AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್‌ಟಿ ಕಡಿತದ ಪ್ರಯೋಜನ ಜನಸಾಮಾನ್ಯರನ್ನು ತಲುಪುತ್ತಿವೆ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ದೀಪಾವಳಿಗೂ ಮುನ್ನ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಿಎಸ್‌ಟಿ ದರ ಕಡಿತವು ಕಾರುಗಳು ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳ ಬಂಪರ್ ಮಾರಾಟಕ್ಕೆ ಕಾರಣವಾಗಿದೆ ಎಂದು ಹೇಳಿದರು. ಜಿಎಸ್‌ಟಿ 2.0 ಸುಧಾರಣೆಗಳ ನಂತರ ಪ್ರಮುಖ ಗ್ರಾಹಕ ವಲಯಗಳಲ್ಲಿ ಭಾರತದ ದೀಪಾವಳಿ ಹಬ್ಬದ ಬೇಡಿಕೆ ಹೆಚ್ಚಾಗಿದೆ. ಜನರು ಸಂತೋಷದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ ಎಂದರು.

ಜಿಎಸ್‌ಟಿ ಕಡಿತದ ಪ್ರಯೋಜನ ಜನಸಾಮಾನ್ಯರನ್ನು ತಲುಪುತ್ತಿವೆ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
Nirmala Sitharaman
ಸುಷ್ಮಾ ಚಕ್ರೆ
|

Updated on: Oct 18, 2025 | 7:20 PM

Share

ನವದೆಹಲಿ, ಅಕ್ಟೋಬರ್ 18: ಇತ್ತೀಚಿನ ಜಿಎಸ್‌ಟಿ (GST) ದರ ಕಡಿತದಿಂದಾಗಿ ಭಾರತೀಯರಿಗೆ ಯಾವೆಲ್ಲ ಪ್ರಯೋಜನೆಗಳು ಆಗಿವೆ ಎಂಬುದರ ಕುರಿತು ವರದಿ ಕಾರ್ಡ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಪ್ರಸ್ತುತಪಡಿಸಿದ್ದಾರೆ. ಜಿಎಸ್​ಟಿ ಕಡಿತದ ಪ್ರಯೋಜನಗಳನ್ನು ಸಾಮಾನ್ಯ ಜನರಿಗೆ ವರ್ಗಾಯಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದೀಪಾವಳಿಗೆ ಮುಂಚಿತವಾಗಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಜಿಎಸ್​ಟಿ ದರ ಕಡಿತವು ವಾಹನಗಳು ಮತ್ತು ಎಲೆಕ್ಟ್ರಾನಿಕ್ಸ್‌ಗಳ ಬಂಪರ್ ಮಾರಾಟಕ್ಕೆ ಕಾರಣವಾಗಿದೆ ಎಂದು ಒತ್ತಿ ಹೇಳಿದರು.

“ಸರ್ಕಾರವು ದಿನನಿತ್ಯ ಬಳಸುವ 54 ವಸ್ತುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿತ್ತು. ಅವುಗಳಲ್ಲಿ ಪ್ರತಿಯೊಂದರಲ್ಲೂ ಜಿಎಸ್‌ಟಿ ಸುಧಾರಣೆಗಳ ನಂತರ ಜನರು ಖರೀದಿಸುವ ಪ್ರಮಾಣ ಹೆಚ್ಚಾಗಿದೆ. ನಮ್ಮ ಉದ್ದೇಶ ಈಡೇರಿದೆ. ಪ್ರಧಾನ ಮಂತ್ರಿ ಮೋದಿಯವರ ದೀಪಾವಳಿ ಉಡುಗೊರೆಯನ್ನು ಜನರಿಗೆ ತಲುಪಿಸಲಾಗಿದೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಇದನ್ನೂ ಓದಿ: Video: ಇದು ಸ್ವದೇಶಿ ಉತ್ಪನ್ನವೆಂದು ಗರ್ವದಿಂದ ಹೇಳಿ, ಜಿಎಸ್​ಟಿ ಉಳಿತಾಯ ಉತ್ಸವದಲ್ಲಿ ಪ್ರಧಾನಿ ಮೋದಿ

ಕಳೆದ ತಿಂಗಳು ಕೇಂದ್ರ ಸರ್ಕಾರವು ಜಿಎಸ್‌ಟಿ ದರವನ್ನು ಪರಿಷ್ಕರಿಸಿತ್ತು. ಆಹಾರ ಮತ್ತು ದಿನನಿತ್ಯದ ಅಗತ್ಯ ವಸ್ತುಗಳು ಹಾಗೂ ಟಿವಿಗಳು ಮತ್ತು ರೆಫ್ರಿಜರೇಟರ್‌ಗಳಂತಹ ವಸ್ತುಗಳ ಮೇಲಿನ ಜಿಎಸ್​ಟಿ ದರಗಳಲ್ಲಿ ತೀವ್ರ ಕಡಿತವನ್ನು ಘೋಷಿಸಿತ್ತು. ನವರಾತ್ರಿಯ ಆರಂಭವಾದ ಸೆಪ್ಟೆಂಬರ್ 22ರಂದು ಜಿಎಸ್‌ಟಿ ಸುಧಾರಣೆಗಳು ಜಾರಿಗೆ ಬಂದಿದ್ದವು.

ಸೆಪ್ಟೆಂಬರ್ 22ರಂದು ಜಿಎಸ್‌ಟಿ ಸುಧಾರಣೆಗಳು ಪ್ರಾರಂಭವಾದ ಮೊದಲ ದಿನವೇ ಎಸಿ ಮಾರಾಟವು ದುಪ್ಪಟ್ಟಾಗಿದೆ. ಟಿವಿ ಮಾರಾಟವು 30-35% ಹೆಚ್ಚಳವನ್ನು ಕಂಡಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕಾರು, ಬೈಕ್​ಗಳನ್ನು ಖರೀದಿಸುವ ಜನರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್​ಟಿ ಆಯ್ತು, ದೀಪಾವಳಿಗೆ ಮುನ್ನ ನಿರೀಕ್ಷಿಸಿ ಮತ್ತೊಂದು ಸುಧಾರಣಾ ಹೆಜ್ಜೆ: ನೀತಿ ಆಯೋಗ್ ಸಿಇಒ

ನಿರ್ಮಲಾ ಸೀತಾರಾಮನ್ ಹೇಳಿದ ಮುಖ್ಯಾಂಶಗಳು:

– ಎಲೆಕ್ಟ್ರಾನಿಕ್ಸ್ ವಸ್ತುಗಳು ದಾಖಲೆಯ ಮಾರಾಟವನ್ನು ಕಂಡಿವೆ. ಕಳೆದ ನವರಾತ್ರಿಗಿಂತ ಸುಮಾರು 20-25% ಹೆಚ್ಚು ಮಾರಾಟವಾಗಿದೆ.

– 85 ಇಂಚಿನ ಟಿವಿಗಳ ಸ್ಟಾಕ್ ಖಾಲಿಯಾಗಿದೆ

– GST ಸುಧಾರಣೆಗಳು ಆಹಾರ ಹಣದುಬ್ಬರದಲ್ಲಿ ಇಳಿಕೆಗೆ ಕಾರಣವಾಗಿವೆ.

– ಭಾರತದಿಂದ ಅಮೆರಿಕಕ್ಕೆ ಸ್ಮಾರ್ಟ್‌ಫೋನ್‌ಗಳ ರಫ್ತು ತನ್ನ ನೆರೆಹೊರೆಯವರನ್ನು ಮೀರಿಸಿದೆ.

– ಭಾರತದಲ್ಲಿ ನಡೆಯುತ್ತಿರುವ ಕಂಪನಿಯ ಉತ್ಪಾದನೆಯ ಸುಮಾರು 20% ಎರಡನೇ ಸೆಮಿಕಂಡಕ್ಟರ್ ಸ್ಥಾವರವು ಕಳೆದ ವಾರ ಉತ್ಪಾದನೆಯನ್ನು ಪ್ರಾರಂಭಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್