AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 28ರಂದು ಜಿಎಸ್​ಟಿ ಕೌನ್ಸಿಲ್ ಸಭೆ; ಕೊವಿಡ್ ಚಿಕಿತ್ಸೆಗೆ ಬಳಸುವ ಪರಿಕರಗಳ ಮೇಲಿನ ಜಿಎಸ್​ಟಿ ಬಗ್ಗೆ ಚರ್ಚೆ ಸಾಧ್ಯತೆ

ಪಶ್ಚಿಮ ಬಂಗಾಳ ಹಣಕಾಸು ಸಚಿವ ಅಮಿತ್ ಮಿತ್ರ ಮತ್ತು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಅವರು ವರ್ಚುವಲ್ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದರು.

ಮೇ 28ರಂದು ಜಿಎಸ್​ಟಿ ಕೌನ್ಸಿಲ್ ಸಭೆ; ಕೊವಿಡ್ ಚಿಕಿತ್ಸೆಗೆ ಬಳಸುವ ಪರಿಕರಗಳ ಮೇಲಿನ ಜಿಎಸ್​ಟಿ ಬಗ್ಗೆ ಚರ್ಚೆ ಸಾಧ್ಯತೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:30 PM

Share

ದೆಹಲಿ: ಜಿಎಸ್​ಟಿ ಕೌನ್ಸಿಲ್ ಮೇ 28ರಂದು ಸಭೆ ನಡೆಸಲಿದ್ದು, ಕೊವಿಡ್ ಸಂಬಂಧಿ ಔಷಧ, ಆಕ್ಸಿಜನ್ ಉಪಕರಣಗಳು ಮತ್ತು ಲಸಿಕೆ ಮೇಲಿನ ತೆರಿಗೆ ಮೊತ್ತದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಏಪ್ರಿಲ್ 1ರಂದು ಆರಂಭವಾದ ಆರ್ಥಿಕ ವರ್ಷದ ತೆರಿಗೆಯ ಕುರಿತಾಗಿಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ 43ನೇ ಜಿಎಸ್​ಟಿ ಕೌನ್ಸಿಲ್ ಸಭೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆಸಿಕೊಡಲಿದ್ದಾರೆ.

ವಿವಿಧ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು, ಕೇಂದ್ರ ಸರ್ಕಾರದ ಹಾಗೂ ರಾಜ್ಯಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಕಚೇರಿ ತನ್ನ ಟ್ವೀಟ್​ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಈ ತಿಂಗಳ ಆರಂಭದಲ್ಲಿ ಪಶ್ಚಿಮ ಬಂಗಾಳ ಹಣಕಾಸು ಸಚಿವ ಅಮಿತ್ ಮಿತ್ರ ಮತ್ತು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಅವರು ವರ್ಚುವಲ್ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದರು. ಪರಿಷತ್ತಿನ ಸಭೆ ಆರ್ಥಿಕ ವರ್ಷದ ಪ್ರತಿ ತ್ರೈಮಾಸಿಕಕ್ಕೊಮ್ಮೆಯಾದರೂ ನಡೆಯಬೇಕಿದೆ. ಆದರೆ, ಕಳೆದ ವರ್ಷ ಅಕ್ಟೋಬರ್ 5 ರಿಂದ ಈ ಸಮಿತಿ ಸಭೆ ಸೇರಿಲ್ಲ.

ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಸೋನಿಯಾ ಗಾಂಧಿ, ಜೀವರಕ್ಷಕ ಔಷಧಿಗಳು, ವೈದ್ಯಕೀಯ ಪರಿಕರಗಳು, ಕೊರೊನಾ ಚಿಕಿತ್ಸೆಗೆ ಬೇಕಾದ ವಸ್ತುಗಳು ಎಲ್ಲವೂ ಜಿಎಸ್​ಟಿಯಿಂದ ಹೊರತಾಗಿ ಇರಬೇಕು ಎಂದು ಕಳೆದ ತಿಂಗಳು ಕೇಳಿದ್ದರು. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೂಡ ಇದೇ ಬೇಡಿಕೆಯನ್ನು ಮುಂದಿಟ್ಟಿತ್ತು.

ಆದರೆ, ಕೊವಿಡ್ 19ರ ಹೋರಾಟಕ್ಕೆ ಬಳಸುತ್ತಿರುವ ವಸ್ತುಗಳ ಬೆಲೆ ಕಡಿಮೆ ಇರಲು ಲಸಿಕೆಗೆ ಶೇಕಡಾ 5ರಷ್ಟು ಮತ್ತು ಔಷಧ ಮತ್ತು ಆಕ್ಸಿಜನ್ ಕಾನ್ಸ್​ಟ್ರೇಟರ್​ಗಳ ಮೇಲೆ ಶೇಕಡಾ 12ರಷ್ಟು ತೆರಿಗೆ ಅನಿವಾರ್ಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊವಿಡ್ ಸಂಬಂಧಿತ ಔಷಧ, ಆಮ್ಲಜನಕದ ಸಿಲಿಂಡರ್​ಗಳ ಮೇಲಿನ ಜಿಎಸ್​ಟಿ ಮತ್ತು ಕಸ್ಟಮ್ ಸುಂಕ ರದ್ದುಗೊಳಿಸುವಂತೆ ಮಾಡಿರುವ ಮನವಿಗೆ ಕೇಂದ್ರ ಹಣಕಾಸು ಸಚಿವೆ 16 ಸರಣಿ ಟ್ವೀಟ್​ಗಳ ಮೂಲಕ ಪ್ರತ್ಯುತ್ತರ ನೀಡಿದ್ದರು.

ಕೊವಿಡ್ ವಿರುದ್ಧದ ಹೋರಾಟಕ್ಕೆ ಬಳಸುತ್ತಿರುವ ಈ ಉತ್ಪನ್ನಗಳಿಗೆ ಜಿಎಸ್​ಟಿಯಿಂದ (ಸರಕು ಮತ್ತು ಸೇವಾ ತೆರಿಗೆ) ಸಂಪೂರ್ಣ ವಿನಾಯಿತಿ ನೀಡಿದರೆ, ಈ ಉತ್ಪನ್ನಗಳ ದೇಶೀಯ ಉತ್ಪಾದಕರು ತಮ್ಮ ಒಳಹರಿವಿನ ಸೇವೆಗಳಿಗೆ ಪಾವತಿಸುವ ತೆರಿಗೆಯನ್ನು ಸರಿದೂಗಿಸಲು ಸಾಧ್ಯವಾಗುವುದಿಲ್ಲ. ಹಾಗಾದಲ್ಲಿ ಅಂತಿಮವಾಗಿ ವಸ್ತುವಿನ ಬೆಲೆ ಹೆಚ್ಚಿಸಬೇಕಾಗುತ್ತದೆ. ಇದು ಗ್ರಾಹಕರ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ: SWAMIH ನಿಧಿಯ ದೇಶದ ಮೊದಲ ವಸತಿ ಯೋಜನೆ ಮನೆ ಖರೀದಿದಾರರಿಗೆ ಹಸ್ತಾಂತರಿಸಿದ ನಿರ್ಮಲಾ ಸೀತಾರಾಮನ್

ಕೋವಿಡ್- 19 ಕ್ಲೇಮ್​ಗೆ ಆದ್ಯತೆ ನೀಡುವಂತೆ ನಿರ್ದೇಶಿಸಲು ಐಆರ್​ಡಿಎಐಗೆ ಸೂಚಿಸಿದ ನಿರ್ಮಲಾ ಸೀತಾರಾಮನ್

Published On - 6:48 pm, Sat, 15 May 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!