AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಜಿಎಸ್‌ಟಿ ಕೌನ್ಸಿಲ್ ಮೀಟಿಂಗ್, ಕಡಿಮೆಯಾಗುತ್ತಾ ಹೊರೆ?

ದೆಹಲಿ: ದೇಶದಲ್ಲಿ ಕ್ರೂರಿ ಕೊರೊನಾ ದಾಳಿಯಿಟ್ಟ ಬಳಿಕ ಎಲ್ಲವೂ ಅಲ್ಲೋಲ ಕಲ್ಲೋಲವಾಗಿದೆ. ಅತ್ತ ಆದಾಯ ಇಲ್ಲದೆ, ಇತ್ತ ಉದ್ಯಮಗಳೂ ಉಳಿಯದೆ ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಹೊತ್ತಲ್ಲೇ ಜಿಎಸ್​ಟಿ ಸಭೆ ಕರೆಯಲಾಗಿದ್ದು, ಇಂದು ನಡೆಯಲಿರುವ ಜಿಎಸ್​ಟಿ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ. ಯಾವ ಯಾವ ಕ್ಷೇತ್ರಕ್ಕೆ ಡಿಸ್ಕೌಂಟ್ ಸಿಗುತ್ತೆ ಅನ್ನೋದೆ ಯಕ್ಷಪ್ರಶ್ನೆಯಾಗಿದೆ. ಲಕ್ಷಾಂತರ ಜನರಿಗೆ ಹಬ್ಬಿರುವ ಮಹಾಮಾರಿ. ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿರುವ ಪರಿಸ್ಥಿತಿ. ಅಂದಹಾಗೆ ನೆರೆ ರಾಷ್ಟ್ರ ಚೀನಾದಿಂದ ಇಡೀ ವಿಶ್ವಕ್ಕೆ ಹರಡಿ, ವರ್ಲ್ಡ್ ಟೂರ್ ನಂತರ […]

ಇಂದು ಜಿಎಸ್‌ಟಿ ಕೌನ್ಸಿಲ್ ಮೀಟಿಂಗ್, ಕಡಿಮೆಯಾಗುತ್ತಾ ಹೊರೆ?
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on:Jun 12, 2020 | 2:05 PM

ದೆಹಲಿ: ದೇಶದಲ್ಲಿ ಕ್ರೂರಿ ಕೊರೊನಾ ದಾಳಿಯಿಟ್ಟ ಬಳಿಕ ಎಲ್ಲವೂ ಅಲ್ಲೋಲ ಕಲ್ಲೋಲವಾಗಿದೆ. ಅತ್ತ ಆದಾಯ ಇಲ್ಲದೆ, ಇತ್ತ ಉದ್ಯಮಗಳೂ ಉಳಿಯದೆ ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಹೊತ್ತಲ್ಲೇ ಜಿಎಸ್​ಟಿ ಸಭೆ ಕರೆಯಲಾಗಿದ್ದು, ಇಂದು ನಡೆಯಲಿರುವ ಜಿಎಸ್​ಟಿ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ. ಯಾವ ಯಾವ ಕ್ಷೇತ್ರಕ್ಕೆ ಡಿಸ್ಕೌಂಟ್ ಸಿಗುತ್ತೆ ಅನ್ನೋದೆ ಯಕ್ಷಪ್ರಶ್ನೆಯಾಗಿದೆ.

ಲಕ್ಷಾಂತರ ಜನರಿಗೆ ಹಬ್ಬಿರುವ ಮಹಾಮಾರಿ. ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿರುವ ಪರಿಸ್ಥಿತಿ. ಅಂದಹಾಗೆ ನೆರೆ ರಾಷ್ಟ್ರ ಚೀನಾದಿಂದ ಇಡೀ ವಿಶ್ವಕ್ಕೆ ಹರಡಿ, ವರ್ಲ್ಡ್ ಟೂರ್ ನಂತರ ಭಾರತದಲ್ಲೂ ಭಯ ಹುಟ್ಟಿಸಿರುವ ‘ಕೊರೊನಾ’ ಸೋಂಕು ಆರ್ಥಿಕತೆಯನ್ನ ದಿಕ್ಕೆಡಿಸಿದೆ. ದೇಶದಲ್ಲಿ ಲಾಕ್​ಡೌನ್ ಪರಿಣಾಮ ಉದ್ಯಮವಲಯ ತತ್ತರಿಸಿದೆ.

ಹೋಟೆಲ್ ಸೇರಿದಂತೆ ರೆಸ್ಟೊರೆಂಟ್, ಅಂಗಡಿ, ಕೈಗಾರಿಕೆಗಳು ಲಾಕ್‌ಡೌನ್​ನಿಂದ ಬಂದ್ ಆಗಿದ್ದವು. ಆದ್ರೆ ಈಗ ಲಾಕ್​ಡೌನ್​ನ ಸಂಕೋಲೆಯಿಂದ ಮುಕ್ತಿ ಸಿಕ್ಕರೂ ತತ್ತರಿಸಿರುವ ಆರ್ಥಿಕತೆ ಸುಧಾರಿಸುತ್ತಿಲ್ಲ. ಮೊದಲಿನಂತೆ ವ್ಯಾಪಾರ ಇಲ್ಲ, ಉದ್ಯಮ ಚುರುಕಾಗಿ ನಡೆಯುತ್ತಿಲ್ಲ. ಗ್ರಾಹಕರು ಸೇವಾ ವಲಯದತ್ತ ಸುಳಿಯುತ್ತಿಲ್ಲ. ಹೀಗಾಗಿ ‘ಜಿಎಸ್‌ಟಿ’ ದರ ಕಡಿಮೆ ಮಾಡಿ ಎಂಬ ಕೂಗು ಕೇಳಿಬಂದಿದೆ. ಇಷ್ಟೆಲ್ಲಾ ನಡೆಯುತ್ತಿರುವಾಗ್ಲೇ ಇಂದು ಜಿಎಸ್‌ಟಿ ಕೌನ್ಸಿಲ್ ಸಭೆಯನ್ನ ಕರೆಯಲಾಗಿದೆ.

ಜಿಎಸ್​ಟಿ ದರ ಕಡಿಮೆ ಮಾಡುತ್ತಾ ಕೇಂದ್ರ ಸರ್ಕಾರ? ಕಳೆದ 3 ವರ್ಷದಲ್ಲೇ ಇವತ್ತಿನ ಸಭೆ ಬಹಳ ಮಹತ್ವದ್ದು. ಏಕೆಂದರೆ ಕೊರೊನಾ ವೈರಸ್ ಮತ್ತು ಲಾಕ್‌ಡೌನ್​ನ ಪರಿಣಾಮ ದೇಶದ ಎಲ್ಲಾ ಆರ್ಥಿಕ ವಲಯಗಳಿಗೂ ಹೊಡೆತ ಬಿದ್ದಿದೆ. ಇಂತಹ ಸ್ಥಿತಿಯಲ್ಲಿ ದೇಶದ ತೆರಿಗೆ ವ್ಯವಸ್ಥೆ, ತೆರಿಗೆ ದರ ಹೇಗಿರಬೇಕು ಎಂದು ನಿರ್ಧರಿಸುವ ಮಹತ್ವದ ಚರ್ಚೆ ಜಿಎಸ್‌ಟಿ ಮಂಡಳಿಯಲ್ಲಿ ನಡೆಯಲಿದೆ. ಮಾರ್ಚ್ ತಿಂಗಳ ಬಳಿಕ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಎಸ್‌ಟಿ ಮಂಡಳಿ ಸಭೆ ನಡೆಯಲಿದೆ.

ಸಭೆಯಲ್ಲಿ ಜಿಎಸ್‌ಟಿ ದರ ಕಡಿಮೆ ಮಾಡಬೇಕೇ? ಬೇಡವೇ ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಉದ್ಯಮ ವಲಯ ಸೇರಿದಂತೆ ಎಲ್ಲಾ ಕ್ಷೇತ್ರಗಳು ಸರ್ಕಾರದ ನೆರವಿನ ನಿರೀಕ್ಷೆಯಲ್ಲಿವೆ. ಇಂಥ ಹೊತ್ತಿನಲ್ಲಿ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಯುತ್ತಿದೆ. ಏಪ್ರಿಲ್​ನಲ್ಲಿ ದೇಶದಲ್ಲಿ ಜಿಎಸ್‌ಟಿ ಸಂಗ್ರಹ 49,500 ಕೋಟಿ ರೂಪಾಯಿಗೆ ಕುಸಿದಿದೆ. ಇದಕ್ಕೂ ಮೊದಲು ಪ್ರತಿ ತಿಂಗಳು 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ಜಿಎಸ್‌ಟಿ ಸಂಗ್ರಹಿಸುವ ಗುರಿ ಇತ್ತು. ಆದರೆ ಅದು ಹುಸಿಯಾಗುತ್ತಾ ಸಾಗಿದೆ. ಇಷ್ಟೆಲ್ಲದರ ನಡುವೆ ಇಂದಿನ ಜಿಎಸ್​ಟಿ ಸಭೆಯಲ್ಲಿ ಕೈಗೊಳ್ಳಬಹುದಾದ ನಿರ್ಧಾರಗಳನ್ನ ನೋಡೋದಾದ್ರೆ.

ತೈಲ, ಗ್ಯಾಸ್‌ ಜಿಎಸ್‌ಟಿ ವ್ಯಾಪ್ತಿಗೆ? ಇವತ್ತು ಮಹತ್ವದ ಜಿಎಸ್​ಟಿ ಕೌನ್ಸಿಲ್ ಸಭೆ ನಡೆದರೂ ಜಿಎಸ್‌ಟಿ ದರ ಕಡಿಮೆ ಮಾಡುವ ಸಾಧ್ಯತೆ ಇಲ್ಲ. ಅಲ್ಲದೆ ಜಿಎಸ್​ಟಿ ಕೌನ್ಸಿಲ್ ಮೀಟಿಂಗ್​ನಲ್ಲಿ ರಾಜ್ಯಗಳಿಗೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಯಬಹುದಾಗಿದೆ. ಮತ್ತೊಂದ್ಕಡೆ ಉದ್ಯಮ ವಲಯಕ್ಕೆ ಕೇಂದ್ರದಿಂದ ರಿಲೀಫ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಸಾಲ ಪಡೆಯೋ ಬಗ್ಗೆಯೂ ಮೀಟಿಂಗ್​ನಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ. ಇನ್ನುಳಿದಂತೆ ಬಹುದೊಡ್ಡ ಆದಾಯ ಮೂಲವಾಗಿರುವ ತೈಲ ಹಾಗೂ ಗ್ಯಾಸ್‌ ಅನ್ನ ಜಿಎಸ್‌ಟಿ ವ್ಯಾಪ್ತಿಗೆ ತರುವ ಪ್ರಸ್ತಾಪ ಮಂಡನೆಯಾಗಬಹುದು.

ಒಟ್ನಲ್ಲಿ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಕೈಹಿಡಿಯಬಹುದೆಂಬ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರಗಳು ಇವೆ. ಆದರೆ ಕೇಂದ್ರ ಸರ್ಕಾರಕ್ಕೂ ‘ಜಿಎಸ್​ಟಿ’ ಆದಾಯದಲ್ಲಿ ಭಾರಿ ಕೊರತೆ ಉಂಟಾಗಿದೆ. ಹೀಗಾಗಿ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸಹಾಯ ಹಸ್ತ ಡೌಟ್ ಅಂತಾನೆ ಹೇಳಬಹುದು. ಆದ್ರೆ ದೇಶದ ಉದ್ಯಮ ವಲಯಕ್ಕೆ ಹಾಗೂ ಆರ್ಥಿಕ ಚೇತರಿಕೆಗೆ ಯಾವ್ಯಾವ ಕ್ರಮ ಕೈಗೊಳ್ಳಲಾಗುತ್ತದೆ ಅನ್ನೋದನ್ನ ಕಾದು ನೋಡಬೇಕು.

Published On - 6:29 am, Fri, 12 June 20

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ