AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 28ರಂದು ಜಿಎಸ್​ಟಿ ಕೌನ್ಸಿಲ್ ಸಭೆ; ಕೊವಿಡ್ ಚಿಕಿತ್ಸೆಗೆ ಬಳಸುವ ಪರಿಕರಗಳ ಮೇಲಿನ ಜಿಎಸ್​ಟಿ ಬಗ್ಗೆ ಚರ್ಚೆ ಸಾಧ್ಯತೆ

ಪಶ್ಚಿಮ ಬಂಗಾಳ ಹಣಕಾಸು ಸಚಿವ ಅಮಿತ್ ಮಿತ್ರ ಮತ್ತು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಅವರು ವರ್ಚುವಲ್ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದರು.

ಮೇ 28ರಂದು ಜಿಎಸ್​ಟಿ ಕೌನ್ಸಿಲ್ ಸಭೆ; ಕೊವಿಡ್ ಚಿಕಿತ್ಸೆಗೆ ಬಳಸುವ ಪರಿಕರಗಳ ಮೇಲಿನ ಜಿಎಸ್​ಟಿ ಬಗ್ಗೆ ಚರ್ಚೆ ಸಾಧ್ಯತೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Aug 23, 2021 | 12:30 PM

ದೆಹಲಿ: ಜಿಎಸ್​ಟಿ ಕೌನ್ಸಿಲ್ ಮೇ 28ರಂದು ಸಭೆ ನಡೆಸಲಿದ್ದು, ಕೊವಿಡ್ ಸಂಬಂಧಿ ಔಷಧ, ಆಕ್ಸಿಜನ್ ಉಪಕರಣಗಳು ಮತ್ತು ಲಸಿಕೆ ಮೇಲಿನ ತೆರಿಗೆ ಮೊತ್ತದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಏಪ್ರಿಲ್ 1ರಂದು ಆರಂಭವಾದ ಆರ್ಥಿಕ ವರ್ಷದ ತೆರಿಗೆಯ ಕುರಿತಾಗಿಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ 43ನೇ ಜಿಎಸ್​ಟಿ ಕೌನ್ಸಿಲ್ ಸಭೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆಸಿಕೊಡಲಿದ್ದಾರೆ.

ವಿವಿಧ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು, ಕೇಂದ್ರ ಸರ್ಕಾರದ ಹಾಗೂ ರಾಜ್ಯಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಕಚೇರಿ ತನ್ನ ಟ್ವೀಟ್​ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಈ ತಿಂಗಳ ಆರಂಭದಲ್ಲಿ ಪಶ್ಚಿಮ ಬಂಗಾಳ ಹಣಕಾಸು ಸಚಿವ ಅಮಿತ್ ಮಿತ್ರ ಮತ್ತು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಅವರು ವರ್ಚುವಲ್ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದರು. ಪರಿಷತ್ತಿನ ಸಭೆ ಆರ್ಥಿಕ ವರ್ಷದ ಪ್ರತಿ ತ್ರೈಮಾಸಿಕಕ್ಕೊಮ್ಮೆಯಾದರೂ ನಡೆಯಬೇಕಿದೆ. ಆದರೆ, ಕಳೆದ ವರ್ಷ ಅಕ್ಟೋಬರ್ 5 ರಿಂದ ಈ ಸಮಿತಿ ಸಭೆ ಸೇರಿಲ್ಲ.

ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಸೋನಿಯಾ ಗಾಂಧಿ, ಜೀವರಕ್ಷಕ ಔಷಧಿಗಳು, ವೈದ್ಯಕೀಯ ಪರಿಕರಗಳು, ಕೊರೊನಾ ಚಿಕಿತ್ಸೆಗೆ ಬೇಕಾದ ವಸ್ತುಗಳು ಎಲ್ಲವೂ ಜಿಎಸ್​ಟಿಯಿಂದ ಹೊರತಾಗಿ ಇರಬೇಕು ಎಂದು ಕಳೆದ ತಿಂಗಳು ಕೇಳಿದ್ದರು. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೂಡ ಇದೇ ಬೇಡಿಕೆಯನ್ನು ಮುಂದಿಟ್ಟಿತ್ತು.

ಆದರೆ, ಕೊವಿಡ್ 19ರ ಹೋರಾಟಕ್ಕೆ ಬಳಸುತ್ತಿರುವ ವಸ್ತುಗಳ ಬೆಲೆ ಕಡಿಮೆ ಇರಲು ಲಸಿಕೆಗೆ ಶೇಕಡಾ 5ರಷ್ಟು ಮತ್ತು ಔಷಧ ಮತ್ತು ಆಕ್ಸಿಜನ್ ಕಾನ್ಸ್​ಟ್ರೇಟರ್​ಗಳ ಮೇಲೆ ಶೇಕಡಾ 12ರಷ್ಟು ತೆರಿಗೆ ಅನಿವಾರ್ಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊವಿಡ್ ಸಂಬಂಧಿತ ಔಷಧ, ಆಮ್ಲಜನಕದ ಸಿಲಿಂಡರ್​ಗಳ ಮೇಲಿನ ಜಿಎಸ್​ಟಿ ಮತ್ತು ಕಸ್ಟಮ್ ಸುಂಕ ರದ್ದುಗೊಳಿಸುವಂತೆ ಮಾಡಿರುವ ಮನವಿಗೆ ಕೇಂದ್ರ ಹಣಕಾಸು ಸಚಿವೆ 16 ಸರಣಿ ಟ್ವೀಟ್​ಗಳ ಮೂಲಕ ಪ್ರತ್ಯುತ್ತರ ನೀಡಿದ್ದರು.

ಕೊವಿಡ್ ವಿರುದ್ಧದ ಹೋರಾಟಕ್ಕೆ ಬಳಸುತ್ತಿರುವ ಈ ಉತ್ಪನ್ನಗಳಿಗೆ ಜಿಎಸ್​ಟಿಯಿಂದ (ಸರಕು ಮತ್ತು ಸೇವಾ ತೆರಿಗೆ) ಸಂಪೂರ್ಣ ವಿನಾಯಿತಿ ನೀಡಿದರೆ, ಈ ಉತ್ಪನ್ನಗಳ ದೇಶೀಯ ಉತ್ಪಾದಕರು ತಮ್ಮ ಒಳಹರಿವಿನ ಸೇವೆಗಳಿಗೆ ಪಾವತಿಸುವ ತೆರಿಗೆಯನ್ನು ಸರಿದೂಗಿಸಲು ಸಾಧ್ಯವಾಗುವುದಿಲ್ಲ. ಹಾಗಾದಲ್ಲಿ ಅಂತಿಮವಾಗಿ ವಸ್ತುವಿನ ಬೆಲೆ ಹೆಚ್ಚಿಸಬೇಕಾಗುತ್ತದೆ. ಇದು ಗ್ರಾಹಕರ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ: SWAMIH ನಿಧಿಯ ದೇಶದ ಮೊದಲ ವಸತಿ ಯೋಜನೆ ಮನೆ ಖರೀದಿದಾರರಿಗೆ ಹಸ್ತಾಂತರಿಸಿದ ನಿರ್ಮಲಾ ಸೀತಾರಾಮನ್

ಕೋವಿಡ್- 19 ಕ್ಲೇಮ್​ಗೆ ಆದ್ಯತೆ ನೀಡುವಂತೆ ನಿರ್ದೇಶಿಸಲು ಐಆರ್​ಡಿಎಐಗೆ ಸೂಚಿಸಿದ ನಿರ್ಮಲಾ ಸೀತಾರಾಮನ್

Published On - 6:48 pm, Sat, 15 May 21

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್