AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meet: ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ಉತ್ತರ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಲಿದ್ದಾರೆ. 2024-25ರ ಪೂರ್ಣ ಪ್ರಮಾಣದ ಬಜೆಟ್ ಅನ್ನು ಜುಲೈ ತಿಂಗಳ ದ್ವಿತೀಯಾರ್ಧದಲ್ಲಿ ಸಂಸತ್ತಿನಲ್ಲಿ ಮಂಡಿಸುವ ನಿರೀಕ್ಷೆಯಿದೆ. ಕೇಂದ್ರ ಬಜೆಟ್ ಮಂಡನೆಗಾಗಿ ಸಂಸತ್ತಿನ ಎರಡೂ ಸದನಗಳು ಜುಲೈ ಮೂರನೇ ವಾರದಲ್ಲಿ ಮತ್ತೆ ಸಭೆ ನಡೆಸುವ ನಿರೀಕ್ಷೆಯಿದೆ.

GST Council Meet: ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ಉತ್ತರ ಇಲ್ಲಿದೆ
ನಿರ್ಮಲಾ ಸೀತಾರಾಮನ್
ಸುಷ್ಮಾ ಚಕ್ರೆ
|

Updated on: Jun 22, 2024 | 9:42 PM

Share

ನವದೆಹಲಿ: ಇಂದು ಜಿಎಸ್‌ಟಿ ಕೌನ್ಸಿಲ್ ಸಭೆ (GST Council Meeting) ನಡೆದಿದ್ದು, ಈ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಾಹಿತಿ ನೀಡಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಅಧಿಕವಾಗಿದೆ. ಈ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಕೂಡ ಜಿಎಸ್​ಟಿ (GST)  ಅಡಿಯಲ್ಲಿ ಬರಲಿದೆಯೇ? ಎಂಬ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ನೀಡಿರುವ ಉತ್ತರ ಇಲ್ಲಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಯೊಳಗೆ ಸೇರಿಸಲು ಕೇಂದ್ರ ಸರ್ಕಾರ ಬಯಸಿದೆ. ಆದರೆ, ಅದನ್ನು ನಿರ್ಧರಿಸುವುದು ರಾಜ್ಯಗಳಿಗೆ ಬಿಟ್ಟಿದ್ದು. ಪೆಟ್ರೋಲ್ ಮತ್ತು ಡೀಸೆಲ್‌ಗೆ ಇನ್ನೂ ತೆರಿಗೆ ವಿಧಿಸಲಾಗಿಲ್ಲ. ಅದರ ಬದಲಾಗಿ, ನೈಸರ್ಗಿಕ ಅನಿಲ, ಎಟಿಎಫ್ ಜೊತೆಗೆ ಈ ಇಂಧನಗಳು ವ್ಯಾಟ್, ಕೇಂದ್ರ ಅಬಕಾರಿ ಸುಂಕ, ಕೇಂದ್ರ ಮಾರಾಟ ತೆರಿಗೆಗೆ ಒಳಪಟ್ಟಿರುತ್ತವೆ ಎಂದಿದ್ದಾರೆ.

ಇದನ್ನೂ ಓದಿ: Union Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್​ಟಿ ಕೌನ್ಸಿಲ್ ಸಭೆ

ನಾವು ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್​ಟಿ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಚರ್ಚಿಸಲಿಲ್ಲ. ಆದರೆ, ಪೆಟ್ರೋಲ್ ಮತ್ತು ಡೀಸೆಲ್, ಜಿಎಸ್‌ಟಿ ಜಾರಿಯಾದಾಗಲೂ ಈ ಹಿಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅದರ ಬಗ್ಗೆ ಮಾತನಾಡಿದ್ದು ನನಗೆ ನೆನಪಿದೆ. ರಾಜ್ಯಗಳು ಒಪ್ಪಿಗೆ ನೀಡಿದ ನಂತರ, ಅವರು ಕೌನ್ಸಿಲ್​ನಲ್ಲಿ ತೆರಿಗೆ ದರವನ್ನು ನಿರ್ಧರಿಸಬೇಕು. ಆ ನಿರ್ಧಾರವನ್ನು ತೆಗೆದುಕೊಂಡ ನಂತರ ಅದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸಭೆಯ ನಂತರದ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಉದ್ದೇಶವು ಸ್ಪಷ್ಟವಾಗಿದೆ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ಸೇರಿಸಬೇಕೆಂದು ನಾವು ಬಯಸುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ಇನ್ನೂ ತೆರಿಗೆ ವಿಧಿಸಲಾಗಿಲ್ಲ. ಬದಲಾಗಿ, ನೈಸರ್ಗಿಕ ಅನಿಲ ಮತ್ತು ಎಟಿಎಫ್ ಜೊತೆಗೆ ಈ ಇಂಧನಗಳು ವ್ಯಾಟ್, ಕೇಂದ್ರ ಅಬಕಾರಿ ಸುಂಕ ಮತ್ತು ಕೇಂದ್ರ ಮಾರಾಟ ತೆರಿಗೆಗೆ ಒಳಪಟ್ಟಿರುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ ಎಂದಿದ್ದಾರೆ.

ಇದನ್ನೂ ಓದಿ: GST Council Meeting: ಹಾಲಿನ ಕ್ಯಾನ್‌ಗಳ ಮೇಲೆ 12% ಜಿಎಸ್‌ಟಿ, ಪ್ಲಾಟ್‌ಫಾರ್ಮ್ ಟಿಕೆಟ್‌ಗೆ ವಿನಾಯಿತಿ; ನಿರ್ಮಲಾ ಸೀತಾರಾಮನ್ ಘೋಷಣೆ

18ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 24ರಂದು ಪ್ರಾರಂಭವಾಗಲಿದ್ದು, ಈ ಸಮಯದಲ್ಲಿ ಕೆಳಮನೆಯ ಹೊಸ ಸದಸ್ಯರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆಯಾಗುತ್ತಾರೆ. ಅಧಿವೇಶನದ ಮೊದಲ 3 ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅವರನ್ನು ಆಯ್ಕೆ ಮಾಡುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಮುಂದಿನ 5 ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ