AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST revenue collection: 2021ರ ಏಪ್ರಿಲ್​ನಲ್ಲಿ ಸಾರ್ವಕಾಲಿಕ ಗರಿಷ್ಠ ಜಿಎಸ್​ಟಿ 1.41 ಲಕ್ಷ ಕೋಟಿ ರೂ. ಸಂಗ್ರಹ

2021ರ ಏಪ್ರಿಲ್ ತಿಂಗಳಲ್ಲಿ ಸಾರ್ವಕಾಲಿಕ ಗರಿಷ್ಠ ಮೊತ್ತದ ಜಿಎಸ್​ಟಿ ಆದಾಯ 1.41 ಲಕ್ಷ ಕೋಟಿ ರೂಪಾಯಿ ಸಂಗ್ರಹ ಸರ್ಕಾರಕ್ಕೆ ಆಗಿದೆ.

GST revenue collection: 2021ರ ಏಪ್ರಿಲ್​ನಲ್ಲಿ ಸಾರ್ವಕಾಲಿಕ ಗರಿಷ್ಠ ಜಿಎಸ್​ಟಿ 1.41 ಲಕ್ಷ ಕೋಟಿ ರೂ. ಸಂಗ್ರಹ
ಸಾಂದರ್ಭಿಕ ಚಿತ್ರ
Srinivas Mata
|

Updated on: May 01, 2021 | 5:36 PM

Share

ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಆದಾಯ ಸಂಗ್ರಹವು 2021ರ ಏಪ್ರಿಲ್​ನಲ್ಲಿ ಸಾರ್ವಕಾಲಿಕ ದಾಖಲೆಯನ್ನು ಮಾಡಿದೆ. ಆ ಮೂಲಕ ಮತ್ತೊಂದು ಎತ್ತರವನ್ನು ತಲುಪಿಕೊಂಡಿದೆ. 1,41,384 ಕೋಟಿ ರೂಪಾಯಿ ಒಟ್ಟು ಮೊತ್ತ ಸಂಗ್ರಹ ಆಗಿದೆ. ಅದರಲ್ಲಿ ಸಿಜಿಎಸ್​ಟಿ 27,837 ಕೋಟಿ ರೂ., ಎಸ್​ಜಿಎಸ್​ಟಿ 35,621 ಕೋಟಿ ರೂ., ಐಜಿಎಸ್​ಟಿ 68,481 ಕೋಟಿ ರೂಪಾಯಿ ಸಂಗ್ರಹ ಆಗಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಿಂದ ತಿಳಿದುಬಂದಿದೆ. ಅಂದಹಾಗೆ 2021ರ ಏಪ್ರಿಲ್ ತಿಂಗಳ ಜಿಎಸ್​ಟಿ ಸಂಗ್ರಹ ಮೊತ್ತವು ಮಾರ್ಚ್​ ತಿಂಗಳ ದಾಖಲೆಯನ್ನೂ ಮೀರಿದೆ. “ಜಿಎಸ್​ಟಿ ಆದಾಯದ ಕಳೆದ ಆರು ತಿಂಗಳ ಚೇತರಿಕೆ ಟ್ರೆಂಡ್ ಗಮನಿಸುವುದಾದರೆ, 2021ರ ಮಾರ್ಚ್​ ತಿಂಗಳಿಗೆ ಹೋಲಿಸಿದರೆ ಏಪ್ರಿಲ್​ನಲ್ಲಿ ಶೇ 14ರಷ್ಟು ಹೆಚ್ಚು ಆದಾಯ ಬಂದಿದೆ,” ಎನ್ನಲಾಗಿದೆ.

ಏಪ್ರಿಲ್ ತಿಂಗಳಲ್ಲಿ ಸೇವೆಗಳ ಆಮದು ಸೇರಿಸಿಕೊಂಡು ದೇಶೀಯ ವಹಿವಾಟಿನಿಂದ ಕಳೆದ ತಿಂಗಳಿಗಿಂತ ಶೇ 21ರಷ್ಟು ಹೆಚ್ಚಿಗೆ ಆದಾಯ ಬಂದಿದೆ. ಕಳೆದ 7 ತಿಂಗಳಿಂದ ಸತತವಾಗಿ ಜಿಎಸ್​ಟಿ ಆದಾಯ 1 ಲಕ್ಷ ಕೋಟಿ ರೂಪಾಯಿ ದಾಟುತ್ತಿರುವುದು ಮಾತ್ರವಲ್ಲ, ಏರಿಕೆ ಕಾಣುತ್ತಲೇ ಸಾಗುತ್ತಿದೆ ಎಂದು ಸರ್ಕಾರವು ತಿಳಿಸಿದೆ. ಜಿಎಸ್​ಟಿ, ಆದಾಯತೆರಿಗೆ, ಕಸ್ಟಮ್ಸ್ ಐಟಿ ವ್ಯವಸ್ಥೆ ಹೀಗೆ ವಿವಿಧ ಮೂಲಗಳಿಂದ ತೀವ್ರವಾದ ಡೇಟಾ ವಿಶ್ಲೇಷಣೆ ಮಾಡಿರುವುದು, ನಕಲಿ ಬಿಲ್ಲಿಂಗ್​ಗಳ ಮೇಲೆ ಕಣ್ಗಾವಲು ಇಟ್ಟಿರುವುದು ಮತ್ತು ಪರಿಣಾಮಕಾರಿ ತೆರಿಗೆ ಆಡಳಿತದಿಂದ ಜಿಎಸ್​ಟಿ ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ.

ಕಳೆದ ಏಳು ತಿಂಗಳಲ್ಲಿ ಜಿಎಸ್​ಟಿ ಆದಾಯ ಸಂಗ್ರಹ ಮಾಹಿತಿ ಹೀಗಿದೆ: 2020 ಅಕ್ಟೋಬರ್: 1,05,155 ಕೋಟಿ

2020 ನವೆಂಬರ್: 1,04,963 ಕೋಟಿ

2020 ಡಿಸೆಂಬರ್: 1,15,174 ಕೋಟಿ

2021 ಜನವರಿ: 1,19,875 ಕೋಟಿ

2021 ಫೆಬ್ರವರಿ: 1,13,148 ಕೋಟಿ

2021 ಮಾರ್ಚ್: 1,23,902 ಕೋಟಿ

2021 ಏಪ್ರಿಲ್: 1,41,384 ಕೋಟಿ

ಇದನ್ನೂ ಓದಿ: ಜಿಎಸ್​ಟಿ ವಂಚನೆಯ ₹ 20,124 ಕೋಟಿ ಕೇಂದ್ರ ಸರ್ಕಾರದಿಂದ ಪತ್ತೆ: ನಿರ್ಮಲಾ ಸೀತಾರಾಮನ್

(2021 April month GST collection for government stands at 1.41 lakh crore rupees. By this made all time high collection record)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ