಜಿಎಸ್​ಟಿ ಮಂಡಳಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಧ್ಯಕ್ಷತೆಯಲ್ಲಿ ನಡೆದ GST ಮಂಡಳಿಯ 56ನೇ ಸಭೆಯು ಈ ನಿರ್ಧಾರ ತೆಗೆದುಕೊಂಡಿದೆ. ಅಸ್ತಿತ್ವದಲ್ಲಿರುವ ಶೇ. 12 ಮತ್ತು ಶೇ. 28ರ ಸ್ಲ್ಯಾಬ್‌ಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ, ಇನ್ಮುಂದೆ ಶೇ. 5 ಮತ್ತು ಶೇ. 18ರ ಸ್ಲ್ಯಾಬ್​ ದರಗಳು ಮಾತ್ರ ಜಾರಿಯಲ್ಲಿರಲಿವೆ.

ಸೆಪ್ಟೆಂಬರ್ 22ರಿಂದ GST ಮಂಡಳಿಯ ನಿರ್ಧಾರಗಳು ಜಾರಿಗೆ ಬರಲಿದೆ. ಆರೋಗ್ಯ, ಜೀವವಿಮೆ ಮೇಲಿನ ಜಿಎಸ್​ಟಿಯನ್ನು ಸಹ ರದ್ದುಪಡಿಸಲಾಗಿದೆ. ಜಿಒಎಂನ ಎಲ್ಲಾ ಶಿಫಾರಸುಗಳನ್ನು ಜಿಎಸ್ಟಿ ಮಂಡಳಿಯು ಅನುಮೋದಿಸಿದೆ. ಎಲ್ಲಾ ರಾಜ್ಯಗಳು ಈ ಪ್ರಸ್ತಾವನೆಗಳಿಗೆ ಸರ್ವಾನುಮತದಿಂದ ಒಪ್ಪಿಕೊಂಡಿವೆ. ಈ ಮೂಲಕ ದೇಶದ ಜನರಿಗೆ ಬಂಪರ್ ಕೊಡುಗೆ ನೀಡಲಾಗಿದೆ.

ಇದನ್ನೂ ಓದಿ: Car Sale: ಜಿಎಸ್‌ಟಿ ದರಗಳಲ್ಲಿ ಇಳಿಕೆ ನಿರೀಕ್ಷೆ: ಆಗಸ್ಟ್‌ನಲ್ಲಿ ವಾಹನ ಮಾರಾಟದಲ್ಲಿ ಭಾರಿ ಕುಸಿತ

ನನ್ನ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ನಮ್ಮ ಬಯಕೆಯ ಬಗ್ಗೆ ನಾನು ಮಾತನಾಡಿದ್ದೆ. ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಿಎಸ್‌ಟಿ ದರಗಳ ಸಮಗ್ರ ಮತ್ತು ತರ್ಕಬದ್ಧ ಸುಧಾರಣೆಗೆ ಕೇಂದ್ರ ಸರ್ಕಾರವು ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ.

ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್​ಟಿ ಮಂಡಳಿ, ಕೇಂದ್ರ ಸರ್ಕಾರವು ಸಲ್ಲಿಸಿದ ಜಿಎಸ್‌ಟಿ ಕಡಿತ ಮತ್ತು ಸುಧಾರಣೆಗಳ ಪ್ರಸ್ತಾವನೆಗಳನ್ನು ಸರ್ವಾನುಮತದಿಂದ ಅನುಮೋದಿಸಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಇದು ಸಾಮಾನ್ಯ ಜನರು, ರೈತರು, ಎಂಎಸ್‌ಎಂಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ.  ಈ ಸಮಗ್ರ ಸುಧಾರಣೆಗಳು ನಮ್ಮ ನಾಗರಿಕರ ಜೀವನವನ್ನು ಸುಧಾರಿಸುತ್ತದೆ ಮತ್ತು ಎಲ್ಲರಿಗೂ, ವಿಶೇಷವಾಗಿ ಸಣ್ಣ ವ್ಯಾಪಾರಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ ವ್ಯಾಪಾರ ಮಾಡುವ ಸುಲಭತೆಯನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ನಿರ್ಧಾರದಿಂದ ಕೇಂದ್ರ ಸರ್ಕಾರಕ್ಕೆ ಅಂದಾಜು 93,000 ಕೋಟಿ ರೂ. ಆದಾಯ ಕಡಿಮೆಯಾಗಲಿದೆ. ದಸರಾ ಹಬ್ಬಕ್ಕೂ ಸ್ವಲ್ಪ ಮುಂಚಿತವಾಗಿ ಅಂದರೆ ಸೆಪ್ಟೆಂಬರ್ 22ರಿಂದ ಹೊಸ ದರಗಳು ಜಾರಿಗೆ ಬರಲಿವೆ ಎಂದು ರಾಜ್ಯ ಹಣಕಾಸು ಸಚಿವರು ತಿಳಿಸಿದ್ದಾರೆ. ಮುಖ್ಯವಾಗಿ, ಯಾವುದೇ ಹೊಸ ಲೆವಿಗಳು ಅಥವಾ ಹೆಚ್ಚುವರಿ ಸೆಸ್‌ಗಳು ಇರುವುದಿಲ್ಲ ಎಂದು ಕೌನ್ಸಿಲ್ ಒಪ್ಪಿಕೊಂಡಿದೆ. ಇದು 2017ರಲ್ಲಿ GST ಜಾರಿಗೆ ಬಂದ ನಂತರದ ಅತ್ಯಂತ ಮಹತ್ವದ ತೆರಿಗೆ ಸುಧಾರಣೆಗಳಲ್ಲಿ ಒಂದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:51 pm, Wed, 3 September 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ